newsics.com
ಹೈದ್ರಾಬಾದ್: ತೆಲುಗು ಚಿತ್ರರಂಗದ ನಟ ರಾಜ್ ತರುಣ್ ತಮ್ ಗರ್ಲ್ಫ್ರೆಂಡ್ ಕಾರಣಕ್ಕೆ ಕಳೆದ ಒಂದು ವಾರದಿಂದಲೂ ಭಾರೀ ಸುದ್ದಿಯಲ್ಲಿದ್ದಾರೆ.
ರಾಜ್ ತರುಣ್ ಅವರ ಮಾಜಿ ಪ್ರೇಯಸಿ ಲಾವಣ್ಯ, ರಾಜ್ ವಿರುದ್ಧ ದೂರು ನೀಡಿದ್ದು, ರಾಜ್ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.
ಇದೀಗ ಲಾವಣ್ಯ ಆತ್ಮಹತ್ಯೆಗೆ ಯತ್ನಿಸಿದ್ದು, ಪೊಲೀಸರು ಮಧ್ಯ ಪ್ರವೇಶಿಸಿ ಲಾವಣ್ಯ ಅವರ ಆತ್ಮಹತ್ಯೆ ತಡೆದಿದ್ದಾರೆ ಎನ್ನಲಾಗಿದೆ.
ಲಾವಣ್ಯ ಶನಿವಾರ ತಡರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದು ಸೂಕ್ತ ಸಮಯಕ್ಕೆ ಪೊಲೀಸರು ಮಧ್ಯ ಪ್ರವೇಶಿಸಿ ಆತ್ಮಹತ್ಯೆ ತಡೆದಿದ್ದಾರೆ ಎನ್ನಲಾಗುತ್ತಿದೆ.
ಶನಿವಾರ ತಮ್ಮ ವಕೀಲರನ್ನು ಭೇಟಿ ಆಗಿದ್ದ ಲಾವಣ್ಯ, ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ನಡೆಯುತ್ತಿರುವ ಟ್ರೋಲಿಂಗ್, ನಟ ರಾಜ್ ತರುಣ್, ತಮ್ಮ ವಿರುದ್ಧ ಮಾಡುತ್ತಿರುವ ಷಡ್ಯಂತ್ರ ಇನ್ನಿತರ ಕಾರಣಗಳಿಂದ ನೊಂದಿರುವುದಾಗಿ ಹೇಳಿಕೊಂಡಿದ್ದರು. ತನಗೆ ಸಾವೇ ಕೊನೆಯ ದಾರಿ ಎಂದೂ ಹೇಳಿಕೊಂಡಿದ್ದರಂತೆ.
ಶನಿವಾರ ರಾತ್ರಿ ವಕೀಲರಿಗೆ ಸಂದೇಶ ಕಳಿಸಿದ್ದ ಲಾವಣ್ಯ, ‘ಈ ಪ್ರಪಂಚದಲ್ಲಿ ನನ್ನ ದಿನಗಳು ಅಂತ್ಯವಾದವು’, ‘ಈ ಮೈಂಡ್ ಗೇಮ್, ಗಾಸಿಪ್ಗಳಿಂದ ನನಗೆ ಸಾಕಾಗಿ ಹೋಗಿದೆ’ ಎಂದೆಲ್ಲ ಸಂದೇಶ ಕಳಿಸಿದ್ದರಂತೆ.
ಕೂಡಲೇ ಲಾವಣ್ಯ ಅವರ ವಕೀಲರು ನರಸಂಗಿ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಕೂಡಲೇ ಲಾವಣ್ಯ ಅವರ ಮನೆಗೆ ಧಾವಿಸಿದ ಪೊಲೀಸರು ಆಕೆಯ ಆತ್ಮಹತ್ಯೆ ಯತ್ನವನ್ನು ತಡೆದಿದ್ದಾರೆ ಎಂದು ತಿಳಿದುಬಂದಿದೆ.
ನಟ ರಾಜ್ ತರುಣ್ ವಿರುದ್ಧ ಆರೋಪ ಮಾಡಿರುವ ಲಾವಣ್ಯ, ತಾವು ಹಾಗೂ ರಾಜ್ ಕಳೆದ ಹತ್ತಕ್ಕೂ ಹೆಚ್ಚು ವರ್ಷಗಳಿಂದ ಪ್ರೇಮಿಗಳಾಗಿದ್ದು, ಆದರೆ ಇತ್ತೀಚೆಗೆ ರಾಜ್ ಬೇರೆ ನಟಿಯೊಂದಿಗೆ ಪ್ರೇಮಕ್ಕೆ ಬಿದ್ದು, ನನಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಮದುವೆಯಾಗುವುದಾಗಿ ಭರವಸೆ ನೀಡಿ ತಮ್ಮೊಂದಿಗೆ ದೈಹಿಕ ಸಂಪರ್ಕವನ್ನೂ ಬೆಳೆಸಿದ್ದಾರೆ ಎಂದೆಲ್ಲ ಲಾವಣ್ಯ ಆರೋಪ ಮಾಡಿದ್ದಾರೆ. ನರ್ಸಂಗಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ರಾಜ್ ವಿರುದ್ಧ ದೂರು ಸಹ ದಾಖಲಾಗಿದೆ.
ರಾಜ್ ತರುಣ್ ಟಾಲಿವುಡ್ನಲ್ಲಿ ಕಳೆದ ಹತ್ತು ವರ್ಷಕ್ಕೂ ಹೆಚ್ಚು ಸಮಯದಿಂದ ನಾಯಕ ನಟರಾಗಿ ಗುರುತಿಸಿಕೊಂಡಿದ್ದಾರೆ. ಲಾವಣ್ಯ ಹೇಳುತ್ತಿರುವಂತೆ, ರಾಜ್ ನಟಿಸುತ್ತಿರುವ ‘ತಿರುಗಬಡರಾ ಸ್ವಾಮಿ’ ಸಿನಿಮಾದ ನಟಿಯೊಟ್ಟಿಗೆ ರಾಜ್ ಪ್ರೇಮಕ್ಕೆ ಬಿದ್ದಿದ್ದಾರಂತೆ. ಅದರಂತೆ ‘ತಿರುಗಬಡರಾ ಸ್ವಾಮಿ’ ಸಿನಿಮಾದ ನಟಿ, ಲಾವಣ್ಯ ವಿರುದ್ಧ ದೂರು ನೀಡಿದ್ದು, ಲಾವಣ್ಯ, ತಮಗೆ ಹಾಗೂ ತಮ್ಮ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿದ್ದಾರೆ.
ತಿರುಪತಿಯಲ್ಲಿ ಮರದ ಕೊಂಬೆ ಬಿದ್ದು ಬೆಂಗಳೂರಿನ ಮಹಿಳೆಗೆ ಗಾಯ, ಆಸ್ಪತ್ರೆಗೆ ದಾಖಲು, ವಿಡಿಯೊ ನೋಡಿ
AI ತಂತ್ರಜ್ಞಾನ ಮೂಲಕ ಹೊಸ ಮೆಟ್ರೋ ಮಾರ್ಗಗಳಲ್ಲೂ ಅಪರ್ಣಾ ಧ್ವನಿಯನ್ನೇ ಉಳಿಸಿಕೊಳ್ಳಲು BMRCL ಚಿಂತನೆ
ಟ್ರಂಪ್ ಮೇಲೆ ಗುಂಡಿನ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರು, ಆಸ್ಪತ್ರೆಗೆ ದಾಖಲು