Saturday, December 2, 2023

ಅಕ್ರಮ ವಲಸಿಗರ ಗಡಿಪಾರು ಅಧಿಕಾರ ರಾಜ್ಯಗಳಿಗೆ

Follow Us

ನವದೆಹಲಿ: ಕಾನೂನುಬಾಹಿರ, ಅಕ್ರಮ ವಲಸಿಗರನ್ನು   ಬಂಧಿಸಿ ಗಡೀಪಾರು ಮಾಡುವ ಅಧಿಕಾರವನ್ನು  ಸಂವಿಧಾನದ ಪ್ರಕಾರ  ರಾಜ್ಯಗಳಿಗೆ  ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಬುಧವಾರ ರಾಜ್ಯಸಭೆಗೆ   ತಿಳಿಸಿದೆ.
ಕರ್ನಾಟಕದ ಅಕ್ರಮ ಬಾಂಗ್ಲಾದೇಶ ಮತ್ತು ಇತರ ವಲಸಿಗರ ಬಗ್ಗೆ ಇತ್ತೀಚಿನ ಎನ್‌ಐಎ ವರದಿಯನ್ನು ಪರಿಗಣಿಸಿ ಅಕ್ರಮ ವಲಸಿಗರನ್ನು ಗಡೀಪಾರು ಮಾಡಲು ಸರ್ಕಾರ ಯಾವುದೇ ನಿರ್ದಿಷ್ಟ ಕ್ರಮಗಳನ್ನು ಪರಿಗಣಿಸಿದೆಯೇ ಎಂಬ  ಪ್ರಶ್ನೆಗೆ ಉತ್ತರಿಸಿದ ಗೃಹ ಖಾತೆ ಸಹಾಯಕ ಸಚಿವ  ನಿತ್ಯಾನಂದ್ ರೈ,  ಅಕ್ರಮ ವಲಸಿಗರು  ಸರಿಯಾದ , ಪ್ರಯಾಣ ದಾಖಲೆಗಳಿಲ್ಲದೆ ವಾಸವಾಗಿದ್ದರೆ ಸಂವಿಧಾನದ ಪ್ರಕಾರ ಅಕ್ರಮವಾಗಿ ಉಳಿದುಕೊಂಡಿರುವ ವಿದೇಶಿ ಪ್ರಜೆಗಳನ್ನು ಬಂಧಿಸಿ, ಗಡೀಪಾರು ಮಾಡುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇದೆ ಎಂದು ಅವರು ಸ್ಪಷ್ಠಪಡಿಸಿದರು.
ವಿದೇಶಿ ಕಾಯ್ದೆ 1946 ರ ಸೆಕ್ಷನ್ 3 (2) (ಇ) ಅಡಿಯಲ್ಲಿ ದೇಶದಲ್ಲಿ ಅಕ್ರಮವಾಗಿ ಉಳಿದುಕೊಂಡಿರುವ ವಿದೇಶಿ ಪ್ರಜೆಯನ್ನು ಬಂಧಿಸುವ ಅಧಿಕಾರ ಕೇಂದ್ರಕ್ಕೂ ಇದೆ ಎಂದು ಮಾಹಿತಿ ನೀಡಿದರು.

ಮತ್ತಷ್ಟು ಸುದ್ದಿಗಳು

vertical

Latest News

ನೀವು ಭಯಗೊಂಡಾಗ ದೇಹದಲ್ಲಿ ಏನಾಗುತ್ತದೆ ಗೊತ್ತಾ?

ಭಯವು ಸಾಮಾನ್ಯ ಭಾವನೆಯಾಗಿದೆ. ಪ್ರತಿಯೊಬ್ಬರೂ ಒಂದಲ್ಲ ಒಂದು ಹಂತದಲ್ಲಿ ಹೆದರುತ್ತಾರೆ. ಆದರೆ ಕೆಲವರು ಸಣ್ಣ ವಿಷಯಗಳಿಗೂ ತುಂಬಾ ಹೆದರುತ್ತಾರೆ. ಅವರು ಯಾಕೆ ಹೆದರುತ್ತಾರೆ ಎಂದು ಅವರಿಗೆ ತಿಳಿದಿಲ್ಲ. ಕೆಲವರು ಹಾರರ್ ಸಿನಿಮಾಗಳನ್ನು...

ಹೂವು ಬಿಡಿಸಲು ಹೋಗಿದ್ದಾಗ ವಿದ್ಯುತ್ ತಂತಿ ತುಳಿದು ಮಹಿಳೆ ಸಾವು

newsics.com ದಾವಣಗೆರೆ: ಪಂಪ್​ಸೆಟ್​​ಗೆ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ  ಬಸವರಾಜಪುರದಲ್ಲಿ ನಡೆದಿದೆ. ಅಲಿಬಾಯಿ(62) ಮೃತ ರ್ದುದೈವಿ. ಹೂವು ಬಿಡಿಸಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬಸವಪಟ್ಟಣ...

ಜೈ ಶ್ರೀರಾಮ್‌ ಹೇಳುವಂತೆ ಗಡ್ಡಕ್ಕೆ ಬೆಂಕಿ ಹಚ್ಚಿ ವೃದ್ಧನ ಮೇಲೆ ಹಲ್ಲೆ

newsics.com ಕೊಪ್ಪಳ :  65 ವರ್ಷದ ಅಂಧ ಮುಸ್ಲಿಂ ವೃದ್ಧನಿಗೆ ಇಬ್ಬರು ಅನಾಮಿಕ ವ್ಯಕ್ತಿಗಳು ಗಂಗಾವತಿ ಟೌನ್‌ನಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದೆ. ಗಂಗಾವತಿಯಲ್ಲಿ ಒಂದು ಕಪ್‌ ಚಹಾ ಕುಡಿದು ಆಟೋರಿಕ್ಷಾಕ್ಕೆ ಕಾಯುತ್ತಿರುವಾಗ ಬೈಕ್‌ನಲ್ಲಿ ಇಬ್ಬರು...
- Advertisement -
error: Content is protected !!