newsics.com
ಚಿಕ್ಕಬಳ್ಳಾಪುರ: ಹೆಂಡತಿ ಕಪ್ಪಾಗಿದ್ದಾಳೆಂದು ಗಂಡ ಅವಮಾನ ಮಾಡುತ್ತಿದ್ದ ಕಾರಣದಿಂದ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ನಡೆದಿದೆ.
.ಮದುವೆಯಾದ 7 ತಿಂಗಳಲ್ಲೇ ಆ ಮಹಿಳೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಆಕೆಯ ಅತ್ತೆ, ಮಾವ, ಮೈದುನ, ಗಂಡ ವರದಕ್ಷಿಣೆಗಾಗಿ ತಮ್ಮ ಮಗಳನ್ನು ಪೀಡಿಸುತ್ತಿದ್ದರು ಎಂದು ಮೃತ ಮಹಿಳೆಯ ಪೋಷಕರು ಆರೋಪಿಸಿದ್ದಾರೆ
ಬಿಂದುಶ್ರೀ ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ. ಆಕೆಯ ಗಂಡ ರಾಘವೇಂದ್ರ ಹೆಚ್.ಎಂ., ಮಾವ ಎನ್.ಮುನಿರಾಜ, ಅತ್ತೆ ಲತಾ ಹಾಗೂ ನರಸಿಂಹಯ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಬಿಂದುಶ್ರೀ ಗಂಡ ರಾಘವೇಂದ್ರ ಸರ್ಕಾರಿ ಸೌಮ್ಯದ ಪ್ರತಿಷ್ಟಿತ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇದಿಷ್ಟೇ ಅಲ್ಲದೆ, ಮಗಳ ಆತ್ಮಹತ್ಯೆಯಿಂದ ಆಘಾತಗೊಂಡ ಮೃತ ಮಹಿಳೆಯ ತಂದೆ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.