newsics.com
ಮಂಡ್ಯ: ಪಾಂಡವಪುರದ ಅರಳಕುಪ್ಪೆ ಗ್ರಾಮದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರು ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ, ರೈತರೊಬ್ಬರ ಜಮೀನಿನಲ್ಲಿ ಭತ್ತ ನಾಟಿ ಮಾಡಿದ್ದಾರೆ.
ಭತ್ತ ನಾಟಿ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಆರ್ಎಸ್ ಡ್ಯಾಂ ಭರ್ತಿಯಾಗಿದೆ. ಹೀಗಾಗಿ ಅರಳಕುಪ್ಪೆ ಗ್ರಾಮಕ್ಕೆ ಬಂದು ಭತ್ತ ನಾಟಿ ಮಾಡುವಂತೆ ರೈತರು ಮನವಿ ಮಾಡಿದ್ದರು.
ರೈತ ಮಹಿಳೆಯರ ಜೊತೆಗೂಡಿ ಲಕ್ಷ್ಮಣ್ ಎಂಬವರ ಗದ್ದೆಯಲ್ಲಿ ಭತ್ತದ ನಾಟಿ ಮಾಡಿದ್ದೇನೆ.
ಮುಖ್ಯಮಂತ್ರಿಯಾಗಿದ್ದಾಗ ಮೊದಲ ಬಾರಿಗೆ ನಾಟಿ ಮಾಡಿದ್ದೆ. ಈಗ ಕೇಂದ್ರದ ಮಂತ್ರಿ ಆಗಿದ್ದೇನೆ. ರೈತರಿಗೆ ಆತ್ಮಸೈರ್ಯ ತುಂಬಲು ಈ ರೀತಿ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.