newsics.com
ಬೆಂಗಳೂರು: ರುದ್ರಾಕ್ಷಿ ಮಣಿಗಳಿಂದಲೇ ಸಿದ್ಧವಾಯ್ತು 20 ಅಡಿ ಎತ್ತರದ ಗಣೇಶನ ವಿಗ್ರಹ. ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಎಮ್ಮಿಗನೂರಿನಲ್ಲಿ ಈ ಬಾರಿಯ ಗಣಪತಿ ಉಗ್ರ ನರಸಿಂಹನ ರೂಪದಲ್ಲಿ ಪ್ರತಿಷ್ಠಾಪಿಸಲ್ಪಡುತ್ತಾನೆ.
ಕೊಂಡವೀಟಿ ಪರಿಸರದಲ್ಲಿ ಶ್ರೀ ಬಾಲವಿನಾಯಕ ಯುವಕ ಮಂಡಳಿಯ ಆಶ್ರಯದಲ್ಲಿ ಕಳೆದ 33 ವರ್ಷಗಳಿಂದ ವಿನಾಯಕ ಚೌತಿ ಉತ್ಸವ ನಡೆಯುತ್ತಿದೆ.
ಪ್ರತಿವರ್ಷವೂ ಪರಿಸರ ಸ್ನೇಹಿಯಾಗಿ ಇಲ್ಲಿ ಗಣೇಶ ಉತ್ಸವ ಆಚರಿಸಲಾಗುತ್ತದೆ. ಮಣ್ಣಿನ ವಿಗ್ರಹಗಳನ್ನೇ ಪ್ರತಿಷ್ಠಾಪಿಸಲಾಗುತ್ತದೆ.
ಈ ವರ್ಷವೂ ಶ್ರೀಶೈಲಂ, ಅರುಣಾಚಲಂ, ಕಾಶಿಯಿಂದ 70 ಕೆಜಿ ರುದ್ರಾಕ್ಷಗಳನ್ನು ಸಂಗ್ರಹಿಸಿ ಸುಮಾರು 41 ದಿನಗಳ ಕಾಲ ಶ್ರಮ ವಹಿಸಿ 20 ಅಡಿ ಎತ್ತರದ ಶ್ರೀ ಉಗ್ರನರಸಿಂಹ ಸ್ವಾಮಿಯ ಅವತಾರವನ್ನು ನಿರ್ಮಿಸಲಾಗಿದೆ