newsics.com
ಬೆಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ ಆರ್.ವಿ ದೇಶಪಾಂಡೆ ಸಿಎಂ ತವರು ಮೈಸೂರಲ್ಲೆ ಮುಖ್ಯಮಂತ್ರಿ ಆಗುವ ಆಸೆ ವ್ಯಕ್ತಪಡಿಸಿದ್ದಾರೆ. ಅಷ್ಟೆ ಅಲ್ಲದೆ ಸಿಎಂ ರಾಜೀನಾಮೆ ಕೊಡಬೇಕು ಎಂದು ಪರೋಕ್ಷವಾಗಿ ಹೇಳಿದ್ದಾರೆ.
ನನಗೂ ಆಸೆ ಇದೆ, ನಿಮ್ಮಂತ ಜನರಿಗೂ ಆಸೆ ಇದೆ. ಜೀವನದಲ್ಲಿ ಗುರಿ ಇರಬೇಕು. ನಾನು ಸಿದ್ದರಾಮಯ್ಯರಿಗಿಂತ ಎರಡು ವರ್ಷ ವಯಸ್ಸಿನಲ್ಲಿ ದೊಡ್ಡವನು. ಹೈಕಮಾಂಡ್ ಅವಕಾಶ ಕೊಟ್ಟರೂ ಸಿಎಂ ಅನುಮತಿ ಕೊಡಬೇಕು ಎಂದು ಹೇಳುವ ಮೂಲಕ ಸಿದ್ದರಾಮಯ್ಯರಿಗೆ ಮಾರ್ಮಿಕವಾಗಿ ಹೇಳಿದ್ದಾರೆ.
ಪ್ರತಿ ಮಾತಿನಲ್ಲೂ ಸಿಎಂ ತಪ್ಪು ಮಾಡಿಲ್ಲ ಎಂದು ಹೇಳುತ್ತಲೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ‘ಈ ಹಿಂದೆ ರಾಮಕೃಷ್ಣ ಹೆಗಡೆಯವರು ಪೋನ್ ಕದ್ದಾಲಿಕೆ ವಿಚಾರವಾಗಿ ರಾಜೀನಾಮೆ ಕೊಟ್ಟರು, ಆದರೀಗಾ ಪ್ರತಿದಿನ ಪೋನ್ ಕದ್ದಾಲಿಕೆ ಆಗುತ್ತಿದೆ. ಈ ಹಿಂದೆ ಮೌಲ್ಯಾಧಾರಿತ ರಾಜಕಾರಣ ಮಾಡುತ್ತಿದ್ದರು, ಅದರಂತೆ ನಡೆದುಕೊಳ್ಳುತ್ತಿದ್ದರು. ಈಗ ಅಂತಹ ಮೌಲ್ಯ ಆಧಾರಿತ ರಾಜಕೀಯ ಇಲ್ಲ ಎಂದು ಹೇಳುವ ಮೂಲಕ ಸಿಎಂ ರಾಜೀನಾಮೆಗೆ ಪರೋಕ್ಷವಾಗಿ ಕುಟುಕಿದರು. ಒಟ್ಟಾರೆ, ಸಿಎಂರನ್ನ ಸಮರ್ಥನೆ ಮಾಡಿಕೊಳ್ಳುತ್ತಲೆ ಅವರ ವಿರುದ್ಧವೇ ತಮ್ಮ ಅಸಮಾಧಾನವನ್ನ ಆರ್.ವಿ.ದೇಶಪಾಂಡೆ ಹೊರಹಾಕಿದರು.