Wednesday, May 31, 2023

ಕಾಲು ಕಳೆದುಕೊಂಡ ವ್ಯಕ್ತಿಗೆ 63 ಲಕ್ಷ ರೂ. ಪರಿಹಾರ

Follow Us

ಚೆನ್ನೈ; ನಗರ ಸಂಸ್ಥೆ ದುರಸ್ತಿಗೊಳಿಸುತ್ತಿದ್ದ ದೀಪದ ಕಂಬ ಬಿದ್ದ ಪರಿಣಾಮ ಕಾಲು ಕಳೆದುಕೊಂಡು ಅಂಗವಿಕಲನಾದ ವ್ಯಕ್ತಿಗೆ  ಮದ್ರಾಸ್ ಹೈಕೋರ್ಟ್ 63 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.

ಚೆನ್ನೈ ನಗರ ಪಾಲಿಕೆ ಮತ್ತು ತಮಿಳುನಾಡು ವಿದ್ಯುತ್ ಪ್ರಸರಣದ ನಿಗಮದ ನಿರ್ಲಕ್ಷ್ಯದಿಂದ ಆನಂದ್ ಕುಮಾರ್ ಎಂಬ ವ್ಯಕ್ತಿ ತನ್ನ ಸಂಪೂರ್ಣ ಜೀವನವನ್ನು ವ್ಹೀಲ್ ಚೇರ್ ನಲ್ಲಿ ಕಳೆಯುವಂತಾಗಿದೆ ಎಂಬ ಅಂಶವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಪೀಠ, ಶೀಘ್ರದಲ್ಲಿ ಆತನಿಗೆ ಪರಿಹಾರ ನೀಡುವಂತೆ ನಗರ ಪಾಲಿಕೆಗೆ ಸೂಚಿಸಿದೆ.

2009ರ  ಏಪ್ರಿಲ್ ನಲ್ಲಿ ಚೆನ್ನೈನ ಮರೀನಾ ಬೀಚ್ ನಲ್ಲಿ ವಿದ್ಯುತ್ ಕಂಬ ದುರಸ್ತಿಗೊಳಿಸುತ್ತಿದ್ದ ವೇಳೆ ಕರೌಸಲ್ ನಿರ್ವಾಹಕ ಎನ್. ಆನಂದ್ ಕುಮಾರ್ ಕಾಲ ಮೇಲೆ ವಿದ್ಯುತ್ ಕಂಬ ಬಿದ್ದು ಆತ ಶಾಶ್ವತ ಅಂಗವಿಕಲನಾಗಿದ್ದ. ಈತನಿಗೆ ಪರಿಹಾರ ನೀಡುವಂತೆ ಕೆಳ ನ್ಯಾಯಾಲಯ ನೀಡಿದ್ದ ತೀರ್ಪು ಪ್ರಶ್ನಿಸಿ ಚೆನ್ನೈ ನಗರ ಪಾಲಿಕೆ ಮೇಲ್ಮನವಿ ಸಲ್ಲಿಸಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

ಮಲಯಾಳಂ ಚಿತ್ರರಂಗದ ಖ್ಯಾತ ನಟ ಹರೀಶ್ ಪೆಂಗನ್ ನಿಧನ

newsics.com ಮಲಯಾಳಂ ಚಿತ್ರರಂಗದ ಖ್ಯಾತ ಕಲಾವಿದ ಹರೀಶ್ ಪೆಂಗನ್ ಅವರು ಮಂಗಳವಾರ (ಮೇ 30) ನಿಧನ ಹೊಂದಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ಹರೀಶ್ ಅವರು ಕಳೆದ...

ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ದುಷ್ಕೃತ್ಯ ಸಂಚು: ದಕ್ಷಿಣ ಕನ್ನಡದ 16 ಕಡೆ NIA ದಾಳಿ

newsics.com ಮಂಗಳೂರು: ಪ್ರಧಾನಿ ಮೋದಿಯವರ ಬಿಹಾರ ಕಾರ್ಯಕ್ರಮದ ವೇಳೆ ದುಷ್ಕೃತ್ಯ ಸಂಚು ರೂಪಿಸಿದ್ದ ಹಿನ್ನೆಲೆಯಲ್ಲಿ ಬುಧವಾರ ರಾಷ್ಟ್ರೀಯ ತನಿಖಾ ದಳ (ಎನ್ಐಎ) ದಕ್ಷಿಣ ಕನ್ನಡ ಜಿಲ್ಲೆಯ 16‌ ಕಡೆ ದಾಳಿ‌ ನಡೆಸಿದೆ. ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ,...

ಸಮುದ್ರಕ್ಕೆ ಬಿತ್ತು ಉತ್ತರ ಕೊರಿಯಾ ಉಡಾಯಿಸಿದ ‘ಗೂಢಚರ್ಯೆ ಉಪಗ್ರಹ’

newsics.com ಸೋಲ್: ಉತ್ತರ ಕೊರಿಯಾ ಬುಧವಾರ ಉಡಾವಣೆ ಮಾಡಿದ ಗೂಢಚರ್ಯೆ ಉಪಗ್ರಹ ಸಮುದ್ರದ ಪಾಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ತಾಂತ್ರಿಕ ಕಾರಣಗಳಿಂದಾಗಿ ಗೂಢಚರ್ಯೆ ಉಪಗ್ರಹ ಸಮುದ್ರಕ್ಕೆ ಬಿದ್ದಿದೆ ಎಂದು ಉತ್ತರ ಕೊರಿಯಾ ಮಾಧ್ಯಮಗಳು ತಿಳಿಸಿವೆ. ಮೊದಲು...
- Advertisement -
error: Content is protected !!