Monday, October 2, 2023

ಪಾಕ್ ವಿರುದ್ದ ಒಂದೆರಡು ಸರ್ಜಿಕಲ್‌ ಸ್ಟ್ರೈಕ್ಸ್‌ ಮಾಡಿ ಎಂದ ಪಂಜಾಬ್‌ ರಾಜ್ಯಪಾಲರು

Follow Us

newsics.com

ಅಮೃತಸರ: ಪಾಕಿಸ್ತಾನ ದೇಶಕ್ಕೆ ಪಾಠ ಕಲಿಸಬೇಕಾದರೆ ಒಂದೆರಡು ಸರ್ಜಿಕಲ್‌ ಸ್ಟ್ರೈಕ್‌ ಆದರೂ ಆಗಬೇಕೆಂದು ಪಂಜಾಬ್‌ ರಾಜ್ಯಪಾಲ ಬನ್ವರಿಲಾಲ್‌ ಪುರೋಹಿತ್‌ ಅವರು ಗಂಭೀರ ಸಲಹೆ ನೀಡಿದ್ದಾರೆ.

ಪಾಕಿಸ್ತಾನದಿಂದ ಮಿತಿ ಮೀರಿ ಬರುತ್ತಿರುವ ಮಾದಕ ವಸ್ತುಗಳ ಹಿನ್ನೆಲೆಯಲ್ಲಿ ಅವರು ನೀಡಿರುವ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಪಾಕಿಸ್ತಾನ ದೇಶದಲ್ಲಿ ಬೆಳೆಯುವ ಮಾದಕ ವಸ್ತುಗಳನ್ನು ಭಾರತಕ್ಕೆ ಸಾಗಿಸಲಾಗುತ್ತಿದೆ. ಇದರಿಂದ ನಮ್ಮವರಿಗೆ ತೊಂದರೆಯಾಗುತ್ತಿದೆ. ಈ ವಿಚಾರದಲ್ಲಿ ಪಾಕಿಸ್ತಾನಕ್ಕೆ ಪಾಠ ಕಲಿಸಬೇಕೆಂದರೆ ಒಂದೆರಡು ಸರ್ಜಿಕಲ್‌ ಸ್ಟ್ರೈಕ್‌ ಅನ್ನು ಮಾಡಲೇಬೇಕಾಗಿದೆ ಎಂದು ಪಂಜಾಬ್‌ನ ಗಡಿ ಭಾಗದಲ್ಲಿ ಕೈಗೊಂಡಿರುವ ಎರಡು ದಿನದ ಪ್ರವಾಸದ ವೇಳೆ ಪುರೋಹಿತ್‌ ಹೇಳಿದರು.

ಮುಂದಿನ ಪೀಳಿಗೆ ಮಾದಕ ವಸ್ತುಗಳ ಚಟದಿಂದ ದೂರವಿರಬೇಕು. ಪಾಕಿಸ್ತಾನವು ಈ ವಿಚಾರದಲ್ಲಿ ಭಾರತದೊಂದಿಗೆ ಆಟವಾಡುತ್ತಿದೆ. ಇದನ್ನು ಸಹಿಸಲಾಗದು. ಭಾರತದ ವಿರುದ್ದ ಪಾಕಿಸ್ತಾನಕ್ಕೆ ನೇರ ಯುದ್ದ ಮಾಡಲು ಶಕ್ತಿಯಿಲ್ಲ. ಮಾದಕ ವಸ್ತುಗಳ ಸಾಗಣೆಯನ್ನೇ ಅಘೋಷಿತ ಯುದ್ದದಂತೆ ಮಾಡಲಾಗುತ್ತಿದೆ. ದ್ರೋಣ್‌ಗಳನ್ನೂ ಬಳಸುತ್ತಿದೆ. ಇದಕ್ಕಾಗಿಯೇ ಸರ್ಜಿಕಲ್‌ ಸ್ಟ್ರೈಕ್‌ಗಳು ಬೇಕಾಗಿದೆ ಎನ್ನುವುದು ನನ್ನ ನಿಲುವು ಎಂದರು ಪುರೋಹಿತ್‌.

ಡೊನಾಲ್ಡ್ ಟ್ರಂಪ್ ವಿರುದ್ಧ ದೋಷಾರೋಪಪಟ್ಟಿ ಸಲ್ಲಿಕೆ

ಮತ್ತಷ್ಟು ಸುದ್ದಿಗಳು

vertical

Latest News

ಮೊಸಳೆಯೊಂದಿಗೆ ಬೇಸ್ ಬಾಲ್ ಮ್ಯಾಚ್ ನೋಡಲು ಬಂದ ಪ್ರಾಣಿ ಪ್ರೇಮಿ!

newsics.com ಅಮೆರಿಕ: ಮನೆಯಲ್ಲಿ ಸಾಕಿದ್ದ ಮೊಸಳೆಯೊಂದಿಗೆ ಬೇಸ್‌ಬಾಲ್ ಮ್ಯಾಚ್‌ ನೋಡಲು ಸ್ಟೇಡಿಯಂ ಬಂದ ಪ್ರಾಣಿ ಪ್ರೇಮಿಯೊಬ್ಬನನ್ನು ಕಂಡು ಭದ್ರತಾ ಸಿಬ್ಬಂದಿ ದಂಗಾಗಿ ಪ್ರವೇಶ ನಿರಾಕರಿಸಿರುವ ಪ್ರಸಂಗ ಅಮೆರಿಕಾದ...

ಜಿಪಿಎಸ್ ಮ್ಯಾಪ್ ಎಡವಟ್ಟು: ಕಾರು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರ ಸಾವು

newsics.com ತಿರುವನಂತಪುರಂ: ಜಿಪಿಎಸ್ ಮ್ಯಾಪ್ ತೋರಿಸಿದ ದಾರಿಯಲ್ಲಿ ಹೋದ ಕಾರೊಂದು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರು ಮೃತಪಟ್ಟ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದೆ. ತಡರಾತ್ರಿ ಭಾರಿ ಮಳೆಯ ಕಾರಣ ಅವಘಡ ಸಂಭವಿಸಿದೆ. ಮೃತರನ್ನು ಡಾ.ಅದ್ವೈತ್ (29)...

ವರದಿಗಾರ್ತಿ ಮೇಲೆ ರೇಗಿದ ಅಣ್ಣಾಮಲೈ: ಖಂಡನೆ

newsics.com ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮಹಿಳಾ ವರದಿಗಾರರೊಬ್ಬರ ಮೇಲೆ ಸಿಟ್ಟಾಗುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ವರದಿಗಾರ್ತಿ ಜೊತೆ ಅಣ್ಣಾಮಲೈ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ...
- Advertisement -
error: Content is protected !!