newsics.com
ಚಿತ್ರದುರ್ಗ: ಇತ್ತೀಚೆಗೆ ವಿಧಾನಸೌಧದ ಮುಂದೆ ಬೈಕ್ ಒಂದಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದ ಕಿಡಿಗೇಡಿ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯ ಪೃಥ್ವಿ ಎಂಬಾತ ಮತ್ತೆ ಹುಚ್ಚಾಟ ಮೆರೆದಿದ್ದಾನೆ.
ನಾನು ಟೆರರಿಸ್ಟ್ ಆಗುತ್ತೇನೆ ನನ್ನನ್ನು ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಸೆಲ್ನ ಪಕ್ಕದ ಸೆಲ್ಗೆ ಹಾಕಿ ಎಂದು ಪೃಥ್ವಿ ಹುಚ್ಚಾಟ ನಡೆಸಿದ್ದಾನೆ.
ಚಳ್ಳಕೆರೆ ತಾಲೂಕು ಕಚೇರಿ ಬಳಿ ನಿಲ್ಲಿಸಿದ್ದ ತಹಸೀಲ್ದಾರ್ ಜೀಪ್ಗೆ ಬೆಂಕಿ ಹಂಚಿ ವಿಕೃತಿ ಮೆರೆದಿದ್ದಾನೆ. ಈತ ಚಳ್ಳಕೆರೆ ಪಟ್ಟಣದ ಗಾಂಧಿನಗರದ ನಿವಾಸಿ. ಇತ್ತೀಚೆಗೆ ಕೆಲ ದಿನಗಳ ಹಿಂದೆ ಬೆಂಗಳೂರಿನ ವಿಧಾನಸೌಧ ಬಳಿ ಬೈಕ್ಗೆ ಬೆಂಕಿಯಿಟ್ಟಿದ್ದ. ಆಗ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ನಾನು ಪ್ರತಿಭಟನೆ ಮಾಡುವ ಉದ್ದೇಶದಿಂದ ಬೈಕ್ಗೆ ಬೆಂಕಿ ಹಚ್ಚಿದ್ದೇನೆ ಎಂದು ಹೇಳಿದ್ದ. ಆಗ ಪೊಲೀಸರು ಈತನಿಗೆ ನಾಲ್ಕು ಬಾರಿಸಿ ಬುದ್ಧಿ ಹೇಳಿ, ಮುಚ್ಚಳಿಕೆ ಬರೆಸಿಕೊಂಡು ಬೆಂಗಳೂರಿನಿಂದ ಊರಿಗೆ ಕಳಿಸಿದ್ದರು.
ಆದರೆ, ಇಷ್ಟಕ್ಕೆ ಸುಮ್ಮನಾಗಲೇ ಈಗ ಚಳ್ಳಕೆರೆಯ ತಹಶೀಲ್ದಾರ್ ಕಚೇರಿ ಮುಂದೆ ನಿಲ್ಲಿಸಿದ್ದ ಜೀಪಿಗೆ ಬೆಂಕಿ ಹಚ್ಚಿದ್ದಾನೆ.
ಕೆಲವು ದಿನಗಳ ಹಿಂದೆ ಪೃಥ್ವಿರಾಜ್ ಮೂರ್ನಾಲ್ಕು ದಿನಗಳಿಂದ ಕಾಣೆಯಾಗಿದ್ದಾನೆ ಎಂದು ಈತನ ತಾಯಿ ಮಗ ಕಾಣೆಯಾದ ದೂರು ಕೊಡಲು ಹೋಗಿದ್ದಾಗ ಚಳ್ಳಕೆರೆ ಪೊಲೀಸರು ತನ್ನ ತಾಯಿಗೆ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿದ್ದು, ಈ ಸಿಟ್ಟಿನಿಂದಲೇ ಹೀಗೆಲ್ಲ ಮಾಡುತ್ತಿರುವುದಾಗಿ ಹೇಳಿದ್ದಾನೆ.
ನನ್ನ ತಾಯಿಗೆ ನಿಂದನೆ ಮಾಡಿರುವ ಪೊಲೀಸರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಕೂಡಲೇ ತನ್ನ ತಾಯಿಗೆ ಅವಮಾನ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪ್ರತಿಭಟನೆ ಕೂಡ ಮಾಡಿದ್ದ. ಇದಕ್ಕೆ ಯಾರೂ ಸ್ಪಂದಿಸದ ಹಿನ್ನೆಲೆಯಲ್ಲಿ ನಾನು ಟೆರರಿಸ್ಟ್ ಆಗುತ್ತೇನೆ, ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್ ಪಕ್ಕದ ಸೆಲ್ಗೆ ನನ್ನನ್ನೂ ಹಾಕಿ ಎಂದು ವಿಡಿಯೋ ಮಾಡಿ ಹರಿಬಿಟ್ಟಿದ್ದಾನೆ.
ನಂತರ ಬೆಂಗಳೂರಿನ ವಿಧಾನಸೌಧದ ಮುಂದೆ ಬೈಕಿಗೆ ಬೆಂಕಿ ಹಚ್ಚಿ ಸರ್ಕಾರದ ಗಮನ ಸೆಳೆಯಲು ಮುಂದಾಗಿದ್ದ. ಈಗ ತಹಸೀಲ್ದಾರ ಜೀಪಿಗೂ ಬೆಂಕಿ ಹಚ್ಚಿದ್ದಾನೆ. ಈ ಘಟನೆಯ ಬೆನ್ನಲ್ಲಿಯೇ ಸ್ಥಳೀಯರು ಪೃಥ್ವಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಮಾನ್ವಿ ಬಳಿ ಶಾಲಾ ವಾಹನ, KSRTC ಬಸ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳ ಸಾವು, 12 ಮಕ್ಕಳಿಗೆ ಗಾಯ
ಯುವಜನರಲ್ಲಿ ಹೆಚ್ಚಿದ ಅಂಗಾಂಗ ವೈಫಲ್ಯ: ರಾಜ್ಯದಲ್ಲಿ ಕಿಡ್ನಿ, ಲಿವರ್ಗೆ ಭಾರೀ ಬೇಡಿಕೆ