newsics.com
ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ತನಿಖೆ ನಡೆಸಿ, ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ.
ಈ ಚಾರ್ಜ್ಶೀಟ್ನಲ್ಲಿರುವ ವಿಚಾರಗಳು ಈಗ ಒಂದೊಂದಾಗಿಯೇ ಹೊರಬರುತ್ತಾ ಇವೆ. ಕೊಲೆ ಪ್ರಕರಣದಲ್ಲಿ ದರ್ಶನ್ ಪಾತ್ರ ಏನು? ಅವರು ಎಷ್ಟು ಬಾರಿ ಹಲ್ಲೆ ಮಾಡಿದ್ದರು ಎನ್ನುವ ವಿಚಾರ ಕೂಡ ಈಗ ರಿವೀಲ್ ಆಗಿದೆ.
ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಪಟ್ಟಣಗೆರೆಯಲ್ಲಿರುವ ಶೆಡ್ಗೆ ಕರೆದುಕೊಂಡು ಹೋಗಲಾಗಿತ್ತು. ಇದನ್ನೆಲ್ಲ ಪ್ಲ್ಯಾನ್ ಮಾಡಿದ್ದು ದರ್ಶನ್ ಎನ್ನುವ ಆರೋಪ ಇದೆ. ಇದರಲ್ಲಿ ದರ್ಶನ್ ಪಾತ್ರ ಸಾಕಷ್ಟು ಇದೆ ಎಂದು ಚಾರ್ಜ್ಶೀಟ್ನಲ್ಲಿ ಉಲ್ಲೇಖ ಆಗಿದೆ.
ಪಟ್ಟಣಗೆರೆ ಶೆಡ್ನಲ್ಲಿ ದರ್ಶನ್ ರೇಣುಕಾ ಸ್ವಾಮಿ ಮೇಲೆ ಹಲವು ಬಾರಿ ಹಲ್ಲೆ ಮಾಡುತ್ತಾರೆ. ಪರಿಪರಿಯಾಗಿ ಬೇಡಿಕೊಂಡರೂ ಅಮಾನವೀಯವಾಗಿ ರಿಬ್ ಮುರಿದು ಹಾಕುವ ದರ್ಶನ್, ಮರ್ಮಾಂಗಕ್ಕೆ ಹೊಡೆಯುತ್ತಾರೆ. ಲಾಠಿಯಲ್ಲಿಯೂ ದರ್ಶನ್ ಹಲ್ಲೆ ಮಾಡಿದ್ದಾರೆ. ಇದೇ ವೇಳೆ ಪವಿತ್ರಾ ಚಪ್ಪಲಿಯಿಂದ ಹಲ್ಲೆ ಮಾಡುತ್ತಾರೆ. ಆ ಬಳಿಕ ದರ್ಶನ್ ಮತ್ತೆ ಹಲ್ಲೆ ಮಾಡುತ್ತಾರೆ ಎಂದು ಚಾರ್ಜ್ಶೀಟ್ನಲ್ಲಿ ನಮೂದಿಸಲಾಗಿದೆ.
ಚಳ್ಳಕೆರೆ ತಹಸೀಲ್ದಾರ್ ಜೀಪ್ಗೆ ಬೆಂಕಿಯಿಟ್ಟ ಯುವಕ: ತಾಯಿಯನ್ನು ನಿಂದಿಸಿದ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹ
ಮಾನ್ವಿ ಬಳಿ ಶಾಲಾ ವಾಹನ, KSRTC ಬಸ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳ ಸಾವು, 12 ಮಕ್ಕಳಿಗೆ ಗಾಯ
ಯುವಜನರಲ್ಲಿ ಹೆಚ್ಚಿದ ಅಂಗಾಂಗ ವೈಫಲ್ಯ: ರಾಜ್ಯದಲ್ಲಿ ಕಿಡ್ನಿ, ಲಿವರ್ಗೆ ಭಾರೀ ಬೇಡಿಕೆ
ಈ ಪೋಟೋ ನೋಡಿದ್ರೆ ಕರುಳು ಚುರಕ್ ಎನ್ನುತ್ತೆ; ರೇಣುಕಾಸ್ವಾಮಿ ಅಂಗಲಾಚುತ್ತಿರುವ ಫೋಟೋ ವೈರಲ್
ಹಾಟ್ ಫೋಟೋ ಶೇರ್ ಮಾಡಿ ಕಾಮೆಂಟ್ ಆಫ್ ಮಾಡಿದ ಜ್ಯೋತಿ ರೈ ! ಯಾಕೆ ಈ ನಿರ್ಧಾರ ಎಂದ್ರು ಫ್ಯಾನ್ಸ್