newsics.com
ಬೆಂಗಳೂರು: ಕರ್ನಾಟಕ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಅವರ ಅಧಿಕಾರಾವಧಿ ಜುಲೈ 31ಕ್ಕೆ ಮುಕ್ತಾಯವಾಗಲಿದ್ದು, ರಜನೀಶ್ ಪತ್ನಿ ಶಾಲಿನಿ ರಜನೀಶ್ ಅವರು ಮುಂದಿನ ನೂತನ ಮುಖ್ಯ ಕಾರ್ಯದರ್ಶಿಯಾಗಲಿದ್ದಾರೆ.
ಶುಕ್ರವಾರ(ಜುಲೈ 26) ನಡೆದ ಸಚಿವ ಸಂಪುಟದಲ್ಲಿ ಶಾಲಿನಿ ರಜನೀಶ್ರನ್ನು ಸರ್ಕಾರದ ಸಿಎಸ್ ಆಗಿ ಮಾಡಲು ತೀರ್ಮಾನಿಸಿದೆ.
ಸಚಿವ ಸಂಪುಟ ಸಭೆ ಬಳಿಕ ಕಾನೂನು ಸಚಿವ ಎಚ್ಕೆ ಪಾಟೀಲ್ ಅವರು ಅಧಿಕೃತವಾಗಿ ಈ ಮಾಹಿತಿ ನೀಡಿದ್ದಾರೆ.
ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ಕೆ ಪಾಟೀಲ್, ರಾಜ್ಯ ಸರ್ಕಾರದ ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು 5 ದಿನದಲ್ಲಿ ನಿವೃತ್ತಿ ಆಗುತ್ತಾರೆ. ಹೀಗಾಗಿ ನೂತನ ಸಿಎಸ್ ಆಗಿ ಶಾಲಿನಿ ರಜನೀಶ್ ಅವರನ್ನು ನೇಮಿಸಲು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಅಧಿಕೃತ ಮಾಹಿತಿ ನೀಡಿದರು. ಇದರೊಂದಿಗೆ ಪತಿ ನಿವೃತ್ತಿ ಬೆನ್ನಲ್ಲೇ ಅದೇ ಹುದ್ದೆ ಪತ್ನಿಗೆ ದಕ್ಕಿದೆ.
ನೂತನ ಕಾರ್ಯದರ್ಶಿ ಯಾರು ಎಂಬ ಚರ್ಚೆ ನಡೆದಿತ್ತು. ಜ್ಯೇಷ್ಠತೆಯಲ್ಲಿ ಕ್ರಮವಾಗಿ ಕೇಂದ್ರ ಹಣಕಾಸು ಸಚಿವಾಲಯದ ಕಾರ್ಯದರ್ಶಿ ಅಜಯ್ ಸೇಠ್, ಅಭಿವೃದ್ಧಿ ಆಯುಕ್ತರಾಗಿರುವ ಶಾಲಿನಿ ರಜನೀಶ್ ಅವರ ಹೆಸರುಗಳು ಕೇಳಿಬಂದಿದ್ದವು. ಆದರೆ, ಇಬ್ಬರ ಪೈಕಿ ಶಾಲಿನಿ ರಜನೀಶ್ ಅವರೇ ಮುಖ್ಯ ಕಾರ್ಯದರ್ಶಿ ಹುದ್ದೆ ಅಲಂಕರಿಸುವ ಸಾಧ್ಯತೆ ದಟ್ಟವಾಗಿತ್ತು.
ಇದೀಗ ಶಾಲಿನಿ ರಜನೀಶ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗುವುದು ಖಚಿತವಾಗಿದೆ. 1989ನೇ ಬ್ಯಾಚ್ನ ಐಎಎಸ್ ಅಧಿಕಾರಿ ಶಾಲಿನಿ ರಜನೀಶ್ ಅವರು 2027ರ ಜೂನ್ ಅಂತ್ಯಕ್ಕೆ ನಿವೃತ್ತರಾಗಲಿದ್ದಾರೆ.
ಈ ಹಿಂದೆ ಬಿಕೆ ಭಟ್ಟಾಚಾರ್ಯ ಹಾಗೂ ತೆರೆಸಾ ಭಟ್ಟಾಚಾರ್ಯ ದಂಪತಿ ಮುಖ್ಯ ಕಾರ್ಯದರ್ಶಿ ಹುದ್ದೆ ಅಲಂಕರಿಸಿದ್ದರು.
ಮಳೆಗೆ ಮಹಾರಾಷ್ಟ್ರ ತತ್ತರ, ಜನಜೀವನ ಅಸ್ತವ್ಯಸ್ತ, ಪುಣೆಯಲ್ಲಿ ನಾಲ್ವರ ಸಾವು
ಜಗತ್ತಿನ ಟಾಪ್ 100 Ice cream ಪಟ್ಟಿಯಲ್ಲಿ ಕರ್ನಾಟಕದ 2 ಸೇರಿ ಭಾರತದ 5 ಐಸ್ಕ್ರೀಂಗಳಿಗೆ ಜಾಗ!