newsics.com
ಬೆಂಗಳೂರು: ಕನ್ನಡ ಚಿತ್ರರಂಗದ ನಟ, ನಿರ್ದೇಶಕ ನಾಗಶೇಖರ್ ಕಾರು ಶುಕ್ರವಾರ ಅಪಘಾತಕ್ಕೀಡಾಗಿದೆ.
ಬೆಂಗಳೂರಿನ ಜ್ಞಾನ ಭಾರತಿ ಬಳಿ ಅಪಘಾತ ನಡೆದಿದ್ದು, ನಾಗಶೇಖರ್ ತೆರಳುತ್ತಿದ್ದ ಬೆಂಜ್ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು, ಸಂಪೂರ್ಣ ಜಖಂಗೊಂಡಿದೆ. ನಿರ್ದೇಶಕ ನಾಗಶೇಖರ್ಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಹಿಳೆ ಕೂಡ ಗಾಯಗೊಂಡಿದ್ದಾರೆ.
ಶುಕ್ರವಾರ ಮಧ್ಯಾಹ್ನ 1.30ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಜ್ಞಾನ ಭಾರತಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕಾರನ್ನು ವಶಕ್ಕೆ ಪಡೆದಿದ್ದಾರೆ.
ಅಪಘಾತದ ಬಳಿಕ ನಾಗಶೇಖರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಕಂಟ್ರೋಲ್ ತಪ್ಪಿ ಫುಟ್ಪಾತ್ ಮೇಲೆ ಕಾರು ಹತ್ತಿದೆ. ನಾನು ಚೆನ್ನಾಗಿಯೇ ಇದ್ದೇನೆ ಎಂದು ನಾಗಶೇಖರ್ ಹೇಳಿದ್ದಾರೆ.
ಬೈಕ್ ಡಿಕ್ಕಿ: ಬೆಂಗಳೂರಿನ ಸಾಫ್ಟ್ವೇರ್ ಎಂಜಿನಿಯರ್, ದಂತ ವೈದ್ಯೆ ಸೇರಿ ಮೂವರ ಸಾವು