Saturday, June 10, 2023

ಕಿರುತೆರೆ ನಟಿ ವೈಭವಿ ಉಪಾಧ್ಯಾಯ ಇನ್ನಿಲ್ಲ

Follow Us

newsics.com

ಮುಂಬೈ: ಜನಪ್ರಿಯ ಕಿರುತೆರೆ ನಟಿ ವೈಭವಿ ಉಪಾಧ್ಯಾಯ (32) ಅವರು ಮಂಗಳವಾರ (ಮೇ 23) ಸಂಭವಿಸಿದ ಕಾರು ಅಪಘಾತದಲ್ಲಿ ಕೊನೆಯುಸಿರೆಳೆದರು.

ಹಿಮಾಚಲ ಪ್ರದೇಶದ ಕಣಿವೆಗೆ ಅವರಿದ್ದ ಕಾರು ಉರುಳಿ ಈ ದುರ್ಘಟನೆ ನಡೆದಿದೆ. ಪ್ರಯಾಣವನ್ನು ತುಂಬಾ ಇಷ್ಟಪಡುತ್ತಿದ್ದ ಆಕೆ ತನ್ನ ಭಾವೀ ಪತಿಯೊಂದಿಗೆ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ವೈಭವಿ ಉಪಾಧ್ಯಾಯ ಅವರು ಸಾರಾಭಾಯ್ ವರ್ಸಸ್ ಸಾರಾಭಾಯ್ ಎಂಬ ಟಿವಿ ಶೋನಲ್ಲಿ ಮಲ್ಲಿಗೆ ಪಾತ್ರ ನಿರ್ವಹಿಸುವ ಮೂಲಕ ಪ್ರಸಿದ್ಧರಾಗಿದ್ದರು.

ಆಕೆಯ ಸಾವಿನ ಸುದ್ದಿಯನ್ನು ಕಾರ್ಯಕ್ರಮ ನಿರ್ಮಾಪಕ ಜೆಡಿ ಮಜೇಥಿಯಾ ಖಚಿತಪಡಿಸಿದ್ದಾರೆ. ಆಕೆಯ ಪಾರ್ಥಿವ ಶರೀರವನ್ನು ಮುಂಬೈಗೆ ತರಲಾಗುತ್ತಿದ್ದು, ಬುಧವಾರ ಮುಂಬೈನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ವೈಭವಿ 2020 ರಲ್ಲಿ ‘ಛಪಾಕ್’ ಚಿತ್ರ ಮತ್ತು ‘ತಿಮಿರ್’ (2023) ನಲ್ಲಿ ದೀಪಿಕಾ ಪಡುಕೋಣೆ ಜತೆಯೂ ಕೆಲಸ ಮಾಡಿದ್ದರು.

ಮುಂಬೈ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದ ಯುವಕನ ಬಂಧನ

ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ; ಇಂದಿನ ದರ ಹೀಗಿದೆ

ಮತ್ತಷ್ಟು ಸುದ್ದಿಗಳು

vertical

Latest News

‘ಶಕ್ತಿ’ ಯೋಜನೆಗೆ ನಾಳೆ ಚಾಲನೆ: ನಿರ್ಮಲಾ ಸೀತಾರಾಮನ್‌ಗೆ ಆಹ್ವಾನ

Newsics ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ನಾಳೆ ಚಾಲನೆ ದೊರಕಲಿದೆ.

ಬ್ರಿಟನ್: ಸಂಸದ ಸ್ಥಾನಕ್ಕೆ ಬೋರಿಸ್ ಜಾನ್ಸನ್ ರಾಜೀನಾಮೆ!

Newsics.com ಲಂಡನ್: ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಇದೀಗ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ...

ಗಡಿಯಲ್ಲಿ ಪಾಕ್ ನಿಗೂಢ ಬಲೂನ್ ಪತ್ತೆ: ಸೇನೆಯಿಂದ ಶೋಧ ಕಾರ್ಯ

Newsics.com ಶ್ರೀನಗರ: ಪಾಕಿಸ್ತಾನದ ಅಂತರಾಷ್ಟ್ರೀಯ ಏರ್‌ಲೈನ್ಸ್ ಲಾಂಛನ ಇರುವ ವಿಮಾನದ ಆಕಾರದ ಅನುಮಾನಾಸ್ಪದ ಬಲೂನ್ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಶನಿವಾರ ಪತ್ತೆಯಾಗಿದೆ.
- Advertisement -
error: Content is protected !!