ಬೆಂಗಳೂರು: ಹುಬ್ಬಳ್ಳಿ- ಸೊಲ್ಲಾಪುರ ಚತುಷ್ಪಥ ಹೆದ್ದಾರಿ ನಿರ್ಮಾಣ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.
ಈ ಹೆದ್ದಾರಿಯನ್ನು ಚತುಷ್ಪಥ ಹೆದ್ದಾರಿಯಾಗಿಸುವ ಅಗತ್ಯದ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟ ಕೂಡಲೇ ಕೇಂದ್ರ ಸಚಿವರು ತಾತ್ವಿಕ ಒಪ್ಪಿಗೆ ನೀಡಿ, ಈ ಚತುಷ್ಪಥ ಹೆದ್ದಾರಿ ಕಾಮಗಾರಿ ನಿರ್ಮಾಣಕ್ಕೆ ಭೂ ಸ್ವಾಧೀನ ಪ್ರಕ್ರಿಯೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದರು.
ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಈ ಒಪ್ಪಿಗೆ ನೀಡಿದ್ದಾರೆ ಎಂದು ಗೋವಿಂದ ಕಾರಜೋಳ ತಿಳಿಸಿದರು.
ಹುಬ್ಬಳ್ಳಿ- ಸೊಲ್ಲಾಪುರ ಚತುಷ್ಪಥ ಹೆದ್ದಾರಿಗೆ ಕೇಂದ್ರ ಒಪ್ಪಿಗೆ
Follow Us