newsics.com
ಶಿರಸಿ:ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ತಮಿಳುನಾಡು ಮೂಲದ ಲಾರಿ ಚಾಲಕ ಶರವಣನ್ ಮೃತದೇಹ ಪತ್ತೆಯಾಗಿದೆ.
ಡಿಎನ್ಎ ವರದಿಯಲ್ಲಿ ಶರವಣನ್ ಬಾಡಿ ಎಂದು ತಿಳಿದುಬಂದಿದೆ. ಕಾರ್ಯಾಚರಣೆ ವೇಳೆ ಕಳೆದ ನಾಲ್ಕು ದಿನಗಳ ಹಿಂದೆ ಗಂಗೆಕೊಳದಲ್ಲಿ ಹೊಟ್ಟೆಯ ಕೆಳಭಾಗದ ದೇಹ ಮಾತ್ರ ಪತ್ತೆಯಾಗಿತ್ತು. ಇದೀಗ ತಮಿಳುನಾಡು ಮೂಲದ ಲಾರಿ ಚಾಲಕ ಶರವಣನ್ ಮೃತ ದೇಹ ಎಂದು ಉತ್ತರ ಕನ್ನಡ ಎಸ್ಪಿ ನಾರಾಯಣ್ ದೃಢ ಪಡಿಸಿದ್ದಾರೆ.
ಗುಡ್ಡ ಕುಸಿತ ದುರಂತದಲ್ಲಿ ಇಲ್ಲಿಯವರೆಗೆ ಒಟ್ಟು ಹತ್ತು ಜನರು ಮೃತಪಟ್ಟಿದ್ದು, ಎಂಟು ಜನರ ಮೃತದೇಹಗಳನ್ನು ಪತ್ತೆ ಮಾಡಲಾಗಿದೆ. ಇನ್ನುಳಿದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
https://www.newsics.com/2024/07/25/heavy-rains-in-karnataka-holiday-in-schools-and-colleges-in-this-district-on-june-26-27/