newsics.com
ಬೆಂಗಳೂರು: ರಾಜ್ಯದಲ್ಲಿ ಹಲವೆಡೆ ಧಾರಾಕಾರ ಮಳೆ ಮುಂದುವರೆದಿದೆ. ಶಾಲಾ, ಕಾಲೇಜುಗಳಿಗೆ ನಾಳೆ ಕೂಡ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಕೆಲವೆಡೆ ಮಳೆ ಕಡಿಯಾಗಿದ್ದರೂ ಬಿರುಗಾಳಿ ಮುಂದುವರೆದಿದೆ. ಹೀಗಾಗಿ ಧಾರವಾಡ, ಬೆಳಗಾವಿ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ ಕೂಡ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಕಡಿಮೆಯಾದ್ರೂ ಬಿರುಗಾಳಿ ಹಿನ್ನೆಲೆ ಜಿಲ್ಲೆಯ 6 ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ. ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಎನ್.ಆರ್.ಪುರ ಹಾಗೂ ಕೊಪ್ಪ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ, ಪದವಿ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.