Monday, October 2, 2023

ಅತ್ಯಾಚಾರ ಕಾನೂನು ತಿದ್ದುಪಡಿಗೆ ಸರ್ಕಾರ ಸಿದ್ಧ : ರಾಜನಾಥ್ ಸಿಂಗ್

Follow Us

 

ನವದೆಹಲಿ: ತೆಲಂಗಾಣದ ಪಶುವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ಚರ್ಚೆ ಹಾಗೂ ಕಾನೂನು ತಿದ್ದುಪಡಿಗೆ ಸಿದ್ಧವಿರುವುದಾಗಿ ಕೇಂದ್ರ ಸರ್ಕಾರ ಸೋಮವಾರ ಲೋಕಸಭೆಗೆ ತಿಳಿಸಿದೆ.
  
  ಇಂತಹ ಹೇಯ ಕೃತ್ಯ ಖಂಡಿಸಲು ಯಾವುದೇ ಪದಗಳಿಲ್ಲ. ಇಂತಹ ಅಮಾನವೀಯ ಘಟನೆ ನಾಚಿಕೆಗೇಡಿನ ಸಂಗತಿ ಎಂದು ಶೂನ್ಯವೇಳೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
 
 ದೆಹಲಿಯ ನಿರ್ಭಯಾ ಪ್ರಕರಣದ ನಂತರ ಹೊಸ ಕಾನೂನು ಜಾರಿಯಾಗಿದ್ದರೂ ಇಂತಹ ಪ್ರಕರಣಗಳು ನಿಂತಿಲ್ಲ. ಈ ವಿಷಯದ ಚರ್ಚೆಗೆ ಯಾವುದೇ ವಿರೋಧವಿಲ್ಲ. ಕಾನೂನು ತಿದ್ದುಪಡಿಗೆ ಸರ್ಕಾರ ಸಿದ್ಧವಿದ್ದು ಚರ್ಚೆ ಸಂಬಂಧ ನಿರ್ಧಾರವನ್ನು ಸ್ಪೀಕರ್ ಓಂ ಬಿರ್ಲಾ ಕೈಗೊಳ್ಳಲಿದ್ದಾರೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
  
  ಇಂತಹ ಹೇಯ ಕೃತ್ಯಗಳು ನೋವುಂಟು ಮಾಡುತ್ತವೆ ಎಂದು ಸ್ಪೀಕರ್ ಅಸಮಾಧಾನ ವ್ಯಕ್ತಪಡಿಸಿದರು. ವ್ಯಾಪಾರ ಸಲಹಾ ಸಮಿತಿ ಈ ಸಂಬಂಧ ಚರ್ಚೆ ನಡೆಸಲಿದೆ ಎಂದ ಅವರು, ಅಗತ್ಯವಿದ್ದಲ್ಲಿ ಕಾನೂನಿಗೆ ಸೂಕ್ತ ತಿದ್ದುಪಡಿ ತರಲಾಗುವುದು ಎಂದರು.
  
  ಮಹಿಳೆಯರ ವಿರುದ್ಧದ ಅಪರಾಧ ತಗ್ಗಿಸಲು ಸರ್ಕಾರ ಕ್ರಮ ಕೈಗೊಳ್ಳಲು ಸಿದ್ಧವಿದೆ. ಸಂತ್ರಸ್ತರ ನೆರವಿಗಾಗಿ ಈಗಾಗಲೇ ಅನೇಕ ತುರ್ತು ಪ್ರತಿಕ್ರಿಯಾ ವ್ಯವಸ್ಥೆಗಳಿವೆ ಎಂದು ಗೃಹ ಖಾತೆ ರಾಜ್ಯ ಸಚಿವ ಜಿ ಕಿಶನ್ ರೆಡ್ಡಿ ಹೇಳಿದರು.

ಮತ್ತಷ್ಟು ಸುದ್ದಿಗಳು

vertical

Latest News

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ...

Asian Games; ಭಾರತಕ್ಕೆ ಒಂದೇ ದಿನ 15 ಪದಕ

newsics.com ಹ್ಯಾಂಗ್‌ಝೌ: ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ 8ನೇ ದಿನವಾದ ಭಾನುವಾರ ಒಂದೇ ದಿನ 15 ಪದಕ ಬಾಚಿಕೊಂಡಿದೆ. 7ನೇ ದಿನವಾದ ಶನಿವಾರ 10 ಚಿನ್ನ, 14 ಬೆಳ್ಳಿ ಮತ್ತು 14 ಕಂಚಿನೊಂದಿಗೆ 38 ಪದಕಗಳನ್ನು ಭಾರತ...

ಬೆಂಗಳೂರು ಕಂಬಳ: ಕೋಣಗಳಿಗೆ ಮಂಗಳೂರಿಂದಲೇ ಬರುತ್ತೆ ಕುಡಿಯುವ ನೀರು!

newsics.com ಬೆಂಗಳೂರು: ನವೆಂಬರ್ ತಿಂಗಳ 25 ಮತ್ತು 26ನೇ ತಾರೀಕಿನಂದು ಮೊದಲ ಬಾರಿಗೆ ತುಳುನಾಡಿನ ಗಡಿಯನ್ನು ದಾಟಿ ಬೆಂಗಳೂರಿನಲ್ಲಿ ಕರಾವಳಿಯ ಸಾಂಸ್ಕೃತಿಕ ಕ್ರೀಡೆ ಕಂಬಳ ನಡೆಯುತ್ತಿದೆ. ಪುತ್ತೂರು ಶಾಸಕ ಅಶೋಕ್‌ ಕುಮಾರ್ ರೈ ನೇತೃತ್ವದಲ್ಲಿ ಕಂಬಳ...
- Advertisement -
error: Content is protected !!