Monday, October 2, 2023

ಕರ್ನಾಟಕ

ನಾಳೆಯಿಂದ ಕುಮಾರ ಪರ್ವತ ಚಾರಣಕ್ಕೆ ನಿರ್ಬಂಧ

newsics.com ಸುಬ್ರಹ್ಮಣ್ಯ: ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತಕ್ಕೆ ಚಾರಣ ಹೋಗಲು ನಾಳೆಯಿಂದ(ಅ. 3) ನಿರ್ಬಂಧ ವಿಧಿಸಲಾಗಿದೆ. ಪ್ರಸ್ತುತ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಯ ಪ್ರಮಾಣ ಹೆಚ್ಚಿರುವ ಕಾರಣ ಹಾಗೂ ಹವಾಮಾನ ಇಲಾಖೆಯು ನಿರಂತರವಾಗಿ ಜಿಲ್ಲೆಯಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಿದ ಕಾರಣ ಚಾರಣಿಗರ ಹಿತದೃಷ್ಟಿಯಿಂದ ಅ.3ರಿಂದ ಮುಂದಿನ ಆದೇಶದ ತನಕ...

ಚಿನ್ನ, ಬೆಳ್ಳಿ ದರ ಸ್ಥಿರ

Newsics.com ಬೆಂಗಳೂರು: ಕಳೆದ ವಾರ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದ ಚಿನ್ನ ಬೆಳ್ಳಿಯ ದರ ಈ ವಾರ ಸ್ಥಿರಗೊಂಡಿದೆ. ದೇಶದಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 53,350 ರೂ., 24 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 58,200 ರೂ. ಆಗಿದೆ. ಬೆಳ್ಳಿ ಬೆಲೆ 10 ಗ್ರಾಂಗೆ 735 ರೂ. ಇದೆ. ಬೆಂಗಳೂರಿನಲ್ಲಿ 22 ಕ್ಯಾರಟ್ 10...

ವಿಮಾನದ ತುರ್ತು ಬಾಗಿಲು ತೆರೆಯಲೆತ್ನಿಸಿದ ಪ್ರಯಾಣಿಕ: ತುರ್ತು ಭೂ ಸ್ಪರ್ಶ, ಬಂಧನ

newsics.com ದೇವನಹಳ್ಳಿ: ಟೇಕ್ಆಫ್ ಆಗುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಸ್ವಪ್ನೋಲ್ ಹೋಲೆ ಬಂಧಿತ ಪ್ರಯಾಣಿಕ. ಸ್ವಪ್ನೋಲ್ ಇಂಡಿಗೋ ವಿಮಾನದಲ್ಲಿ ಮಹಾರಾಷ್ಟ್ರದ ನಾಗ್ಪುರದಿಂದ ಬೆಂಗಳೂರು ಮಾರ್ಗವಾಗಿ ಬ್ಯಾಂಕಾಕ್ಗೆ ತೆರಳುತ್ತಿದ್ದನು. ಬೆಂಗಳೂರಿನ ದೇವನಹಳ್ಳಿ ಬಳಿ ವಿಮಾನ ಟೇಕ್ಆಫ್ ಆಗುತ್ತಿದ್ದಂತೆ ಸ್ವಪ್ನೋಲ್ ತನ್ನ ಸೀಟ್...

ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಅ.1 ರಿಂದ ಜಾರಿ!

newsics.com ಬೆಂಗಳೂರು: ಐದು ವರ್ಷಗಳ ಬಳಿಕ ರಾಜ್ಯದಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಲಾಗಿದೆ. ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಭಾನುವಾರದಿಂದ (ಅ.1) ಜಾರಿಯಾಗಿದೆ. ಹೊಸ ದರಗಳ ಪ್ರಕಾರ ದಸ್ತಾವೇಜುಗಳ ನೋಂದಣಿಗೆ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಸಿದ್ಧತೆ ‍ಪೂರ್ಣಗೊಳಿಸಿದೆ. ಮಾರ್ಗಸೂಚಿ ದರಗಳಲ್ಲಿ ಸರಾಸರಿ ಶೇಕಡ 30ರಷ್ಟು ಹೆಚ್ಚಳ ಮಾಡಲಾಗಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಅಧಿಕಾರಿಗಳು...

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ ಅಲೇಮಾಡ ನಾಣಯ್ಯ ಅವರು ಶ್ರೀನಿವಾಸ್ ಎಂಬುವರ ಗದ್ದೆಯಲ್ಲಿ ಐದು ಹಸುಗಳನ್ನು ಮೇಯಲು ಬಿಟ್ಟಿದ್ದರು. ಈ ವೇಳೆ ವಿದ್ಯುತ್ ಲೈನ್ ತುಂಡಾಗಿ ಬಿದ್ದಿದೆ. ಪರಿಣಾಮ ಹಸುಗಳು ಸ್ಥಳದಲ್ಲಿಯೇ ಸಾವನ್ನಪ್ಪಿವೆ. ಹಸುಗಳು...

ಬೆಂಗಳೂರು ಕಂಬಳ: ಕೋಣಗಳಿಗೆ ಮಂಗಳೂರಿಂದಲೇ ಬರುತ್ತೆ ಕುಡಿಯುವ ನೀರು!

newsics.com ಬೆಂಗಳೂರು: ನವೆಂಬರ್ ತಿಂಗಳ 25 ಮತ್ತು 26ನೇ ತಾರೀಕಿನಂದು ಮೊದಲ ಬಾರಿಗೆ ತುಳುನಾಡಿನ ಗಡಿಯನ್ನು ದಾಟಿ ಬೆಂಗಳೂರಿನಲ್ಲಿ ಕರಾವಳಿಯ ಸಾಂಸ್ಕೃತಿಕ ಕ್ರೀಡೆ ಕಂಬಳ ನಡೆಯುತ್ತಿದೆ. ಪುತ್ತೂರು ಶಾಸಕ ಅಶೋಕ್‌ ಕುಮಾರ್ ರೈ ನೇತೃತ್ವದಲ್ಲಿ ಕಂಬಳ ಆಯೋಜಿಸಲಾಗಿದೆ. ಸುಮಾರು 9 ಲಕ್ಷಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಮಂಗಳೂರಿಂದಲೇ ಕೋಣಗಳಿಗೆ ಕುಡಿಯುವ ನೀರು: ಊರು ಬಿಟ್ಟು ಮತ್ತೊಂದು...

ಶಿವಮೊಗ್ಗದಲ್ಲಿ ಕಲ್ಲು ತೂರಾಟ: 144 ಸೆಕ್ಷನ್‌ ಜಾರಿ

newsics.com ಬೆಂಗಳೂರು:  ಈದ್‌ ಮಿಲಾದ್‌ ಮೆರವಣಿಗೆ ಗುಂಪಿನ ಮೇಲೆ ಕಲ್ಲು ತೂರಾಟ ಮಾಡಿರುವ ದುರ್ಘಟನೆ ಶಿವಮೊಗ್ಗ ನಗರದ ರಾಗಿಗುಡ್ಡದ ಬಳಿ ನಡೆದಿದ್ದು, 144 ಸೆಕ್ಷನ್‌ ಜಾರಿ ಮಾಡಲಾಗಿದೆ. ರಾಗಿಗುಡ್ಡದಿಂದ ಮೆರವಣಿಗೆ ಹೊರಟಾಗ ಹಿಂದೂ ದೇಗುಲದ ಬಳಿ ಮೆರವಣಿಗೆ ಹಿಂಬದಿಯ ಯುವಕನ ಜೊತೆ ಮಾತಿನ ಚಕ್ರಮಕಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಉಂಟಾದ ಮಾತಿನ ಚಕಮಕಿಯಿಂದಾಗಿ ಮುಂದೆ ಸಾಗಿದ್ದ ಮೆರವಣಿಗೆ...

ಹಿಟ್ ಅಂಡ್ ರನ್ ಕೇಸ್‌: ಅ. 3ಕ್ಕೆ ವಿಚಾರಣೆಗೆ ಬರುವಂತೆ ನಟ ನಾಗಭೂಷಣ್‌ಗೆ ನೋಟಿಸ್

newsics.com ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ನಾಗಭೂಷಣ್ ವಿರುದ್ಧ ಹಿಟ್ ಅಂಡ್ ರನ್ ಕೇಸು ದಾಖಲಾಗಿ ಪೊಲೀಸರು ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ನಡೆದಿದ್ದೇನು?: ನಿನ್ನೆ ರಾತ್ರಿ 9 ಗಂಟೆಯ ಹೊತ್ತಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಾರು ಅಪಘಾತದಲ್ಲಿ ಪ್ರೇಮಾ ಎನ್ನುವ ಮಹಿಳೆ ಸಾವನ್ನಪ್ಪಿದ್ದು, ಅವರ ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪತಿ ಕೃಷ್ಣ ಅವರನ್ನು...

ಹುಟ್ಟುಹಬ್ಬ ಆಚರಣೆ ವೇಳೆ ಹೀಲಿಯಂ ಬಲೂನ್ ಸ್ಫೋಟ: 4 ಮಕ್ಕಳು ಸೇರಿ ಐವರ ಸ್ಥಿತಿ ಗಂಭೀರ

newsics.com ಬೆಂಗಳೂರು: ಬೆಂಗಳೂರು ಹೊರವಲಯದ ಕಾಡುಗೋಡಿ ಬಳಿಯ ಬೆಲತ್ತೂರಿನಲ್ಲಿ ಶನಿವಾರ ನಡೆದ ಹುಟ್ಟುಹಬ್ಬದ ಆಚರಣೆ ವೇಳೆ ಹಿಲೇನಿಯಮ್ ತುಂಬಿದ್ದ ಬಲೂನ್ ಸ್ಫೋಟಗೊಂಡ ಪರಿಣಾಮ ನಾಲ್ವರು ಮಕ್ಕಳು ಸೇರಿ‌ ಐವರು ಗಂಭೀರ ಗಾಯಗೊಂಡಿದ್ದಾರೆ. ವಿಜಯ್ ಕುಮಾರ್ (44) ಧ್ಯಾನ್(7) , ಸಂಜಯ್(8), ಸೋಹಿಲಾ (3) ಗಾಯಗೊಂಡಿದ್ದಾರೆ. ಕೈ-ಕಾಲು ಮುಖದ ಭಾಗಗಳು ಸುಟ್ಟಿದ್ದು, ಎಲ್ಲ ಐವರ ಸ್ಥಿತಿ ಚಿಂತಾಜನಕವಾಗಿದೆ. ಇನ್ನೋರ್ವ...

ನಟಿ ಮನ್ವಿತಾ ಹಾಟ್ ವಿಡಿಯೋಗೆ ಪಡ್ಡೆ ಹುಡುಗರು ಫಿದಾ

newsics.com ಬೆಂಗಳೂರು: ಯುವ ನಟಿ, ಕೆಂಡ ಸಂಪಿಗೆ ಚಿತ್ರದ ಮೂಲಕ ಮಿಂಚಿದ್ದ ಮಾನ್ವಿತಾ ಹರೀಶ್ ಕಾಮತ್ ಅವರು ಇತ್ತೀಚಿಗೆ ಹೊಸ ಫೋಟೋ ಶೂಟ್ ಮತ್ತು ವೀಡಿಯೋಗಳ ಮೂಲಕ ಸುದ್ದಿಯಲ್ಲಿದ್ದಾರೆ. https://www.instagram.com/reel/CwFv4KhovZB/?igshid=MTc4MmM1YmI2Ng== ಮಾನ್ವಿತಾ ಬ್ಲಾಕ್ ಡ್ರೆಸ್‌ನಲ್ಲಿ ಸಖತ್ ಮಿಂಚುತ್ತಿರುವ ವೀಡಿಯೋ ಸೋಷಿಯಲ್ ಮೀಡಿಯಾ ಮೂಲಕ ಸದ್ದು ಮಾಡುತ್ತಿದೆ. ಫುಲ್ ಸೆಕ್ಸಿ ಲುಕ್ ಹಾಗೂ ಜೋಶ್‌ನಲ್ಲಿ ಬೋಲ್ಡ್ ಮತ್ತು ಬ್ಯೂಟಿಫುಲ್ ಆಗಿ...

ಇಂದು, ನಾಳೆ ರಾಜ್ಯದಲ್ಲಿ ಭಾರಿ ಮಳೆ

newsics.com ಬೆಂಗಳೂರು: ಇಂದು ಮತ್ತು ನಾಳೆ ರಾಜ್ಯದಲ್ಲಿ ಭಾರೀ ಮಳೆ ಆಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ದ.ಕನ್ನಡ, ಉಡುಪಿ, ಉ.ಕನ್ನಡ, ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಯಾದಗಿರಿ, ಚಿಕ್ಕಮಗಳೂರು, ಕೊಡಗು ಹಾಗೂ ಕೋಲಾರ ಜಿಲ್ಲೆ ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಇಂದು...

ನಟ ನಾಗಭೂಷಣ್ ಕಾರು ಅಪಘಾತ: ಮಹಿಳೆ ಸಾವು, ನಟನ ಬಂಧನ

newsics.com ಬೆಂಗಳೂರು: ಸ್ಯಾಂಡಲ್ ವುಡ್ ನ ಯುವಪ್ರತಿಭೆ, ಪೋಷಕ ನಟ ನಾಗಭೂಷಣ್ ಅವರ ಕಾರು ಅಪಘಾತಕ್ಕೆ ಒಳಗಾಗಿದೆ. ಈ ಸಂಬಂಧ ನೀಡಿದ ದೂರಿನನ್ವಯ ನಟ ನಾಗಭೂಷಣ್ ಅವರನ್ನು ಕುಮಾರಸ್ವಾಮಿ‌ ಲೇಔಟ್ ಪೊಲೀಸರು‌ ಬಂಧಿಸಿದ್ದಾರೆ. ಇಂದು ಬೆಳಗ್ಗೆ ಕೋಣನಕುಂಟೆ ಕ್ರಾಸ್ ಬಳಿ ಫುಟ್ ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ದಂಪತಿಗೆ ನಾಗಭೂಷಣ್ ಅವರ ಕಾರು ಡಿಕ್ಕಿ ಆಗಿದೆ. ಅಪಘಾತದಲ್ಲಿ ಪ್ರೇಮಾ...

ಕರ್ನಾಟಕದಲ್ಲಿ ಈ ಬಾರಿ ಶೇ. 25ರಷ್ಟು ಮಳೆಯ ಕೊರತೆ

newsics.com ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಅವಧಿಯಲ್ಲಿ ಈ ವರ್ಷ ಶೇ 25ರಷ್ಟು ಮಳೆ ಕೊರತೆಯಾಗಿದೆ. ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗಿನ ನಾಲ್ಕು ತಿಂಗಳಲ್ಲಿ ಒಟ್ಟು 845 ಮಿ.ಮೀ ಮಳೆ ಸುರಿಯಬೇಕಿತ್ತು. ಆದರೆ, 635 ಮಿ.ಮೀ ಅಷ್ಟೇ ಮಳೆಯಾಗಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳು, ಶೇ 20ರಷ್ಟು ಮಳೆ ಕೊರತೆ ಕಂಡಿವೆ....

ಕಾವೇರಿ ಪ್ರಾಧಿಕಾರಕ್ಕೆ ಮರು ಪರಿಶೀಲನಾ ಅರ್ಜಿ ಸಲ್ಲಿಕೆ: ಸಿದ್ದರಾಮಯ್ಯ

newsics.com ಬೆಂಗಳೂರು: ಕಾವೇರಿ ನೀರು ಬಿಡುಗಡೆ ಆದೇಶಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮರುಪರಿಶೀಲನಾ ಅರ್ಜಿ ಸಲ್ಲಿಸಲಾಗಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ. ತಮಿಳುನಾಡಿಗೆ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ ಆದೇಶವನ್ನು ಎತ್ತಿ ಹಿಡಿದಿರುವ ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರದ ನಿರ್ಧಾರವನ್ನು ಮರು...

ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಮುಸ್ಲಿಂ ಯುವಕ ಅರೆಸ್ಟ್

newsics.com ಕಾರವಾರ: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಯುವಕನನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ ಘಟನೆ ನಡೆದಿದೆ. ಶಿರಸಿ ನಗರದ ರಾಮನ್ ಬೈಲ್‌'ನ ಉಮರ್ ಫಾರೂಕ್ (38 ) ಬಂಧಿತ ಯುವಕನಾಗಿದ್ದಾನೆ. ಈದ್ ಮಿಲಾದ್ ಹಬ್ಬದಂದು ರಾಷ್ಟ್ರಧ್ವಜದಲ್ಲಿ ಗುಂಬಜಿನ ಚಿತ್ರ ಅಳವಡಿಸಿ ಮುಸ್ಲಿಂ ಧರ್ಮದ ಘೋಷಣೆಯ ಅಕ್ಷರದಲ್ಲಿ ಬರೆದು...

ಚಿನ್ನ, ಬೆಳ್ಳಿ ದರ ಇಳಿಕೆ: ಆಭರಣ ಪ್ರಿಯರು ಖುಷ್

newsics.com ಬೆಂಗಳೂರು: ತಿಂಗಳಾಂತ್ಯದಲ್ಲಿ ಚಿನ್ನ ಮತ್ತು ಬೆಳ್ಳಿಯ ದರವು ಮತ್ತಷ್ಟು ಇಳಿಕೆ ಕಂಡಿದ್ದು, ಆಭರಣ ಪ್ರಿಯರು ಖುಷಿಯಾಗಿದ್ದಾರೆ. ಬೆಂಗಳೂರಿನಲ್ಲಿ 1 ಗ್ರಾಂ 22 ಕ್ಯಾರೆಟ್‌ ಚಿನ್ನದ ದರ 5,365 ರೂ., 24 ಕ್ಯಾರೆಟ್‌ ಚಿನ್ನದ ದರವನ್ನು ಒಂದು ಗ್ರಾಂ ಚಿನ್ನದ ದರ 5,853 ರೂ. ಆಗಿದೆ. ನಿನ್ನೆಗಿಂತ 27 ರೂ. ಇಳಿಕೆಯಾಗಿದೆ. ಮಂಗಳೂರು, ಮೈಸೂರು, ದಾವಣಗೆರೆ, ಬಳ್ಳಾರಿ ಸೇರಿದಂತೆ...

ನ್ಯಾಯಾಂಗ ನಿಂದನೆ ಮಾಡಿದ ಖಾಸಗಿ ವೈದ್ಯೆಗೆ ತಿಂಗಳಲ್ಲಿ 1 ದಿನ ಸರ್ಕಾರಿ ಆಸ್ಪತ್ರೆ ಸೇವೆ

newsics.com ಬೆಂಗಳೂರು: ಕೌಟುಂಬಿಕ ಕಲಹಕ್ಕೆ ಸಂಬಂಧಿಸಿದ ವ್ಯಾಜ್ಯವೊಂದರಲ್ಲಿ ಹೈಕೋರ್ಟ್‌ ವೈದೆಗೆ ಪತಿಯ ಸುಪರ್ದಿಗೆ 8 ವರ್ಷದ ಪುತ್ರಿಯನ್ನು ಒಪ್ಪಿಸುವಂತೆ ಆದೇಶಿಸಿತ್ತು. ಆದರೆ ಆದೇಶ ಪಾಲಿಸದ ವೈದ್ಯೆಯೊಬ್ಬರು ಕ್ರಿಮಿನಲ್‌ ನ್ಯಾಯಾಂಗ ನಿಂದನೆ ವಿಚಾರಣೆಯಿಂದ ಬಚಾವಾಗಲು 6 ತಿಂಗಳ ಅವಧಿಯಲ್ಲಿ ಪ್ರತಿ ತಿಂಗಳಲ್ಲಿ ಒಂದು ದಿನ ಸರ್ಕಾರಿ ಆಸ್ಪತ್ರೆಯಲ್ಲಿ ಸಮುದಾಯ ಸೇವೆ ಸಲ್ಲಿಸುವುದಾಗಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ...

ಆಂಟಿ ವಂಚಿಸಿ ಅತ್ಯಾಚಾರ: ಜೈಲು ಸೇರಿದ ಪುತ್ತೂರು ಯುವಕ

newsics.com ಶಿರಸಿ: ಕ್ಲಾಬ್ ಹೌಸ್ ಆ್ಯಪ್ನಿಂದ ಪರಿಚಯವಾದ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ, ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ ಆರೋಪದ ಮೇರೆಗೆ ಪೊಲೀಸರು ಯುವಕನನ್ನು ಬಂಧಿಸಿರುವ ಘಟನೆ ಕಾರವಾರ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಶಾಂತ ಭಟ್ ಮಾಣಿಲ ಬಂಧಿತ...

ಗಣಪತಿ ವಿಸರ್ಜನೆ: DJ ಸೌಂಡ್‌ಗೆ ಡಾನ್ಸ್ ಮಾಡಿದ ಎಂ.ಪಿ. ರೇಣುಕಾಚಾರ್ಯ

newsics.com ದಾವಣಗೆರೆ : ಗಣಪತಿ ವಿಸರ್ಜನೆ ವೇಳೆ ಎಂಪಿ ರೇಣುಕಾಚಾರ್ಯ ಡಿಜೆ ಸೌಂಡ್ಗೆ ಡಾನ್ಸ್ ಮಾಡಿದ್ದಾರೆ. ಸೂರಗೊಂಡನಕೊಪ್ಪದಲ್ಲಿ ಇಂದು ಗಣಪತಿ ಮೂರ್ತಿಯ ವಿಸರ್ಜನೆ ನಡೆಯಿತು. ಮೆರವಣಿಯಲ್ಲಿ ಭಾಗಿಯಾದ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಅವರು ಸಾರ್ವಜನಿಕರೊಂದಿಗೆ ಸೇರಿಕೊಂಡು ಡಿಜೆ ಸೌಂಡ್ಗೆ ಡಾನ್ಸ್...

ಅನಂತ್‌ಕುಮಾರ್ ಹೆಗಡೆ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿ: ಕಾಗೇರಿ

newsics. Com ಬೆಂಗಳೂರು: ಶಿರಸಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಈ ಬಾರಿ ಲೋಕಸಭಾ ಚುನಾವಣೆಗೆ ಹಾಲಿ ಸಂಸದ ಅನಂತ್‌ಕುಮಾರ್ ಹೆಗಡೆ ಅವರೇ ಅಭ್ಯರ್ಥಿಯಾಗಲಿದ್ದಾರೆ ಎಂದಿದ್ದಾರೆ. ಅಂತಿಮವಾಗಿ ಹೈಕಮಾಂಡ್ ಹಾಗೂ ಪಕ್ಷದ ವರಿಷ್ಠರು ತೆಗೆದುಕೊಳ್ಳುವ...

ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆ ವೈದ್ಯೆಯ ನಿಗೂಢ ಸಾವು!

newsics.com ಚಾಮರಾಜನಗರ: ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಯಲ್ಲಿ ಅರಿವಳಿಕೆ ತಜ್ಞ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ತಮಿಳುನಾಡು ಮೂಲದ ಡಾ. ಸಿಂಧುಜಾ (28) ಶುಕ್ರವಾರ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ. ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ವೈದ್ಯೆಯ ಶವದ ಬಳಿ ಸಿರೆಂಜ್ ಪತ್ತೆಯಾಗಿದೆ. ಜನವರಿ 2 ಕ್ಕೆ ಡಾ. ಸಿಂಧುಜಾ ಮದುವೆ ನಿಶ್ಚಯವಾಗಿತ್ತು. ಸ್ಥಳಕ್ಕೆ ಕೊಳ್ಳೇಗಾಲ ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಮಿಳುನಾಡಿನವರಾದ...

ಎಡಿಜಿಪಿ ಅಲೋಕ್ ಕುಮಾರ್ ಸೇರಿ ಇಬ್ಬರು IPS ಅಧಿಕಾರಿಗಳ ವರ್ಗಾವಣೆ

newsics.com ಬೆಂಗಳೂರು: ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದಾರೆ. ಅಲೋಕ್ ಕುಮಾರ್ ಅವರನ್ನು ತರಬೇತಿ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ. ಅಲೋಕ್ ಕುಮಾರ್ ಅವರನ್ನು ಮೂರು ತಿಂಗಳ ಹಿಂದೆಯಷ್ಟೇ ಕಾನೂನು ಮತ್ತು ಸುವ್ಯವಸ್ಥೆಯಿಂದ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿತ್ತು. ಇದೀಗ ಮತ್ತೆ ವರ್ಗಾವಣೆ...

ನೀರು ಬಿಡದಿದ್ರೆ ಜಲಾಶಯಗಳನ್ನು ಕೇಂದ್ರ ಸರ್ಕಾರ ವಶಕ್ಕೆ ಪಡೆಯುವ ಸಾಧ್ಯತೆಯಿದೆ ಎಂದ ಸಿಎಂ

newsics.com ಬೆಂಗಳೂರು: ‘ಕಾವೇರಿ ನೀರು ವಿವಾದ ಕುರಿತು ಇಂದು ಸಂಜೆ ತಜ್ಞರ ತಂಡದ ಜತೆಗಿನ ಸಭೆ ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದರು. ಕಾವೇರಿ ವಿವಾದ ಕುರಿತಂತೆ ರಾಜ್ಯ ಕಬ್ಬು ಬೆಳೆಗಾರರ ರಾಜ್ಯ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹಾಗೂ ಮುಖ್ಯಮಂತ್ರಿ ಚಂದ್ರು ಅವರ ನೇತೃತ್ವದ ಹೋರಾಟಗಾರರ ನಿಯೋಗದ ಭೇಟಿ ನಂತರ ಮುಖ್ಯಮಂತ್ರಿ...

ಕಿಶನ್ ಜೊತೆ ಸಂಯುಕ್ತಾ ಹಾಟ್ ಡ್ಯಾನ್ಸ್ ವಿಡಿಯೋ: ಬಟ್ಟೆ ಹಾಕಮ್ಮ ಎಂದ ನೆಟ್ಟಿಗರು!

newsics.com ಸದಾ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಾಗುವ ಕಿರಿಕ್ ಬೆಡಗಿ ಸಂಯುಕ್ತಾ ಹೆಗ್ಡೆ ಈಗ ಕಿಶನ್ ಬಿಳಗಲಿ ಜೊತೆ ಮಸ್ತ್ ಆಗಿ ಡ್ಯಾನ್ಸ್ ಮಾಡಿದದ್ದಲ್ಲದೆ, ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಜಂಗ್ಲಿ ಸಿನಿಮಾದ ‘ನೀನೆಂದರೆ ನನ್ನೊಳಗೆ’ ಎಂಬ ಹಾಡಿಗೆ ಕಿಶನ್ ಜೊತೆ ನಟಿ ಸೊಂಟ ಬಳುಕಿಸಿದ್ದಾರೆ. ಇಬ್ಬರು ಬಿಳಿ ಬಣ್ಣದ ಉಡುಗೆಯಲ್ಲಿ ಹೈಲೆಟ್‌ ಆಗಿದ್ದಾರೆ. ಈ ರೊಮ್ಯಾಂಟಿಕ್ ವಿಡಿಯೋ...

ನಿತ್ಯ 3 ಸಾವಿರ ಕ್ಯೂಸೆಕ್ ನೀರು ಬಿಡಲು ಕರ್ನಾಟಕಕ್ಕೆ ಕಾವೇರಿ ಪ್ರಾಧಿಕಾರ ಸೂಚನೆ

newsics.com ನವದೆಹಲಿ: ದೆಹಲಿಯಲ್ಲಿ ಇಂದು ನಡೆದ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಈ ಹಿಂದೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿದ್ದ ಆದೇಶವನ್ನು ಪಾಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಆದೇಶಿಸಿದೆ. ಈ ಹಿಂದೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿದ್ದ ಅಕ್ಟೋಬರ್ 15ರವರೆಗೆ ತಮಿಳುನಾಡಿಗೆ ನಿತ್ಯ 3 ಸಾವಿರ ಕ್ಯೂಸೆಕ್ಸ್ ನೀರನ್ನು ಹರಿಸುವ ಆದೇಶವನ್ನು ಪಾಲಿಸುವಂತೆ...

ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು ಹಸುಗೂಸು ಸೇರಿ ಇಬ್ಬರ ಸಾವು

newsics.com ಲಕ್ನೋ: ನಿರ್ಮಾಣ ಹಂತದ ಕಟ್ಟಡ ಕುಸಿದು ಹಸುಗೂಸು ಸೇರಿದಂತೆ ಇಬ್ಬರು ಸಾವನ್ನಪ್ಪಿ, 14 ಜನರು ಗಾಯಗೊಂಡಿರುವ ಘಟನೆ ಲಕ್ನೋನಲ್ಲಿ ನಡೆದಿದೆ. ಏಕಾಏಕಿ ಕುಸಿದ ಬಿದ್ದ ಕಟ್ಟಡದ ಕೆಳ ಹಂತಸ್ತಿನಲ್ಲಿ ಕಾರ್ಮಿಕರು ನಿದ್ದೆ ಮಾಡುತ್ತಿದ್ದರು. ಕಟ್ಟಡ ಮೇಲೆ ಬಿದ್ದು ಕಾರ್ಮಿಕ ಮುಕದಮ್ (30) ಮತ್ತು ಎರಡು ತಿಂಗಳ ಹೆಣ್ಣು ಮಗು ಐಶ್ಯಾ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಇತರ 14...

ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ: ರಾಜ್ಯದ ಅಲ್ಲಲ್ಲಿ ರಸ್ತೆ ತಡೆ, ಪ್ರತಿಭಟನೆ; ಬಸ್, ವಿಮಾನ ಸಂಚಾರ ವ್ಯತ್ಯಯ

newsics.com ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು(ಸೆ.29) ಕರ್ನಾಟಕ ಬಂದ್ ಆಚರಿಸಲಾಗುತ್ತಿದ್ದು, ರಾಜ್ಯದ ವಿವಿಧೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾವೇರಿ ಕಿಚ್ಚು ಭುಗಿಲೆದ್ದಿದೆ. ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಚಿತ್ರದುರ್ಗ ಸೇರಿ ರಾಜ್ಯದೆಲ್ಲೆಡೆ ಬಂದ್‌ಗೆ ಭಾರೀ ಬೆಂಬಲ...

ಕರ್ನಾಟಕ ಬಂದ್: ಬಹುತೇಕ ಸ್ತಬ್ಧ, 40 ವಿಮಾನಗಳ ಹಾರಾಟ ಸ್ಥಗಿತ

newsics.com ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ನಡೆಯುತ್ತಿರುವ ಕರ್ನಾಟಕ ಬಂದ್‌ ಹಿನ್ನೆಲೆ ರಾಜ್ಯದ ಬಹುತೇಕ ಜಿಲ್ಲೆಗಳು ಸ್ತಬ್ಧವಾಗಿದ್ದು, ಕೆಲವೆಡೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸರ್ಕಾರಿ ಸಾರಿಗೆ ಬೆಂಬಲ ನೀಡದೇ ಇದ್ದರೂ ಜನ ಬಾರದ ಕಾರಣ ಕಡಿಮೆ ಪ್ರಮಾಣದಲ್ಲಿ ಬಸ್ಸುಗಳು ರಸ್ತೆಗೆ ಇಳಿದಿದೆ. ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಸ್ಸುಗಳಿದ್ದರೂ ಪ್ರಯಾಣಿಕರು ಬರುತ್ತಿಲ್ಲ. ಪ್ಲಾಟ್ ಫಾರ್ಮ್ ಕೂಡಾ ಬಿಕೋ...

ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ, ಬೆಳ್ಳಿ ದರ ಸ್ಥಿರ!

newsics.com ಬೆಂಗಳೂರು: ಇಂದು ಕೂಡ ರಾಜ್ಯ ಹಾಗೂ ದೇಶದಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ ಕಂಡಿದೆ. ಇಂದು 10 ಗ್ರಾಂ 22 ಕ್ಯಾರೆಟ್‌ ಚಿನ್ನದ ಬೆಲೆಯಲ್ಲಿ 600 ರೂ. ಇಳಿಕೆಯಾಗಿದೆ. 1 ಗ್ರಾಂ ಚಿನ್ನದ ಮೇಲೆ 60 ರೂ ಇಳಿಕೆ ಕಂಡಿದೆ. ಇಂದು ಬೆಳ್ಳಿ ದರ ಸ್ಥಿರವಾಗಿದೆ. ಇಂದು ಒಂದು ಗ್ರಾಂ 22 ಕ್ಯಾರೆಟ್‌ ಚಿನ್ನದ ದರ...

ಇಂದು ಮೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ!

newsics.com ಬೆಂಗಳೂರು: ರಾಜ್ಯದ ಕೆಲವೆಡೆ ಇಂದು ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮೂರು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. ಕರಾವಳಿಯ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡಕ್ಕೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಬೆಳಗಾವಿ, ಧಾರವಾಡ ಹಾಗೂ ಚಾಮರಾಜನಗರ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’...
- Advertisement -

Latest News

ಜಿಪಿಎಸ್ ಮ್ಯಾಪ್ ಎಡವಟ್ಟು: ಕಾರು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರ ಸಾವು

newsics.com ತಿರುವನಂತಪುರಂ: ಜಿಪಿಎಸ್ ಮ್ಯಾಪ್ ತೋರಿಸಿದ ದಾರಿಯಲ್ಲಿ ಹೋದ ಕಾರೊಂದು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರು ಮೃತಪಟ್ಟ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದೆ. ತಡರಾತ್ರಿ ಭಾರಿ ಮಳೆಯ ಕಾರಣ...
- Advertisement -

ಸಂರಕ್ಷಣೆ ಒಂದು ಕ್ರೋಢೀಕರಣ

ಅರಣ್ಯ ಛಿದ್ರೀಕರಣವಾಗುತ್ತಿದೆ. ಈ ಅರಣ್ಯ ಛಿದ್ರೀಕರಣದಿಂದ ಕಾಡುಪ್ರಾಣಿಗಳ ಸಂತಾನೋತ್ಪತ್ತಿಗೂ ಸಹ ತೊಂದರೆಗಳುಂಟಾಗಿದೆ. ಕಾಡು- ಕಾಡುಪ್ರಾಣಿಗಳು ಹಾಗೂ ಮಳೆ, ನೀರು ಈ ಕೊಂಡಿಗಳು ಸಡಿಲವಾಗುತ್ತಿವೆ. ಇದನ್ನು ತಡೆಯಬೇಕಾಗಿದೆ. ಪಕ್ಷಿ ಸಂರಕ್ಷಣೆ 64...

ಸಂರಕ್ಷಣೆ ಒಂದು ಕ್ರೋಢೀಕರಣ

ಅರಣ್ಯ ಛಿದ್ರೀಕರಣವಾಗುತ್ತಿದೆ. ಈ ಅರಣ್ಯ ಛಿದ್ರೀಕರಣದಿಂದ ಕಾಡುಪ್ರಾಣಿಗಳ ಸಂತಾನೋತ್ಪತ್ತಿಗೂ ಸಹ ತೊಂದರೆಗಳುಂಟಾಗಿದೆ. ಕಾಡು- ಕಾಡುಪ್ರಾಣಿಗಳು ಹಾಗೂ ಮಳೆ, ನೀರು ಈ ಕೊಂಡಿಗಳು ಸಡಿಲವಾಗುತ್ತಿವೆ. ಇದನ್ನು ತಡೆಯಬೇಕಾಗಿದೆ. ಪಕ್ಷಿ ಸಂರಕ್ಷಣೆ 64...

ನಮ್ಮ ‘ಪರಿಸರ ಪರ’ ಚಟುವಟಿಕೆಗಳ ಪುನರಾವಲೋಕನ

ಹೆಚ್ಚೆಚ್ಚು ಜನ ಆರೋಗ್ಯಕರ ಚರ್ಚೆ ಮಾಡಿದರೆ ಕಾಡಿಗೆ ಹಾಗೂ ನಮ್ಮ ಮುಂದಿನ ಪೀಳಿಗೆಗೆ ಭವಿಷ್ಯವಿದೆ. ಎಲ್ಲೆಂದರಲ್ಲಿ ಗಿಡ ನೆಡುವುದೂ ತಪ್ಪು. ಜತೆಗೆ ನೀವೆಲ್ಲರೂ ಗಮನಿಸಿರಬಹುದು ಯಾವ ವೃಕ್ಷಲಕ್ಷ ಯೋಜನೆಗಳೂ ಫಲ ನೀಡಿಲ್ಲ. ಕೋಟಿ...

ಮುಂಗಾರು ಮಳೆ ಎಂಬ ಜೀವಶಕ್ತಿ!

ಮುಂಗಾರು ಭಾರತವನ್ನು ಕೇರಳದ ಮೂಲಕ ಪ್ರವೇಶಿಸುತ್ತದೆ. ಮುಂಗಾರಿನ ಬಾಗಿಲು, ಕೇರಳ. ಹಾಗೆಯೇ ಮುಂದುವರೆಯುತ್ತಾ ಉತ್ತರಭಾರತಕ್ಕೆ ತಲಪುವ ಮುಂಗಾರು ಉತ್ತರದ ಎಷ್ಟೋ ಪ್ರದೇಶಗಳನ್ನು ತಲಪುವ ಹೊತ್ತಿಗೆ ಜುಲೈ ಬಂದಿರುತ್ತದೆ.   ಪಕ್ಷಿ ಸಂರಕ್ಷಣೆ 59   ♦ ಕಲ್ಗುಂಡಿ...
error: Content is protected !!