newsics.com
ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ಪ್ರತಿಯೊಬ್ಬರು ಈ ಜ್ಯೋತಿಷ್ಯ, ಜಾತಕ ಅಂತ ನಂಬಿಕೆಯನ್ನು ಹೊಂದಿರುತ್ತಾರೆ. ಅದೇ ರೀತಿ ಕೆಲವರು ಈ ಜಾತಕದ ಪ್ರಕಾರ ಕೈಗೆ ಉಂಗುರವನ್ನೂ ಧರಿಸುತ್ತಾರೆ. ಕೆಲವರು ಸ್ಟೈಲಿಶ್ ಆಗಿ ಕಾಣಬೇಕೆಂಬ ಉದ್ದೇಶದಿಂದ ಈ ಉಂಗುರ ಧರಿಸುತ್ತಾರೆ.
ಒಬ್ಬ ಮನುಷ್ಯ ಆರೋಗ್ಯವಾಗಿರಬೇಕಂದ್ರೆ ರೋಗನಿರೋಧಕ ಶಕ್ತಿ ಹೆಚ್ಚಿರಬೇಕು. ರೋಗನಿರೋಧಕ ಶಕ್ತಿ ಕಡಿಮೆಯಾದರೆ ಕೆಮ್ಮು, ನೆಗಡಿ, ಕಾಲೋಚಿತ ರೋಗಗಳ ಜತೆಗೆ ಹಲವು ರೋಗಗಳು ನಮ್ಮ ದೇಹವನ್ನು ಅಂಟಿಕೊಳ್ಳುತ್ತದೆ.
ಆದರೆ ಬೆಳ್ಳಿಯ ಉಂಗುರಗಳನ್ನು ಧರಿಸುವುದರಿಂದ ನಮ್ಮ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಎನ್ನುತ್ತಾರೆ ತಜ್ಞರು. ಅನೇಕ ಜನರು ಈ ಬಗ್ಗೆ ಗೊತ್ತಿಲ್ಲದಿದ್ದರೂ ಬೆಳ್ಳಿಯ ಉಂಗುರಗಳನ್ನು ಧರಿಸುತ್ತಾರೆ.
ಬೆಳ್ಳಿಯು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಆದ್ದರಿಂದ ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ಇದು ನಿಮ್ಮನ್ನು ಸೋಂಕುಗಳಿಂದ ದೂರವಿಡುತ್ತದೆ. ದೇಹದಲ್ಲಿ ರಕ್ತ ಪರಿಚಲನೆ ಸುಧಾರಿಸುತ್ತದೆ.
ಬೆಳ್ಳಿಯ ಉಂಗುರ ಆರೋಗ್ಯದ ವಿಷಯದಲ್ಲಿ ತುಂಬಾನೇ ಪ್ರಯೋಜನವನ್ನು ನೀಡುತ್ತದೆ. ಇದು ದೇಹದಲ್ಲಿ ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ ಎಂದು ತಜ್ಞರು ಹೇಳುತ್ತಾರೆ. ದೈಹಿಕ ಆರೋಗ್ಯ ಮಾತ್ರವಲ್ಲ ಮಾನಸಿಕ ಆರೋಗ್ಯಕ್ಕೂ ಇದು ಪ್ರಯೋಜನಕಾರಿ.