newsics.com
ಮಂಗಳೂರು :ಕಡಲನಗರಿ ಮಂಗಳೂರಿನಲ್ಲಿ ಭಾರೀ ಮಳೆಯ ನಡುವೆ ಕಳವು ಪ್ರಕರಣಗಳು ಹೆಚ್ಚಾಗುತ್ತಿದೆ. ಚಡ್ಡಿ ಗ್ಯಾಂಗ್ನ್ನು ಕೃತ್ಯ ನಡೆದ ಐದೇ ಗಂಟೆಯಲ್ಲಿ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಕಾಪಿಕಾಡು ಬಳಿಯ ಕೋಟೆಕಣಿ ಎಂಬಲ್ಲಿ ಮಧ್ಯರಾತ್ರಿ ವೃದ್ಧ ದಂಪತಿಗಳಿದ್ದ ಮನೆಯ ಕಿಟಕಿ ಸರಳು ಮುರಿದು ನುಗ್ಗಿ, ದಂಪತಿಯಾದ ವಿಕ್ಟರ್ ಮೆಂಡೋನ್ಸಾ(71) ಹಾಗೂ ಪ್ಯಾಟ್ರಿಷಾ ಮೆಂಡೋನ್ಸಾ(60) ಅವರ ಮೇಲೆ ಹಲ್ಲೆ ಮಾಡಿ ಲೂಟಿ ಮಾಡಿದ್ದರು. ಇದೀಗ ಆರೋಪಿಗಳಾದ ರಾಜು ಸಿಂಗ್ವಾನಿಯ (24), ಮಯೂರ್ (30), ಬಾಲಿ (22), ವಿಕ್ಕಿ (21) ಎಂಬ ನಾಲ್ವರನ್ನು ಅರೆಸ್ಟ್ ಮಾಡಿದ್ದು, ಇವರು ಮಧ್ಯಪ್ರದೇಶದವರು ಎಂಬುದು ತಿಳಿದು ಬಂದಿದೆ.
ಬರ್ಮುಡಾ ಚಡ್ಡಿ ಮತ್ತು ಬನಿಯನ್ ಧರಿಸಿದ್ದ 4 ಜನ ಯುವಕರ (ಚಡ್ಡಿ) ಗ್ಯಾಂಗ್, ಬೆಡ್ ರೂಂ ನ ಕಿಟಕಿಯ ಸರಳನ್ನು ಕಟ್ ಮಾಡಿ ಮನೆ ಒಳಗೆ ನುಗ್ಗಿತ್ತು. ಈ ವೇಳೆ 1 ಲಕ್ಷ ರೂ. ಮೌಲ್ಯದ 10 ಬ್ರಾಂಡೆಡ್ ವಾಚ್ಗಳು ಹಾಗೂ 3 ಸಾವರ ನಗದು ಹಣವನ್ನು ಸುಲಿಗೆ ಮಾಡಿದ್ದರು.
ಕೆ.ಎಸ್.ಅರ್.ಟಿ.ಸಿ ಬಸ್ಸಿನಲ್ಲಿ ವ್ಯಕ್ತಿಗಳು ಮಂಗಳೂರು ಕಡೆಗೆ ಪ್ರಯಾಣಿಸಿದ್ದು ಕಂಡು ಬಂದಿತ್ತು. ಈ ಕುರಿತು ಕೆಎಸ್ಆರ್ಟಿಸಿ ಬಸ್ ಸಿಬ್ಬಂದಿ ವಿಚಾರಿಸಿದಾಗ ಬಸ್ ಹಾಸನ ಕಡೆ ತೆರಳುತ್ತಿರುವುದು ಪತ್ತೆಯಾಗಿದೆ. ಈ ವಿಷಯವನ್ನು ಹಾಸನ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ತಿಳಿಸಿ, ಸಕಲೇಶಪುರ ಡಿವೈಎಸ್ಪಿ ನೇತೃತ್ವದಲ್ಲಿ ನಾಲ್ಕು ಜನರನ್ನು ವಶಕ್ಕೆ ಪಡೆದು, ಬಂಧಿತರಿಂದ 12 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣ, ಸ್ಯಾಮ್ ಸಂಗ್ ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ.