newsics.com
ಮುಂಬೈ/ಪುಣೆ(ಮಹಾರಾಷ್ಟ್ರ): ಮಹಾರಾಷ್ಟ್ರದಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಪುಣೆಯಲ್ಲಿ ಮಹಾಮಳೆಗೆ ನಾಲ್ವರು ಸಾವನ್ನಪ್ಪಿದ್ದಾರೆ. ಮುಂಬೈನ ಬಹುತೇಕ ಕಡೆ ರಸ್ತೆಗಳಲ್ಲಿ ನೀರು ತುಂಬಿಕೊಂಡ, ರಸ್ತೆಗಳಲ್ಲೇ ನೀರು ಹರಿಯುತ್ತಿರುವ ದೃಶ್ಯ ಕಂಡುಬಂದಿದೆ. ಮತ್ತೊಂದೆಡೆ ಸ್ಥಳೀಯ ರೈಲು ಸೇವೆಗಳಲ್ಲೂ ವ್ಯತ್ಯಯವಾದ ಕಾರಣ ಲಕ್ಷಾಂತರ ಜನರು ಸಮಸ್ಯೆ ಅನುಭವಿಸಿದರು. ವಿಮಾನ ಹಾರಾಟದಲ್ಲೂ ವ್ಯತ್ಯಯ ಉಂಟಾಗಿದೆ.
ಭಾರೀ ಮಳೆ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುಂಬೈ ಮತ್ತು ಉಪನಗರಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಪರಿಣಾಮ, ಹಲವು ಕಡೆಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ರಸ್ತೆಗಳು ಜಲಾವೃತವಾಗಿವೆ.
ಮುಂಬೈನ ವಿಹಾರ್ ಮತ್ತು ಮೊದಕ್ ಸಾಗರ್ ಕೆರೆ ತುಂಬಿ ಹರಿಯುತ್ತಿದ್ದು, ಮಹಾನಗರಕ್ಕೆ ನೀರು ಹರಿಸುವ ಏಳು ಜಲಾಶಯಗಳ ಪೈಕಿ 4 ಜಲಾಶಯಗಳು ಈಗಾಗಲೇ ಭರ್ತಿಯಾಗಿವೆ. ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಮುಂಬೈನಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಪುಣೆಯಲ್ಲಿಯೂ ವ್ಯಾಪಕ ಮಳೆಯಾಗುತ್ತಿದ್ದು, ಮಳೆ ಸಂಬಂಧಿ ದುರ್ಘಟನೆಗಳಿಗೆ ನಾಲ್ವರು ಬಲಿಯಾಗಿದ್ದಾರೆ. ವಿವಿಧ ಪ್ರದೇಶಗಳಲ್ಲಿ ಪ್ರವಾಹದಲ್ಲಿ ಸಿಕ್ಕಿಬಿದ್ದಿದ್ದ 400 ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಇಲ್ಲಿನ ಸಿನ್ಹಗಡ್ ಮತ್ತು ಇತರ ಪ್ರದೇಶಗಳಲ್ಲಿ ಪ್ರವಾಹದ ಪರಿಸ್ಥಿತಿ ಸೃಷ್ಟಿಯಾಗಿದ್ದು, ಈ ಭಾಗದಲ್ಲಿ ಎರಡು ಸೇನಾ ಪಡೆಗಳನ್ನು ನಿಯೋಜನೆ ಮಾಡಲಾಗಿದೆ. ಪುಣೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ಮುಂದಿನ 48 ದಿನಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಿದೆ. ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸಾರ್ವಜನಿಕರಿಗೆ ಸೂಚಿಸಿದೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರವಾಹಪೀಡಿತ ಸ್ಥಳಗಳಿಗೆ ಭೇಟಿ ನೀಡಿದ್ದಾರೆ.
ಥಾಣೆ ಜಿಲ್ಲೆಯಲ್ಲಿ 5 ಗಂಟೆ ಅವಧಿಯಲ್ಲಿ 138 ಮೀಮೀ ಗೂ ಅಧಿಕ ಮಳೆಯಾಗಿದೆ. ಮಹೇರ್ನಲ್ಲಿ 30 ಅನಾಥಶ್ರಮದಲ್ಲಿದ್ದ 30 ಮಕ್ಕಳನ್ನು ರಕ್ಷಣಾ ಸಿಬ್ಬಂದಿ ಸುರಕ್ಷಿತ ಪ್ರದೇಶಕ್ಕೆ ವರ್ಗಾಯಿಸಿದ್ದಾರೆ. ಅಂಬೇರ್ನಾಥ್ನಲ್ಲಿ ಪ್ರವಾಹದಲ್ಲಿ ಸಿಕ್ಕಿದ್ದ ವೃದ್ಧಾಶ್ರಮದ 18 ಹಿರಿಯರನ್ನು ರಕ್ಷಿಸಲಾಗಿದೆ. ಭಾರೀ ಮಳೆಗೆ ಕೊಲ್ಲಾಪುರ ಕೂಡ ಜಲಾವೃತವಾಗಿದೆ.
ಜಗತ್ತಿನ ಟಾಪ್ 100 Ice cream ಪಟ್ಟಿಯಲ್ಲಿ ಕರ್ನಾಟಕದ 2 ಸೇರಿ ಭಾರತದ 5 ಐಸ್ಕ್ರೀಂಗಳಿಗೆ ಜಾಗ!
ವೇಶ್ಯಾವಾಟಿಕೆಗೆ ರಕ್ಷಣೆ ನೀಡುವಂತೆ ಕೋರ್ಟ್ಗೆ ವಕೀಲನಿಂದ ಅರ್ಜಿ! ಕೆರಳಿದ ಹೈಕೋರ್ಟ್