newsics.com
ಹೈದರಾಬಾದ್: ಇಲ್ಲಿನ ರಾಜೀವಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಸಿಬ್ಬಂದಿ ಜತೆ ಜಗಳವಾಡಿದ ಅರೋಪದ ಮೇಲೆ ಮಾಲಿವುಡ್ ನಟ ವಿನಾಯಗನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಕೊಚ್ಚಿಯಿಂದ ಗೋವಾಗೆ ಪ್ರಯಾಣಿಸುವಾಗ ಈ ಘಟನೆ ಸಂಭವಿಸಿದ್ದು, ವಿನಾಯಗನ್ ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಗೋವಾಗೆ ಸಂಪರ್ಕ ಕಲ್ಪಿಸುವ ವಿಮಾನಕ್ಕಾಗಿ ಕಾಯುತ್ತಿದ್ದಾಗ, ಸಿಐಎಸ್ಎಫ್ ಸಿಬ್ಬಂದಿಯೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ ಎನ್ನಲಾಗಿದ್ದು, ಇದಾದ ಬಳಿಕ ವಾಗ್ವಾದ ದೈಹಿಕ ಹಲ್ಲೆವರೆಗೂ ಮುಂದುವರಿದಿದೆ ಎಂದು ವರದಿಗಳು ತಿಳಿಸಿವೆ.
ಘಟನೆಯ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲದಿದ್ದರೂ ವಾಹಿನಿಯೊಂದರ ಜತೆ ಮಾತನಾಡಿರುವ ವಿನಾಯಗನ್, ಸಿಐಎಸ್ಎಫ್ ಸಿಬ್ಬಂದಿ ತನ್ನನ್ನು ಕೋಣೆಗೆ ಕರೆದೊಯ್ದು ಥಳಿಸಿದ್ದಾರೆ. ತಾನು ತಪ್ಪು ಮಾಡಿಲ್ಲ, ನನ್ನನ್ನು ಯಾಕೆ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎನ್ನುವುದು ಗೊತ್ತಿಲ್ಲ. ಏನು ನಡೆದಿದೆ ಎನ್ನುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ಅವರು ಹೇಳಿದ್ದಾರೆ.
ವಿನಾಯಗನ್ ಮದ್ಯ ಸೇವಿಸಿದ್ದರು ಎನ್ನಲಾಗಿದ್ದು, ಅದೇ ಮತ್ತಿನಲ್ಲಿ ಸಿಬ್ಬಂದಿ ಜತೆ ವಾಗ್ವಾದಕ್ಕಿಳಿದಿದ್ದರಿಂದ ಏರ್ಪೋರ್ಟ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿ, ಕಸ್ಟಡಿಗೆ ನೀಡಿದ್ದಾರೆ ಎಂದು ವರದಿಯಾಗಿದೆ.
ಪೋಷಕರೇ ಗಮನಿಸಿ, ಸುಕನ್ಯಾ ಸಮೃದ್ಧಿ ಯೋಜನೆ ನಿಯಮ ಬದಲಾಗಿದೆ: ಮಾರ್ಗಸೂಚಿ ಪಾಲಿಸದಿದ್ದರೆ ಖಾತೆ ಬಂದ್
3 ಸಾವಿರ ಅಡಿ ಎತ್ತರದಲ್ಲಿರುವ ಈ ಪವರ್ಫುಲ್ ಗಣಪನ ಪೂಜೆಗೆ ಹೆಲಿಕಾಪ್ಟರ್ನಲ್ಲೇ ಬರ್ತಾರೆ ಅರ್ಚಕರು! ವಿಡಿಯೋ ನೋಡಿ
ಲಕ್ನೋದಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ; ಐವರ ಸಾವು, ಹಲವರ ರಕ್ಷಣೆ, ಮುಂದುವರಿದ ಕಾರ್ಯಾಚರಣೆ