newsics.com
ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಆಯ್ಕೆ ಆಗಿರುವ ಬಿಜೆಪಿ ಸಂಸದೆ ಕಂಗನಾ ರಣಾವತ್ ಆಯ್ಕೆಯನ್ನು ಹೈಕೋರ್ಟ್ನಲ್ಲಿ ಪ್ರಶ್ನೆ ಮಾಡಲಾಗಿದೆ. ಬೆನ್ನಲ್ಲೇ ಕೋರ್ಟ್, ಸಂಸದೆ ಕಂಗನಾಗೆ ನೋಟಿಸ್ ಜಾರಿ ಮಾಡಿದೆ.
ಕಿನ್ನೌರ್ ನಿವಾಸಿ ಲಾಯಿಕ್ ರಾಮ್ ನೇಗಿ ಕಂಗನಾ ವಿರುದ್ಧ ಅರ್ಜಿ ಸಲ್ಲಿಸಿದ್ದಾರೆ. ಕಂಗನಾ ಅವರ ಆಯ್ಕೆಯನ್ನು ರದ್ದುಗೊಳಿಸುವಂತೆ ಮನವಿ ಮಾಡಿದ್ದಾರೆ. ಈ ಲೋಕಸಭೆ ಕ್ಷೇತ್ರದಿಂದ ನಾನೂ ಕೂಡ ಸ್ಪರ್ಧಿಸಲು ಬಯಸಿದ್ದೆ. ಆದರೆ ನನ್ನ ನಾಮಪತ್ರವನ್ನು ತಪ್ಪಾಗಿ ತಿರಸ್ಕರಿಸಲಾಗಿದೆ. ಒಂದು ವೇಳೆ ನನ್ನ ನಾಮಪತ್ರವನ್ನು ಅಧಿಕಾರಿಗಳು ಸರಿಯಾಗಿ ಪರಿಶೀಲಿಸಿ ರದ್ದು ಮಾಡದಿದ್ದರೆ, ನಾನೇ ಗೆಲ್ಲುವ ಸಾಧ್ಯತೆ ಹೆಚ್ಚಿತ್ತು ಎಂದು ಅವರು ವಾದಿಸಿದ್ದಾರೆ. ಚುನಾವಣಾಧಿಕಾರಿ (ಡೆಪ್ಯುಟಿ ಕಮಿಷನರ್, ಮಂಡಿ) ತಪ್ಪಾಗಿ ರದ್ದುಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೇ ಚುನಾವಣಾ ಅಧಿಕಾರಿಯನ್ನೂ ಅವರು ಆರೋಪಿಯನ್ನಾಗಿ ಮಾಡಿದ್ದಾರೆ. ಇದರ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಜ್ಯೋತ್ಸ್ನಾ ರೇವಾಲ್.. ಆಗಸ್ಟ್ 21 ರೊಳಗೆ ಉತ್ತರ ನೀಡುವಂತೆ ಕಂಗನಾ ರಣಾವತ್ ನೋಟಿಸ್ ಜಾರಿ ಮಾಡಿದ್ದಾರೆ.