Saturday, December 2, 2023

ಕುದುರೆಯ ಮಲದಲ್ಲಿ ಚಿನ್ನ ಸಾಗಾಟ ಓರ್ವನ ಬಂಧನ

Follow Us

ಕೋಲ್ಕತ್ತ; ಚಿನ್ನ ಕಳ್ಳಸಾಗಾಟಕ್ಕೆ ಪ್ರತಿದಿನ ನಾನಾ ತಂತ್ರಗಳ ಮೊರೆ ಹೋಗುತ್ತಿದ್ದಾರೆ. ಅದೃಷ್ಟ ಕೈ ಕೊಟ್ಟಾಗ ಮಾತ್ರ  ಎಲ್ಲವೂ ಉಲ್ಟಾ ಪಲ್ಟಾ..  ಕೋಲ್ಕತ್ತಾದಲ್ಲಿ ಇಂತಹದೇ ಘಟನೆ ನಡೆದಿದೆ.  ಇಲ್ಲಿನ ನೇತಾಜಿ ಸುಭಾಷ್ ಚಂದ್ರ ಬೋಸ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನೊಬ್ಬನನ್ನು  ಸಿಐಎಸ್ ಎಫ್ ವಶಕ್ಕೆ ಪಡೆದಿತ್ತು. ಸಮಗ್ರ ವಿಚಾರಣೆ ನಡೆಸಿದ ವೇಳೆ  8 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಪತ್ತೆಯಾಯಿತು. 162 ಗ್ರಾಂ ಚಿನ್ನವನ್ನು ನೀಲಿ ಕಾರ್ಬನ್ ಪೇಪರ್ ನಲ್ಲಿ ಸುಂದರವಾಗಿ ಸುತ್ತಿ ಬಚ್ಚಿಟ್ಟಿದ್ದ. ಈ ಕಾರ್ಬನ್ ಪೇಪರ್ ನಲ್ಲಿ ಕುದುರೆ ಮಲವನ್ನು ಕೂಡ ಇಟ್ಟಿದ್ದ. ಅದರೊಳಗೆ ಚಿನ್ನದ ತುಂಡುಗಳನ್ನು ಇರಿಸಿ ಕಳ್ಳಸಾಗಾಟಕ್ಕೆ ಯತ್ನಿಸಿದ್ದ. ಆರೋಪಿ  ಅಂಗುಸ್ವಾಮಿ ರಾಮಯ್ಯನನ್ನು ಇದೀಗ ಬಂಧಿಸಲಾಗಿದೆ. ಮ್ಯಾನ್ಮಾರ್ ನಿಂದ ಬಂದಿದ್ದ ಆರೋಪಿ ಚೆನ್ನೈಗೆ ತೆರಳುವ ಸಂದರ್ಭದಲ್ಲಿ ಪೊಲೀಸರ ಬಲೆಗೆ ಬಿದ್ದ. ಒಟ್ಟು 215 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದ್ದು, ಮಾರುಕಟ್ಟೆ ಮೌಲ್ಯ ಎಂಟು ಲಕ್ಷ ಎಂದು ಅಂದಾಜಿಸಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಆಸ್ಟ್ರೇಲಿಯಾದಲ್ಲಿ ಪಾಕಿಸ್ತಾನಕ್ಕೆ ಅವಮಾನ: ಟ್ರಕ್‌’ಗೆ ತಾವೇ ಲಗೇಜ್‌ ಲೋಡ್‌ ಮಾಡಿದ ಆಟಗಾರರು

newsics.com ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ಪ್ರವಾಸಕ್ಕೆ ತೆರಳಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರರು ವಿಮಾನ ನಿಲ್ದಾಣದಲ್ಲಿ ತಮ್ಮ ಲಗೇಜ್ ಅನ್ನು ತಾವೇ ಟ್ರಕ್ ತುಂಬುತ್ತಿರುವ ವಿಡಿಯೋವೊಂದು ವೈರಲ್...

ರಾಜ್ಯದ 36 ಲಕ್ಷ ಮತದಾರರಿಗೆ ಚುನಾವಣಾ ಆಯೋಗ ನೋಟಿಸ್

newsics.com ಬೆಂಗಳೂರು: ಮತದಾರರ ಪಟ್ಟಿಯಲ್ಲಿ ಎರಡು ಕಡೆ ಹೆಸರಿರುವ ಅಥವಾ ಹೆಸರು ನಕಲು ಮಾಡಿರುವ 36 ಲಕ್ಷ ಮತದಾರರಿಗೆ ರಾಜ್ಯ ಚುನಾವಣಾ ಆಯೋಗವು ಭಾರತೀಯ ಅಂಚೆ ಮೂಲಕ ನೋಟಿಸ್ ನೀಡುವ ಪ್ರಕ್ರಿಯೆಯನ್ನು ಆರಂಭಿಸಿದೆ. ಹೆಚ್ಚುವರಿಯಾಗಿ, ಮುಂದಿನ...

ಅಸಲಿ ಚಿನ್ನದ ಜಾಗದಲ್ಲಿ ನಕಲಿ ಬಂಗಾರವಿಟ್ಟು ಗ್ರಾಹಕರಿಗೆ ವಂಚಸಿದ ಬ್ಯಾಂಕ್ ಸಿಬ್ಬಂದಿ

newsics.com ಚಿಕ್ಕಮಗಳೂರು: ಗ್ರಾಹಕರಿಗೆ ಬ್ಯಾಂಕ್‌ ಸಿಬ್ಬಂದಿ ಕೋಟ್ಯಂತರ ರೂಪಾಯಿ ವಂಚಿಸಿರುವ ಘಟನೆ ಚಿಕ್ಕಮಗಳೂರು ನಗರದ ಐ.ಜಿ. ರಸ್ತೆಯಲ್ಲಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ನಡೆದಿದೆ. 6 ಕೋಟಿಗೂ ಅಧಿಕ ಹಣ ದುರುಪಯೋಗದ ಆರೋಪ...
- Advertisement -
error: Content is protected !!