newsics.com
ಮಹಾರಾಷ್ಟ್ರದಲ್ಲಿ ಅಸ್ಸಾಂ ಮೂಲದ ಟ್ಯಾಟೂ ಕಲಾವಿದೆಯ ಹತ್ಯೆ ನಡೆದಿದೆ. ಮಹಾರಾಷ್ಟ್ರದ ಅಕೋಲಾ ಜಿಲ್ಲೆಯ ಮುರ್ತಿಜಾಪುರ್ ಪಟ್ಟಣದಲ್ಲಿ ಅಸ್ಸಾಂ ಮೂಲದ 26 ವರ್ಷದ ಯುವತಿಯ ಶವ ಪತ್ತೆಯಾಗಿದ್ದು ತಲೆಯ ಮೇಲೆ ಹಲವು ಗಾಯಗಳ ಗುರುತು ಕೂಡ ಇವೆ.
ಸಾಮಾಜಿಕ ಜಾಲತಾಣಗಳ ಮೂಲಕ ಸ್ನೇಹ ಬೆಳೆಸಿದ್ದ ಆಕೆಯ ಪ್ರಿಯಕರನೇ ಆಕೆಯನ್ನು ಹತ್ಯೆಗೈದಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ಆಕೆಯ ಗೆಳೆಯ ಪರಾರಿಯಾಗಿದ್ದು, ಆತನನ್ನು ಹಿಡಿಯುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತೆ ಶಾಂತಿಕ್ರಿಯಾ ಕಶ್ಯಪ್ ಅಲಿಯಾಸ್ ಕೋಯೆಲ್ ಶವ ಜುಲೈ 24 ರಂದು ಮೂರ್ತಿಜಾಪುರದ ಪ್ರತೀಕ್ ನಗರಲ್ಲಿರುವ ಗೆಳೆಯ ಕುನಾಲ್ ಅಲಿಯಾಸ್ ಸನ್ನಿ ಶೃಂಗಾರೆ (30) ವಾಸಿಸುತ್ತಿದ್ದ ಮನೆಯಲ್ಲಿ ಪತ್ತೆಯಾಗಿದೆ. ಚೂಪಾದ ಆಯುಧದಿಂದ ತಲೆಗೆ ತಿವಿದಿರುವ ಅನೇಕ ಗುರುತುಗಳಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶೃಂಗಾರೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಆತ ಪರಾರಿಯಾಗಿದ್ದಾನೆ.