newsics.com
ಬೆಂಗಳೂರು :ಡೆಂಘೀ ಮಹಾಮಾರಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಮಹಿಳೆಯೊಬ್ಬರು ಬಲಿಯಾಗಿದ್ದಾರೆ.
ಹೊಸನಗರ ತಾಲೂಕಿನ ರಿಪ್ಪನ್ಪೇಟೆ ನಿವಾಸಿಯಾಗಿರೋ ರಶ್ಮಿ ಆರ್ ನಾಯಕ್ (42) ಮೃತ ಮಹಿಳೆ. ಕಳೆದ ಕಳೆದ 15-20 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇನ್ನು ವೈದ್ಯರು ಮಹಿಳೆಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದರು.
ಇಂದು ಚಿಕಿತ್ಸೆ ಫಲಿಸದೆ ರಶ್ಮಿ ಕೊನೆಯುಸಿರೆಳೆದಿದ್ದಾರೆ. ಪತಿ ಹಾಗೂ ಇಬ್ಬರು ಪುತ್ರರನ್ನು ಬಿಟ್ಟು ರಶ್ಮಿ ಅವರು ಅಗಲಿದ್ದಾರೆ. ಈಗಾಗಲೇ ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಸಾಕಷ್ಟು ಡೆಂಗ್ಯೂ ಪ್ರಕರಣ ಪತ್ತೆಯಾಗಿವೆ. ಡೆಂಘೀ ನಿಯಂತ್ರಣಕ್ಕೆ ಆರೋಗ್ಯ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ಹೊರ ಹಾಕುತ್ತಿದ್ದಾರೆ.
ಕಳೆದ 24 ಗಂಟೆಯಲ್ಲಿ 185 ಹೊಸ ಡೆಂಘೀ ಕೇಸ್ ಪತ್ತೆಯಾಗಿದ್ರೆ, ರಾಜ್ಯದಲ್ಲಿ ಒಟ್ಟು ಡೆಂಘೀ ಪ್ರಕರಣಗಳ ಸಂಖ್ಯೆ 7547ಕ್ಕೆ ಏರಿಕೆ ಆಗಿದೆ. ಒಟ್ಟು ಸಕ್ರೀಯ ಪ್ರಕರಣಗಳ ಸಂಖ್ಯೆ 346, ಇದುವರೆಗೆ ರಾಜ್ಯದಲ್ಲಿ ಡೇಂಘೀಯಿಂದ 7ಜನರು ಮೃತರಾಗಿದ್ದಾರೆ.