newsics.com
ಬೆಂಗಳೂರು: ರಾಜಸ್ಥಾನದಿಂದ ಸಿಲಿಕಾನ್ ಸಿಟಿ ಬೆಂಗಳೂರಿಗೆ ರೈಲಿನಲ್ಲಿ ವಾರದ ಮೂರು ದಿನಗಳು ನಾಯಿ ಮಾಂಸ ಸರಬರಾಜು ಅಗ್ತಿದೆ ಎಂದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಹಾಗೂ ಮಾಂಸ ಮಾರಾಟ ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ರಾಜಸ್ಥಾನದಿಂದ ಬೆಂಗಳೂರಿಗೆ ರೈಲಿನಲ್ಲಿ ಸರಬರಾಜು ಆಗುತ್ತಿದ್ದ 4,500 ಕೆ.ಜಿ. ಮಟನ್ ಮಾಂಸ ನಾಯಿ ಮಾಂಸ ಎಂದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಆರೋಪ ಮಾಡಿದ್ದಾರೆ.
ರೈಲುಗಳಲ್ಲಿ ಅಕ್ರಮವಾಗಿ ಮಾಂಸ ಸರಬರಾಜು ಆಗುತ್ತಿದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತರು ಯಶವಂತಪುರಕ್ಕೆ ಆಗಮಿಸಿದ ಜೈಪುರ ರೈಲು ಬಂದಾಕ್ಷಣ ದಾಳಿ ಮಾಡಿದ್ದಾರೆ. ಈ ವೇಳೆ ಒಂದೆರಡು ಬಾಕ್ಸ್ಗಳನ್ನು ತೆರೆದು ನೋಡಿದ್ದು, ಅದರಲ್ಲಿ ಮಟನ್ ಮಾಂಸದ ಬದಲಾಗಿ ನಾಯಿ ಮಾಂಸ ಪತ್ತೆಯಾಗಿದೆ ಎಂದು ಹಿಂದೂ ಕಾರ್ಯಕರ್ತರು ಗಲಾಟೆ ಆರಂಭಿಸಿದ್ದಾರೆ.
ಶಿವಾಜಿನಗರದಿಂದ ಯಶವಂತಪುರ ರೈಲು ನಿಲ್ದಾಣಕ್ಕೆ ಬಂದ ಮಾಂಸ ಖರೀದಿ ವ್ಯಾಪಾರಿಗಳು, ಇದು ನಾಯಿ ಮಾಂಸವಲ್ಲ ಎಂದು ಹೇಳಿ ಬಾಕ್ಸ್ ತೆರೆದ ಹಿಂದೂ ಕಾರ್ಯಕರ್ತರ ಮೇಲೆ ದಾಳಿ ಮಾಡಲು ಮುಂದಾಗಿದ್ದರು ಎನ್ನಲಾಗಿದೆ.