Saturday, December 2, 2023

ಸೈಫ್ ಪ್ರೇಮ ನಿವೇದನೆಯನ್ನು ತಿರಸ್ಕರಿಸಿದ್ದರಂತೆ ಕರೀನಾ…!

Follow Us

`ನಂಗೆ ನೀನು ಯಾರೆಂದು ಗೊತ್ತಿಲ್ಲ’

ಮುಂಬೈ: ಬಾಲಿವುಡ್ ನಟಿ ಕರೀನಾ ಕಪೂರ್, ನಟ ಸೈಫ್ ಅಲಿ ಖಾನ್‍ರನ್ನು ಮದುವೆಯಾಗಿ ಈಗ ಅಪ್ಪಟ ಗೃಹಿಣಿಯಾಗಿದ್ದಾರೆ. ತಾಯಿಯಾಗಿ ಮಗನೊಂದಿಗೆ ಒಳ್ಳೆಯ ಕ್ಷಣಗಳನ್ನು ಕಳೆಯುತ್ತಿದ್ದಾರೆ. ಜೊತೆಗೆ, ಚಿತ್ರರಂಗದಲ್ಲೂ ಸಕ್ರಿಯರಾಗಿದ್ದಾರೆ. ವೃತ್ತಿ ಜೀವನ ಮತ್ತು ವೈಯಕ್ತಿಕ ಜೀವನ ಎರಡನ್ನೂ ಸರಿದೂಗಿಸಿಕೊಂಡು ಹೋಗುತ್ತಿದ್ದಾರೆ ಈ ಬಾಲಿವುಡ್ ಬೆಡಗಿ. ಇಂತಹ ಕರೀನಾ ಸಂದರ್ಶನವೊಂದರಲ್ಲಿ ತಮ್ಮ ಪ್ರೀತಿಯ ದಿನಗಳ ಬಗ್ಗೆ ಮಾತನಾಡಿದ್ದಾರೆ. ಜೊತೆಗೆ, ಸೈಫ್ ಅವರ ಪ್ರೇಮ ನಿವೇದನೆಯನ್ನು ಎರಡು ಬಾರಿ ಕರೀನಾ ತಿರಸ್ಕರಿಸಿದ ಕತೆಯನ್ನೂ ಬಿಚ್ಚಿಟ್ಟಿದ್ದಾರೆ.
ಕರೀನಾ ಹೇಳಿದ್ದೇನು…?
ಅದು ತಶನ್ ಚಿತ್ರದ ಶೂಟಿಂಗ್ ಸಮಯ. ಗ್ರೀಸ್‍ನಲ್ಲಿ ಶೂಟಿಂಗ್ ನಡೆಯುತ್ತಿತ್ತು. ಆಗ ಸೈಫ್ ಮೊದಲ ಬಾರಿಗೆ ನಮ್ಮಿಬ್ಬರ ಮದುವೆ ಪ್ರಸ್ತಾಪ ಮಾಡಿದ್ದರು. ಇದಾದ ಬಳಿಕ ಲಡಾಕ್‍ನಲ್ಲೂ ಸೈಫ್ ಇದೇ ವಿಷಯ ಮುಂದಿಟ್ಟಿದ್ದರು. ಆಗ ನಾನು `ನನಗೆ ಗೊತ್ತಿಲ್ಲ. ನನಗೆ ನಿಮ್ಮ ಬಗ್ಗೆ ಏನೂ ತಿಳಿದಿಲ್ಲ’ ಎಂದು ಹೇಳಿದ್ದೆ. ಆದರೆ, `ಗೊತ್ತಿಲ’್ಲ ಎಂದರೆ ನಿಜವಾಗಿಯೂ ಗೊತ್ತಿಲ್ಲ ಎಂದಲ್ಲ. `ನಾನು ನಿಮ್ಮ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಬೇಕಾಗಿದೆ’ ಎಂಬರ್ಥದಲ್ಲಿ ನಾನು ಅಂದು ಸೈಫ್ ಅವರಿಗೆ ಉತ್ತರ ಕೊಟ್ಟಿದ್ದೆ’ ಎಂದು ಕರೀನಾ ಹೇಳಿಕೊಂಡಿದ್ದಾರೆ.
ಹೀಗೇ ಮಾತು ಮುಂದುವರಿಸಿದ ಕರೀನಾ, `ನನ್ನ ಪ್ರಕಾರ ನಾನು ನನ್ನ ಬದುಕಿನ ಬಗ್ಗೆ ಸರಿಯಾದ ನಿರ್ಧಾರವನ್ನೇ ತೆಗೆದುಕೊಂಡಿದ್ದೇನೆ’ ಎಂದು ಸೈಫ್ ಅಲಿ ಖಾನ್ ಅವರನ್ನು ವರಿಸಿರುವ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಳ್ಳುವ ಜೊತೆಗೆ ಖುಷಿಯನ್ನೂ ವ್ಯಕ್ತಪಡಿಸಿದ್ದಾರೆ ಈ ಬಾಲಿವುಡ್ ಬ್ಯೂಟಿ. ಮದುವೆ ಬಳಿಕವೂ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಬಗ್ಗೆ ಮಾತನಾಡಿದ ಕರೀನಾ, `ನನಗೆ ನನ್ನ ವೈಯಕ್ತಿಕ ಜೀವನ ಮತ್ತು ವೃತ್ತಿ ಜೀವನದ ಬಗ್ಗೆ ಸ್ಪಷ್ಟತೆ ಇತ್ತು. ಮದುವೆಯ ಬಳಿಕ ನಾನು ನನ್ನ ಕೆಲಸವನ್ನು ನಿಲ್ಲಿಸುವುದಿಲ್ಲ ಎಂದು ಸೈಫ್‍ಗೆ ಅಂದೇ ಹೇಳಿದ್ದೆ, ಸೈಫ್ ಕೂಡಾ `ನೀನು ಖಂಡಿತಾ ಕೆಲಸ ಮಾಡಬೇಕು’ ಎಂದು ಹುರಿದುಂಬಿಸಿದ್ದರು ಎಂದು ಗಂಡನ ಬಗೆಗೆ ಮೆಚ್ಚುಗೆಯ ಮಾತನಾಡಿದ್ದಾರೆ ಕರೀನಾ.

ಮತ್ತಷ್ಟು ಸುದ್ದಿಗಳು

vertical

Latest News

ನೀವು ಭಯಗೊಂಡಾಗ ದೇಹದಲ್ಲಿ ಏನಾಗುತ್ತದೆ ಗೊತ್ತಾ?

ಭಯವು ಸಾಮಾನ್ಯ ಭಾವನೆಯಾಗಿದೆ. ಪ್ರತಿಯೊಬ್ಬರೂ ಒಂದಲ್ಲ ಒಂದು ಹಂತದಲ್ಲಿ ಹೆದರುತ್ತಾರೆ. ಆದರೆ ಕೆಲವರು ಸಣ್ಣ ವಿಷಯಗಳಿಗೂ ತುಂಬಾ ಹೆದರುತ್ತಾರೆ. ಅವರು ಯಾಕೆ ಹೆದರುತ್ತಾರೆ ಎಂದು ಅವರಿಗೆ ತಿಳಿದಿಲ್ಲ. ಕೆಲವರು ಹಾರರ್ ಸಿನಿಮಾಗಳನ್ನು...

ಹೂವು ಬಿಡಿಸಲು ಹೋಗಿದ್ದಾಗ ವಿದ್ಯುತ್ ತಂತಿ ತುಳಿದು ಮಹಿಳೆ ಸಾವು

newsics.com ದಾವಣಗೆರೆ: ಪಂಪ್​ಸೆಟ್​​ಗೆ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ  ಬಸವರಾಜಪುರದಲ್ಲಿ ನಡೆದಿದೆ. ಅಲಿಬಾಯಿ(62) ಮೃತ ರ್ದುದೈವಿ. ಹೂವು ಬಿಡಿಸಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬಸವಪಟ್ಟಣ...

ಜೈ ಶ್ರೀರಾಮ್‌ ಹೇಳುವಂತೆ ಗಡ್ಡಕ್ಕೆ ಬೆಂಕಿ ಹಚ್ಚಿ ವೃದ್ಧನ ಮೇಲೆ ಹಲ್ಲೆ

newsics.com ಕೊಪ್ಪಳ :  65 ವರ್ಷದ ಅಂಧ ಮುಸ್ಲಿಂ ವೃದ್ಧನಿಗೆ ಇಬ್ಬರು ಅನಾಮಿಕ ವ್ಯಕ್ತಿಗಳು ಗಂಗಾವತಿ ಟೌನ್‌ನಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದೆ. ಗಂಗಾವತಿಯಲ್ಲಿ ಒಂದು ಕಪ್‌ ಚಹಾ ಕುಡಿದು ಆಟೋರಿಕ್ಷಾಕ್ಕೆ ಕಾಯುತ್ತಿರುವಾಗ ಬೈಕ್‌ನಲ್ಲಿ ಇಬ್ಬರು...
- Advertisement -
error: Content is protected !!