Monday, October 2, 2023

ಆ.14ರಿಂದ ಜನಪ್ರಿಯ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮ ಆರಂಭ

Follow Us

newsics.com
ಬೆಂಗಳೂರು: ಎಸ್ ಪಿ ಬಾಲಸುಬ್ರಮಣ್ಯಂ ಅವರ ಸಾರಥ್ಯದಲ್ಲಿ ಸಂಗೀತ ಲೋಕದಲ್ಲಿ ‌ಹೊಸ ಸಂಚಲನ ಮೂಡಿಸಿದ್ದ ‘ ಎದೆ ತುಂಬಿ ಹಾಡುವೆನು’ ಸಂಗೀತ ಸ್ಪರ್ಧಾ ಸರಣಿ ಇದೀಗ ಮತ್ತೆ ಆರಂಭವಾಗುತ್ತಿದೆ.
ಕಲರ್ಸ್ ಕನ್ನಡದಲ್ಲಿ ಆ.14ರಿಂದ ಕಾರ್ಯಕ್ರಮ ಆರಂಭವಾಗುತ್ತಿದ್ದು, ವಿಶೇಷ ತೀರ್ಪುಗಾರರಾಗಿ ದಿ. ಎಸ್ ಪಿ ಬಿ ಪುತ್ರ ಎಸ್ ಪಿ ಚರಣ್ ಇರಲಿದ್ದಾರೆ.
ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ರಾಜೇಶ್ ಕೃಷ್ಣನ್, ವಿ.ಹರಿಕೃಷ್ಣ ಹಾಗೂ ರಘು ದೀಕ್ಷಿತ್ ಇರಲಿದ್ದಾರೆ.
ಅಲ್ಲದೆ ಎಸ್ ಪಿಬಿ ಅವರ ಮುಂದೆ ಸ್ಪರ್ಧಿಗಳಾಗಿದ್ದ 60 ಮಂದಿ ತೀರ್ಪುಗಾರರ ಸದಸ್ಯರಾಗಿ ಇರಲಿದ್ದಾರೆ.
ಕರ್ನಾಟಕದ 16 ಸ್ಪರ್ಧಿಗಳು ಈ ಬಾರಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಆರಂಭದ ದಿನದಿಂದು ಬಾಲಸುಬ್ರಮಣ್ಯಂ ಅವರ ಪ್ರತಿಮೆ ಶೋನಲ್ಲಿ ಅನಾವರಣಗೊಳ್ಳಲಿದ್ದು, ಅವರು ಬಳಸಿದ ಮೈಕ್ರೋಫೋನ್ ಕೂಡ ಇರಲಿದೆ.
ಈ ಬಗ್ಗೆ ಮಾತನಾಡಿದ ಕಲರ್ಸ್ ಕನ್ನಡ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್, ಮೂರ್ನಾಲ್ಕು ವರ್ಷಗಳ ಹಿಂದೆಯೇ ಎಸ್ ಪಿಬಿ ಅವರ ಬಳಿ ಎದೆ ತುಂಬಿ ಹಾಡುವೆನು ಆರಂಭ ಮಾಡೋಣ ಎಂದಿದ್ದೆ. ವೇಳಾಪಟ್ಟಿ ನೋಡಿ‌ತಿಳಿಸುತ್ತೇನೆ ಎಂದಿದ್ದ ಅವರಕ 2019ರಲ್ಲಿ ಆರಂಭಿಸೋಣ ಎಂದಿದ್ದರು. ಈಗ ಅವರಿಲ್ಲದೆ ಕಾರ್ಯಕ್ರಮ ಆರಂಭಿಸುವಂತಾಗಿದೆ ಎಂದಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನದ ತುರ್ತು ಬಾಗಿಲು ತೆರೆಯಲೆತ್ನಿಸಿದ ಪ್ರಯಾಣಿಕ: ತುರ್ತು ಭೂ ಸ್ಪರ್ಶ, ಬಂಧನ

newsics.com ದೇವನಹಳ್ಳಿ: ಟೇಕ್ಆಫ್ ಆಗುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಸ್ವಪ್ನೋಲ್...

ಸಾಮೂಹಿಕ ಪ್ರಾರ್ಥನೆ ವೇಳೆ ಚರ್ಚ್ ಛಾವಣಿ ಕುಸಿತ: 9 ಮಂದಿ ಸಾವು, 50 ಜನರಿಗೆ ಗಾಯ

newsics.com ಸಿಯುಡಾಡ್ ಮಡೆರೊ(ಮೆಕ್ಸಿಕೋ ಸಿಟಿ): ಭಾನುವಾರದ ಸಾಮೂಹಿಕ ಪ್ರಾರ್ಥನೆಯ ಸಮಯದಲ್ಲಿ ಚರ್ಚ್‌ನ ಛಾವಣಿ ಕುಸಿದು 9 ಜನರು ಸಾವನ್ನಪ್ಪಿದ್ದು, ಸುಮಾರು 50 ಜನರು ಗಾಯಗೊಂಡಿದ್ದಾರೆ. ಸುಮಾರು 30 ಮಂದಿ ಅವಶೇಷಗಳಡಿ ಸಿಕ್ಕಿಹಾಕಿಕೊಂಡಿದ್ದಾರೆ. ಉತ್ತರ ಮೆಕ್ಸಿಕೋದಲ್ಲಿ...

ವಿಮಾನದಲ್ಲಿ ಉಸಿರಾಟ ಸ್ಥಗಿತವಾಗಿದ್ದ ಮಗುವಿಗೆ ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ!

newsics.com ನವದೆಹಲಿ: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ವಿಮಾನದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ ನೀಡಿ ಮರುಜೀವ ನೀಡಿದ ಘಟನೆ ರಾಂಚಿ-ದೆಹಲಿ...
- Advertisement -
error: Content is protected !!