Wednesday, May 31, 2023

ಅನರ್ಹತೆ ಎತ್ತಿಹಿಡಿದಿರುವುದು ನಿರಾಳತೆ ತಂದಿದೆ: ರಮೇಶ್ ಕುಮಾರ್

Follow Us

ಬೆಂಗಳೂರು: ಅನರ್ಹ ಶಾಸಕರ ಕುರಿತ ಸುಪ್ರೀಂಕೋರ್ಟ್ ತೀರ್ಪಿಗೆ ಪ್ರತಿಕ್ರಿಯಿಸಿರುವ ಮಾಜಿ ವಿಧಾನಸಭಾ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್, ಶಾಸಕರನ್ನು ಅನರ್ಹಗೊಳಿಸಿದ ತೀರ್ಪನ್ನು ನ್ಯಾಯಾಲಯ ಎತ್ತಿಹಿಡಿದಿರುವುದು ನಿರಾಳತೆ ತಂದಿದೆ ಎಂದಿದ್ದಾರೆ.

ಶಾಸಕರನ್ನು ಅನರ್ಹಗೊಳಿಸಿದ ತೀರ್ಪು ಸರಿಯಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟರೂ, ಇನ್ನೊಂದೆಡೆ ಅನರ್ಹತೆಯ ಅವಧಿ ನಿಗದಿಯನ್ನು ತಿರಸ್ಕರಿಸಿದೆ.

ಅನರ್ಹ ಶಾಸಕರಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಸುಪ್ರೀಂಕೋರ್ಟ್ ಅವಕಾಶ ನೀಡುವ ಮೂಲಕ ಅವರನ್ನು ಜನತಾ ನ್ಯಾಯಾಲಯದ ಮುಂದೆ ಪರೀಕ್ಷೆ ಎದುರಿಸುವಂತೆ ಸೂಚಿಸಿದೆ. ಜನರು ಏನು ನಿರ್ಧರಿಸುತ್ತಾರೋ ನೋಡೋಣ ಎಂದರು.

ರಾಜೀನಾಮೆ ಹಾಗೂ ಅನರ್ಹತೆಯನ್ನು ಒಂದೆ ತಕ್ಕಡಿಯಲ್ಲಿ ತೂಗಲು ಸಾಧ್ಯವಿಲ್ಲ. ರಾಜೀನಾಮೆ ಒಂದು ಗೌರವಯುತ ಪ್ರಕ್ರಿಯೆ. ಅನರ್ಹತೆ ಒಂದು ಶಿಕ್ಷೆ ಎಂದು ತೀರ್ಪಿನಲ್ಲಿ ಹೇಳಿದ್ದೇನೆ . ಕೆಲವರು ಸಿದ್ಧಾಂತದ ಮೇಲೆ ರಾಜೀನಾಮೆ ಕೊಡುತ್ತಾರೆ. ಇನ್ನು ಕೆಲವರು ಸರ್ಕಾರದ ತೀರ್ಮಾನದ ಮೇಲೆ ರಾಜೀನಾಮೆ ಸಲ್ಲಿಸುತ್ತಾರೆ. ಕೇಂದ್ರ ರೈಲ್ವೇ ಸಚಿವರಾಗಿದ್ದ ಲಾಲ್​ ಬಹದ್ದೂರು ಶಾಸ್ತ್ರಿ ಅವರು ರೈಲು ಅಪಘಾತದಲ್ಲಿ ಸಾಮಾನ್ಯ ಪ್ರಜೆಗಳು ಮೃತಪಟ್ಟ ಹಿನ್ನೆಲೆಯಲ್ಲಿ ಅವರು ನೊಂದು ರಾಜೀನಾಮೆ ನೀಡಿದ್ದರು. ಇದು ಗೌರವಯುತ ಪ್ರಕ್ರಿಯೆ. ಆದರೆ ಅನರ್ಹತೆ ಶಿಕ್ಷೆ . ಕಾನೂನು ಮೀರಿದಾಗ ಅನರ್ಹತೆ ಮಾಡಬೇಕಾಗುತ್ತದೆ. ಶಾಸಕರನ್ನು ಅನರ್ಹತೆ ಮಾಡಿ ವಿಧಿಸಿದ ಅವಧಿಯನ್ನು ಕೋರ್ಟ್​ ಒಪ್ಪದೆ, ಅದನ್ನು ಜನತಾ ನ್ಯಾಯಾಲಯದ ಮುಂದೆ ಬಿಟ್ಟಿದೆ. ಚುನಾವಣೆಯಲ್ಲಿ ಅದನ್ನು ಮತದಾರರು ನಿರ್ಧರಿಸುತ್ತಾರೆ ಎಂದರು.

ಮತ್ತಷ್ಟು ಸುದ್ದಿಗಳು

vertical

Latest News

Weekend With Ramesh; ಸಾಧಕರ ಕುರ್ಚಿಯಲ್ಲಿ ಡಿಕೆ ಶಿವಕುಮಾರ್!

newsics.com ಬೆಂಗಳೂರು: ಖಾಸಗಿವಾಹಿನಿಯಲ್ಲಿ ವೀಕೆಂಡ್ ವಿತ್ ರಮೇಶ್ ಐದನೇ ಸೀಸನ್​ನ ಈ ವಾರದ ಅತಿಥಿಯಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗಮಿಸಲಿದ್ದಾರೆ ಎನ್ನುವ ಗಾಳಿ ಸುದ್ದಿಯೊಂದು ಹಬ್ಬಿದೆ. ಭಾನುವಾರದ ಎಪಿಸೋಡ್...

ತರಬೇತಿ ವಿಮಾನ ತುರ್ತು ಭೂಸ್ಪರ್ಶ; ತಪ್ಪಿದ ಭಾರೀ ಅನಾಹುತ

newsics.com ಬೆಳಗಾವಿ: ತರಬೇತಿ ವಿಮಾನವೊಂದು ತಾಂತ್ರಿಕ ತೊಂದರೆಯಿಂದ  ತುರ್ತು ಭೂಸ್ಪರ್ಶ ಆಗಿದೆ. ಈ ಘಟನೆ ಬೆಳಗಾವಿ ತಾಲೂಕಿನ ಹೊನ್ನಿಹಾಳ ಹೊರವಲಯದಲ್ಲಿ ನಡೆದಿದೆ. ರೆಡ್‌ಬರ್ಡ್  ಸಂಸ್ಥೆಗೆ ಸೇರಿದ VT- RBF ತರಬೇತಿ ವಿಮಾನ ಇದಾಗಿದ್ದು, ಘಟನೆ ನಡೆದ...

ಆಪರೇಷನ್ ಪಠ್ಯ ಪುಸ್ತಕ; ಪಠ್ಯಗಳ ಪರಿಷ್ಕರಿಸ್ತೇವೆಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ

newsics.com ಬೆಂಗಳೂರು:  ಪಠ್ಯ ಪುಸ್ತಕ  ಪರಿಷ್ಕರಣೆ ನಾವು ಮಾಡ್ತೀವಿ. ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಪರಿಷ್ಕರಣೆ ಮಾಡ್ತೀವಿ. ಮಕ್ಕಳ ಮನಸ್ಸಿನಲ್ಲಿ ಕಲ್ಮಶ ತುಂಬುವ ಪಠ್ಯ ಕೈ ಬಿಡ್ತೀವಿ. ಈ ಬಗ್ಗೆ ಸಿಎಂ, ಡಿಸಿಎಂ ಜೊತೆ ಚರ್ಚಿಸಿ...
- Advertisement -
error: Content is protected !!