newsics.com
ಬೆಂಗಳೂರು: ನದಿಯಲ್ಲಿ ಮುಳುಗಿ ಗ್ರಾಮ ಪಂಚಾಯತಿ ಸದಸ್ಯರೊಬ್ಬರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
ದಾವುದ್ ಘಾರಿಯಾ (67)ಮೃತ. ಮೀನು ಹಿಡಿಯಲು ಹೋಗಿದ್ದಾಗ ಈ ಅವಘಡ ಸಂಭವಿಸಿದೆ. ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಸಮೀಪ ಅಘನಾಶಿನಿ ನದಿ ಹಿನ್ನೀರಿನಲ್ಲಿ ಘಟನೆ ನಡೆದಿದೆ.
ದಾವುದ್ ಮೃತ ಗ್ರಾಮ ಪಂಚಾಯತ್ ಸದಸ್ಯ. ಬರ್ಗಿ ಗ್ರಾಮ ಪಂಚಾಯತ ಹಿರಿಯ ಸದಸ್ಯರಾಗಿದ್ದ ದಾವುದ್, ಮೀನು ಹಿಡಿಯಲು ಹೋಗಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.