newsics.com
ಹೊಸಪೇಟೆ: ತುಂಗಭದ್ರಾ ಜಲಾಶಯದ 19ನೇ ಗೇಟ್ನ ಚೈನ್ ತುಂಡಾಗಿದೆ. ಸದ್ಯ ಡ್ಯಾಂ ತೀರದಲ್ಲಿ ಭಾರೀ ಅಪಾಯದ ಮುನ್ಸೂಚನೆ ಎದುರಾಗಿದೆ. ಅತ್ತ ಕ್ರೆಸ್ಟ್ ಗೇಟ್ ತುಂಡಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ಹೈ ಅಲರ್ಟ್ ಆಗಿದ್ದು, ತುಂಗಭದ್ರಾ ಜಲಾಶಯದ ವೈಕುಂಠ ಅಥಿತಿ ಗೃಹದಲ್ಲಿ ಹೈ-ವೋಲ್ಟೇಜ್ ಮೀಟಿಂಗ್ ಕರೆಯಲಾಗಿದೆ.
ಟಿಬಿ ಬೋರ್ಡ್ ಕಾರ್ಯದರ್ಶಿ ಓಆರ್ ಕೆ ರೆಡ್ಡಿ, ಮತ್ತು MD ಹಾಗೂ ಉನ್ನತ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ. ರಾತ್ರಿಯಿಂದಲೇ ಅಧಿಕಾರಿಗಳು ಸಭೆಗಳು, ಸಂಪರ್ಕ ಜೋರಾಗಿದೆ.
ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಪರಿಣಾಮ 19ನೇ ಚೈನ್ಲಿಂಕ್ ಗೇಟ್ ಕಟ್ ಆಗಿದ್ದು, ನದಿ ಪಾತ್ರದ ಜನರಿಗೆ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ. ಈಗಾಗಲೇ ಒಂದೇ ಗೇಟ್ನಿಂದ 38 ಸಾವಿರ ಕ್ಯುಸೆಕ್ ನೀರು ಹೊರಕ್ಕೆ ಹರಿಯುತ್ತಿದೆ. ಗೇಟ್ ತುಂಡರಿಸಿದ ಕಾರಣ ತುಂಗಭದ್ರಾ ಡ್ಯಾಂನಿಂದ ಒಂದು ಲಕ್ಷಕ್ಕೂ ಹೆಚ್ಚು ಕ್ಯುಸೆಕ್ ನೀರು ನದಿಗೆ ಹರಿಯಬಿಡಲಾಗುತ್ತಿದೆ. ಇದೀಗ ನದಿಗೆ ನೀರು ಹರಿಬಿಟ್ಟ ಕಾರಣ ಹಂಪಿಯ ಸ್ಮಾರಕಗಳು ಮತ್ತೊಮ್ಮೆ ಮುಳುಗಿವೆ.
ತುಂಗಭದ್ರಾ ಜಲಾಶಯ: ಮುರಿದ 19ನೇ ಗೇಟ್, ಭಾರೀ ಪ್ರಮಾಣದ ನೀರು ಹೊರಕ್ಕೆ, ನದಿ ತೀರದ ಗ್ರಾಮಗಳಿಗೆ ಪ್ರವಾಹ ಭೀತಿ