newsics. com
ತುಮಕೂರು: ಗೌರಿ ಹಬ್ಬದ ಹಿನ್ನೆಲೆ ಪೂಜೆಗೆ ತೆರಳಿದ್ದ ಬಾಲಕಿ ಹಾವು ಕಡಿತದಿಂದ ಮೃತಪಟ್ಟ ಧಾರುಣ ಘಟನೆ ಕುಣಿಗಲ್ ಪಟ್ಟಣದ 22ನೇ ವಾರ್ಡ್ನಲ್ಲಿ ಶುಕ್ರವಾರ ನಡೆದಿದೆ.
ಸ್ಪಂದನ (13) ಮೃತಪಟ್ಟ ಬಾಲಕಿ. ಈಕೆ 22ನೇ ವಾರ್ಡ್ನ ಮಲ್ಲಿಪಾಳ್ಯದಲ್ಲಿ ವಾಸವಾಗಿರುವ ಪುರಸಭೆ ವಾಟರ್ ಮ್ಯಾನ್ ಕುಮಾರ್ ಎಂಬುವರ ಮಗಳು.
ಗೌರಿ ಹಬ್ಬದ ನಿಮಿತ್ತ ಪಟ್ಟಣದ ವೈಕೆ ಆರ್ ಪಾರ್ಕ್ ಬಳಿ ಇರುವ ಮುಳ್ಳುಕಟ್ಟಮ್ಮ ದೇವಾಲಯಕ್ಕೆ ಪೂಜೆಗೆ ತೆರಳಿದ್ದಳು. ಬಾಲಕಿ ದೇವಾಲಯ ಸಮೀಪದಲ್ಲಿದ್ದ ಬೆಂಚ್ ಮೇಲೆ ಕುಳಿತ್ತಿದ್ದಾಗ ಹಾವು ಕಡಿತಕ್ಕೆ ಒಳಗಾಗಿದ್ದಾಳೆ.