ಕದ್ರಿ ದೇಗುಲದಲ್ಲಿ ರಂಪಾಟ, ಅನುಚಿತ ವರ್ತನೆ: ಯುವಕ ಪೊಲೀಸ್ ವಶಕ್ಕೆ

newsics.com ಮಂಗಳೂರು: ಯುವಕನೊಬ್ಬ ಅನುಚಿತವಾಗಿ ವರ್ತಿಸಿ ಶ್ರೀಕ್ಷೇತ್ರಕ್ಕೆ ಅಪಚಾರವೆಸಗಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇಗುಲಗಳಲ್ಲಿ ಒಂದಾದ ಪುಣ್ಯಕ್ಷೇತ್ರ ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ನಡೆದಿದೆ. ಮಂಗಳೂರಿನ ಕದ್ರಿ ಶ್ರೀಮಂಜುನಾಥೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಈ ಕೃತ್ಯ ನಡೆದಿದೆ. ಬೈಕ್ ಚಲಾಯಿಸಿಕೊಂಡು ನೇರ ಕದ್ರಿ ದೇವಸ್ಥಾನದ ಪ್ರಾಂಗಣ ಪ್ರವೇಶಿಸಿದ್ದ ಯುವಕ, ಬಳಿಕ ದೇವಸ್ಥಾನದ ಒಳಗೆ ಪ್ರವೇಶ ಮಾಡಿ ರಂಪಾಟ ಮಾಡಿದ್ದಾನೆ ಎನ್ನಲಾಗಿದೆ. ಅಣ್ಣಪ್ಪ ಪಂಜುರ್ಲಿ ಗುಡಿಯ ಮುಂದೆ ಹೋಗಿ ಬಾಗಿಲಿಗೆ ಕಾಲಿನಿಂದ ಒದ್ದು ಅಪಚಾರ ಮಾಡಿದ್ದಾನೆ ಎಂದು ಹೇಳಲಾಗಿದೆ. … Continue reading ಕದ್ರಿ ದೇಗುಲದಲ್ಲಿ ರಂಪಾಟ, ಅನುಚಿತ ವರ್ತನೆ: ಯುವಕ ಪೊಲೀಸ್ ವಶಕ್ಕೆ