Tuesday, March 28, 2023

ಮಹಾರಾಷ್ಟ್ರದಲ್ಲಿ ಮುಂದುವರಿದ ಸರ್ಕಾರ ರಚನೆ ಕಸರತ್ತು

Follow Us

ಮುಂಬೈ: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಇನ್ನೂ ಚರ್ಚೆಗಳು ನಡೆಯುತ್ತಿವೆ. ಇಂದು ಶಿವಸೇನೆ ನಾಯಕರು ಸಭೆ ನಡೆಸಲಿದ್ದಾರೆ. ಬಿಜೆಯೊಂದಿಗೆ ಸರ್ಕಾರ ರಚನೆ ಬಗ್ಗೆ ಇಂದು ನಿರ್ಣಾಯಕ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ಚುನಾವಣೆ ಫಲಿತಾಂಶದ ಬಳಿಕ ಶಿವಸೇನೆ-ಬಿಜೆಪಿ ನಡುವೆ ಅಧಿಕಾರ ಹಂಚಿಕೆ ಕುರಿತು ಪರಸ್ಪರ ವಾಗ್ವಾದ ನಡೆದಿವೆ. ಚುನಾವಣೆಯಲ್ಲಿ ೫೬ ಸ್ಥಾನ ಗೆದ್ದಿರುವ ಶಿವಸೇನೆ ೫೦:೫೦ ಸೂತ್ರದಡಿ ಸಮ್ಮಿಶ್ರ ಸರ್ಕಾರ ರಚಿಸಲು ಬಯಸುತ್ತಿದೆ. ಒಂದು ವೇಳೆ ಶಿವಸೇನೆ ಮಾತಿಗೆ ಬಿಜೆಪಿ ಒಪ್ಪಿದರೆ ಮಹಾರಾಷ್ಟ್ರದಲ್ಲಿ ತಲಾ ೨.೫ ವರ್ಷ ಒಬ್ಬರು ಸಿಎಂ ಅಧಿಕಾರ ನಡೆಸಲಿದ್ದಾರೆ. ನಿನ್ನೆ ಬಿಜೆಪಿಯವರು ಸಭೆ ಸೇರಿ ದೇವೇಂದ್ರ ಫಡ್ನವೀಸ್ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಿದ್ದರು. ಇಂದು ಶಿವಸೇನೆ ಮುಖಂಡರು ತಮ್ಮ ನಾಯಕನನ್ನು ಆಯ್ಕೆ ಮಾಡಲಿದ್ದಾರೆ. ಏಕನಾಥ ಶಿಂಧೆ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಸುದ್ದಿಗಳು

vertical

Latest News

ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್‌) ಬಡ್ಡಿ ದರ ಶೇ.8.15 ಕ್ಕೆ ಏರಿಕೆ

newscics.com ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಭವಿಷ್ಯ ನಿಧಿಯ ಮೇಲಿನ ಬಡ್ಡಿ ದರವನ್ನುಬ ಹೆಚ್ಚಿಸಲು ತೀರ್ಮಾನಿಸಿದೆ....

ವಾಯುಮಾಲಿನ್ಯದಿಂದ 1,220 ಜನರು ಸಾವು

newscics.com ಮುಂಬೈ: ಮುಂಬೈನಲ್ಲಿ 2016-2021 ರ ನಡುವೆ 1,220 ಜನರು ವಾಯುಮಾಲಿನ್ಯದಿಂದ ಸಾವನ್ನಪ್ಪಿದ್ದಾರೆ. ಅಂಕಿಅಂಶಗಳ ಪ್ರಕಾರ, ಮುಂಬೈನಲ್ಲಿ 2016 ಮತ್ತು 2021 ರ ನಡುವೆ 1,220...

ಭಾರತದ ಮೊದಲ ಗೀರ್ ತದ್ರೂಪಿ ತಳಿ ಆಕಳ ಕರು ಜನನ

newsics.com ನವದೆಹಲಿ: ಭಾರತದ ಮೊದಲ ತದ್ರೂಪಿ ಗಿರ್ ತಳಿಯ ಆಕಳ ಕರು ಹರಿಯಾಣದ ಕರ್ನಾಲ್‌ನಲ್ಲಿರುವ ರಾಷ್ಟ್ರೀಯ ಡೈರಿ ಸಂಶೋಧನಾ ಸಂಸ್ಥೆ (NDRI) ಯಲ್ಲಿ ಜನ್ಮ ಪಡೆದಿದೆ.ಈ...
- Advertisement -
error: Content is protected !!