newsics.com
ಕಾಪು(ಉಡುಪಿ): 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸೂರ್ಯಕುಮಾರ್ ಯಾದವ್ ಮಂಗಳವಾರ ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಪತ್ನಿ ದೇವಿಶಾ ಶೆಟ್ಟಿ ಜತೆ ಆಗಮಿಸಿ ದೇವಿಯ ದರ್ಶನ ಪಡೆದರು.
ಈ ವೇಳೆ ಮಾಧ್ಯಮದವರ ಜತೆ ಮಾತನಾಡಿದ ಸೂರ್ಯಕುಮಾರ್ ಯಾದವ್, ತಾವಿಲ್ಲಿ ಸೆಲಿಬ್ರಿಟಿಯಾಗಿ ಬಂದಿಲ್ಲ, ಸಾಮಾನ್ಯ ವ್ಯಕ್ತಿಯಾಗಿ ಬಂದಿದ್ದೇನೆ ಎಂದರು.
ಕಾಪು ಮಾರಿಯಮ್ಮನ ದರ್ಶನ ಮಾಡಿದ್ದರಿಂದ ಮನಸ್ಸಿಗೆ ಬಹಳ ನೆಮ್ಮದಿಯಾಯಿತು. ಇಲ್ಲಿ ಪೂಜೆ ಸಲ್ಲಿಕೆ ಮಾಡಿ ಶಾಂತಿ ಪ್ರಾಪ್ತಿಯಾದ ಅನುಭವವಾಯಿತು. ದೇವಸ್ಥಾನದ ಜೀರ್ಣೋದ್ಧಾರ ಸಂದರ್ಭದಲ್ಲಿ ಇಲ್ಲಿಗೆ ಬರಬೇಕು ಎನ್ನುವ ಇಚ್ಛೆ ಇದೆ ಎಂದು ಸೂರ್ಯ ಹೇಳಿದ್ದಾರೆ.
ಕಾಪುದ ಅಮ್ಮ(ಕಾಪುವಿನ ತಾಯಿ) ಎಂದು ತುಳುವಿನಲ್ಲಿಯೇ ಮಾತು ಆರಂಭಿಸಿದ ಸೂರ್ಯಕುಮಾರ್ ಯಾದವ್, ನಾನೊಬ್ಬ ಸೆಲಿಬ್ರಿಟಿ ಎನ್ನುವ ಆಲೋಚನೆ ಕೂಡ ನನಗೆ ಇಲ್ಲಿ ಬಂದಿಲ್ಲ. ಸಾಮಾನ್ಯ ವ್ಯಕ್ತಿಯಾಗಿ ದೊಡ್ಡ ಜೀವನವನ್ನು ಸಾಗಿಸಬೇಕಿದೆ. ವಿಶ್ವಕಪ್ ಇಡೀ ಜೀವನವಲ್ಲ. ಅದು ಜೀವನದ ಒಂದು ಭಾಗ. ಜೀವನದಲ್ಲಿ ಇಂತಹ ಹಲವನ್ನು ನೋಡುತ್ತಾ ಸಾಗಬೇಕಿದೆ ಎಂದು ಮುಂಬೈ ಇಂಡಿಯನ್ಸ್ ತಂಡದ ವಿಸ್ಫೋಟಕ ಬ್ಯಾಟರ್ ಸೂರ್ಯ ಹೇಳಿದ್ದಾರೆ.
ಟೀಂ ಇಂಡಿಯಾ ನಾಯಕನಾಗಿ ಮತ್ತೆ ಕಾಪುವಿಗೆ ಬನ್ನಿ ಎನ್ನುವ ಅರ್ಚಕರ ಪ್ರಾರ್ಥನೆಯ ಬಗ್ಗೆ ಪ್ರತಿಕ್ರಿಯಿಸಿದ ಸೂರ್ಯಕುಮಾರ್ ಯಾದವ್, “ತಂಡದ ನಾಯಕನಾಗುವುದು ನಮ್ಮ ಕೈಯಲ್ಲಿ ಇಲ್ಲ. ಆದರೆ ದೇಶಕ್ಕಾಗಿ ಆಡುವುದಷ್ಟೇ ನಮ್ಮ ಗುರಿ. ದೇವರು ಇಚ್ಛಿಸಿದರೆ ಹಣೆಯಲ್ಲಿ ಬರೆದಂತೆ ಆಗುತ್ತದೆ. ಕರಾವಳಿಯ ಬೇರೆ ಬೇರೆ ದೇವಸ್ಥಾನಗಳಿಗೆ ಭೇಟಿ ನೀಡಿದ್ದರಿಂದ ಮನಸ್ಸಿಗೆ ಶಾಂತಿ ಸಿಕ್ಕಿದೆ ಎಂದು ಸೂರ್ಯ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಡೆಂಘೀಗೆ ಮಹಿಳೆ ಬಲಿ; 24 ಗಂಟೆಯಲ್ಲಿ 185 ಮಂದಿಗೆ ಅಟ್ಯಾಕ್
ಶಿವಲಿಂಗವನ್ನು ತಬ್ಬಿ ಕುಳಿತ ಲಾಲು ಪ್ರಸಾದ್ ಯಾದವ್ ಪುತ್ರ..Viral Video
ರಸ್ತೆ ಅಪಘಾತ: ಮಾವ, ಸೊಸೆ ಸಾವು, ತಾಯಿಗಾಗಿ ಹಂಬಲಿಸುತ್ತಿದೆ 6 ತಿಂಗಳ ಮಗು
ಕರ್ಕಾಟಕ ರಾಶಿಗೆ ಸೂರ್ಯನ ಸಂಚಾರ: ಜು.16ರಿಂದ ಈ ರಾಶಿಗಳವರಿಗೆ ಭಾರೀ ಅದೃಷ್ಟ