Wednesday, May 31, 2023

ರೈಲ್ವೆ ಟಿಕೆಟ್ ಹಣ ಮರುಪಾವತಿಗೆ ಹೊಸ ಯೋಜನೆ

Follow Us

ನವದೆಹಲಿ:  ರೈಲ್ವೆ ಟಿಕೆಟ್ ಕಾಯ್ದಿರಿಸುವಲ್ಲಿ ಏಜೆಂಟರ ಹಾವಳಿ ತಡೆಯಲು ಮುಂದಾಗಿರುವ ಐಆರ್ ಸಿಟಿಸಿ ನ್ಯಾಯಬದ್ಧವಾಗಿ ಟಿಕೆಟ್ ಕಾಯ್ದಿರಿಸಿ ನಂತರ ಅದನ್ನು ರದ್ದುಗೊಳಿಸಿದವರಿಗೆ ಹಣ ಮರುಪಾವತಿ ಕುರಿತು ಖಚಿತ ಮಾಹಿತಿ ಒದಗಿಸಲು ನೂತನ ಪಾಸ್ ವರ್ಡ್ ಆದಾರಿತ ವ್ಯವಸ್ಥೆ ಜಾರಿಗೊಳಿಸಿದೆ.

ಈ ವ್ಯವಸ್ಥೆಯಲ್ಲಿ ಟಿಕೆಟ್ ರದ್ದುಗೊಳಿಸಿದ ನಂತರ ಅದರ ಏಜೆಂಟ್ ಗೆ ಮರುಪಾವತಿಯಾದ ಹಣದ ಮಾಹಿತಿ ಟಿಕೆಟ್ ಕಾಯ್ದಿರಿಸಿದವರಿಗೆ ಲಭ್ಯವಾಗಲಿದೆ. ಆದರೆ, ಇದು ವೇಯ್ಟಿಂಗ್ ಲೀಸ್ಟ್ ನಲ್ಲಿದ್ದ ಮತ್ತು ಕನ್ಫರ್ಫ್ ಆಗದ ಹಾಗೂ ಇ-ಟಿಕೆಟ್ ಗಳಿಗೆ ಸೀಮಿತವಾಗಿದೆ. ಕಾಯ್ದಿರಿಸಿದ ಟಿಕೆಟ್ ಗಳಿಗೆ ರೈಲ್ವೆ ಇಲಾಖೆಯ ಟಿಕೆಟ್ ಕೌಂಟರ್ ಗಳಲ್ಲಿ ರದ್ದುಗೊಳಿಸಲು ಸಾಧ್ಯವಿಲ್ಲ.

ಇದರಲ್ಲಿ ಗ್ರಾಹಕರು ಟಿಕೆಟ್ ರದ್ದುಗೊಳಿಸಿದ ನಂತರ ಅದರ ಹಣ ಮರುಪಾವತಿ ಕುರಿತು ಅವರು ಟಿಕೆಟ್ ಕಾಯ್ದಿರಿಸುವಾಗ ನೀಡಿದ್ದ ಮೊಬೈಲ್ ಫೋನ್ ಸಂಖ್ಯೆಗೆ ಎಸ್ ಎಂಎಸ್ ರೂಪದಲ್ಲಿ ಓಟಿಪಿ ಬರುತ್ತದೆ. ಆ ಓಟಿಪಿಯನ್ನು ಏಜೆಂಟರಿಗೆ ನೀಡಿದಾಗ ಮಾತ್ರ ಮರುಪಾವತಿ ಪ್ರಕ್ರಿಯೆ ಆರಂಭವಾಗುತ್ತದೆ.

ಮತ್ತಷ್ಟು ಸುದ್ದಿಗಳು

vertical

Latest News

ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ದುಷ್ಕೃತ್ಯ ಸಂಚು: ದಕ್ಷಿಣ ಕನ್ನಡದ 16 ಕಡೆ NIA ದಾಳಿ

newsics.com ಮಂಗಳೂರು: ಪ್ರಧಾನಿ ಮೋದಿಯವರ ಬಿಹಾರ ಕಾರ್ಯಕ್ರಮದ ವೇಳೆ ದುಷ್ಕೃತ್ಯ ಸಂಚು ರೂಪಿಸಿದ್ದ ಹಿನ್ನೆಲೆಯಲ್ಲಿ ಬುಧವಾರ ರಾಷ್ಟ್ರೀಯ ತನಿಖಾ ದಳ (ಎನ್ಐಎ) ದಕ್ಷಿಣ ಕನ್ನಡ ಜಿಲ್ಲೆಯ 16‌...

ಸಮುದ್ರಕ್ಕೆ ಬಿತ್ತು ಉತ್ತರ ಕೊರಿಯಾ ಉಡಾಯಿಸಿದ ‘ಗೂಢಚರ್ಯೆ ಉಪಗ್ರಹ’

newsics.com ಸೋಲ್: ಉತ್ತರ ಕೊರಿಯಾ ಬುಧವಾರ ಉಡಾವಣೆ ಮಾಡಿದ ಗೂಢಚರ್ಯೆ ಉಪಗ್ರಹ ಸಮುದ್ರದ ಪಾಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ತಾಂತ್ರಿಕ ಕಾರಣಗಳಿಂದಾಗಿ ಗೂಢಚರ್ಯೆ ಉಪಗ್ರಹ ಸಮುದ್ರಕ್ಕೆ ಬಿದ್ದಿದೆ ಎಂದು ಉತ್ತರ ಕೊರಿಯಾ ಮಾಧ್ಯಮಗಳು ತಿಳಿಸಿವೆ. ಮೊದಲು...

ರಾಜ್ಯದ ಹಲವೆಡೆ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

newsics.com ಹಾವೇರಿ/ತುಮಕೂರು/ಶಿವಮೊಗ್ಗ: ಇಂದು(ಮೇ 31) ಬೆಳ್ಳಂಬೆಳಗ್ಗೆ ಹಾವೇರಿ, ತುಮಕೂರು ಹಾಗೂ ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದಲ್ಲಿರುವ ನಿರ್ಮಿತಿ ಕೇಂದ್ರದ ಇಂಜಿನಿಯರ್ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ದಾಳಿ...
- Advertisement -
error: Content is protected !!