Monday, December 11, 2023

ಜೈಲಲ್ಲಿ ನಿರ್ಭಯಾ ಅಪರಾಧಿಗಳ ಸಂಪಾದನೆ 1.37 ಲಕ್ಷ!

Follow Us

ನವದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳು ಕಳೆದ ಏಳು ವರ್ಷಗಳ ಅವಧಿಯಲ್ಲಿ 1.37 ಲಕ್ಷ ರೂ. ಸಂಪಾದಿಸಿದ್ದಾರೆ.
ನಾಲ್ವರು ಅಪರಾಧಿಗಳಾದ ಅಕ್ಷಯ್ ಠಾಕೂರ್ ಸಿಂಗ್, ಮುಕೇಶ್, ಪವನ್ ಗುಪ್ತ ಹಾಗೂ ವಿನಯ್ ಶರ್ಮ ತಮ್ಮ ಏಳು ವರ್ಷದ ಜೈಲು ವಾಸದಲ್ಲಿ 1,37,000 ರೂ. ಸಂಪಾದನೆ ಮಾಡಿದ್ದಾರೆ. 23 ಬಾರಿ ಜೈಲು ನಿಯಮ ಉಲ್ಲಂಘಿಸಿದ್ದಾರೆ ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.
ಅಪರಾಧಿ ಮುಕೇಶ್ ಜೈಲಿನಲ್ಲಿ ಯಾವುದೇ ಕೂಲಿ ಕೆಲಸವನ್ನು ಆಯ್ದುಕೊಂಡಿರಲಿಲ್ಲ. 2016ರಲ್ಲಿ ಮುಕೇಶ್, ಪವನ್ ಹಾಗೂ ಅಕ್ಷಯ್ ಎಸ್ಎಸ್ಎಲ್ಸಿ ಪರೀಕ್ಷೆ ಎದುರಿಸಿದ್ದರೂ ಉತ್ತೀರ್ಣರಾಗಿಲ್ಲ. ವಿನಯ್ 2015ರಲ್ಲಿ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆದಿದ್ದರೂ ಗಲ್ಲು ಶಿಕ್ಷೆಯಿಂದಾಗಿ ಪೂರ್ಣಗೊಳಿಸಲಾಗುತ್ತಿಲ್ಲ. ಈ ನಾಲ್ವರನ್ನು ಜ.22ರಂದು ತಿಹಾರ್ ಜೈಲಿನಲ್ಲಿ ಹ್ಯಾಂಗ್ಮನ್ ಪವನ್ ಜಲ್ಲಾದ್ ನೇಣಿಗೇರಿಸಲಿದ್ದಾರೆ‌.

ಮತ್ತಷ್ಟು ಸುದ್ದಿಗಳು

vertical

Latest News

ನಿನ್ಗೆ ಹುಚ್ಚು ನಾಯಿ ಕಚ್ಚಿದ್ಯಾ? ; ಬಿಜೆಪಿ ವಿರುದ್ಧ ಲಕ್ಷ್ಮಣ್‌ ಸವದಿ ಕೆಂಡಾಮಂಡಲ

  newsics.com ಬೆಳಗಾವಿ: ರೈತರು  ದೇವರ ಸಮಾನ,  ರೈತರ ಹಣ ತಿಂದ ಮಾಲೀಕರು ಉದ್ಧಾರ ಆಗಲ್ಲ. ಅವರಿಗೆ ಮೋಸ ಮಾಡಬೇಡಿ ಎಂದು  ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಕಲಾಪದ ವೇಳೆ...

ಹಸುಗಳ ಮೇಲೆ ಆ್ಯಸಿಡ್‌ ಎರಚಿದ ಬೆಂಗಳೂರಿನ ವೃದ್ಧೆ

newsics.com ನೆಲಮಂಗಲ:  ಮನೆ ಬಳಿ ಮೇಯಲು ಬಂದ ಹಸುಗಳ ಮೇಲೆ ಆ್ಯಸಿಡ್ ಎರಚಿ ವಿಕೃತಿ ಮೆರೆದಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗುಣಿ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. ಜೋಸೆಫ್ ಗ್ರೇಸ್ (76 ವರ್ಷ)  ಎನ್ನುವ ಮಹಿಳೆ ಮನೆ...

ಆಸ್ತಿಗಾಗಿ ತಂದೆ-ತಾಯಿಯನ್ನೇ ಕೊಲೆಗೈದಿದ್ದ ಮಗ ಅರೆಸ್ಟ್​

newsics.com ದೇವನಹಳ್ಳಿ:  ಆಸ್ತಿಗಾಗಿ ಹೆತ್ತ ತಂದೆ-ತಾಯಿಯನ್ನೇ ಕೊಲೆಗೈದಿರುವುದಾಗಿ ಪೊಲೀಸರ ವಿಚಾರಣೆ ವೇಳೆ ಮಗ ನರಸಿಂಹಮೂರ್ತಿ ತಪ್ಪೊಪ್ಪಿಕೊಂಡಿದ್ದಾನೆ.  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಗ್ರಾಮದಲ್ಲಿ ವೃದ್ಧ ದಂಪತಿ ಯನ್ನು ಕೊಲೆಗೈದಿದ್ದ ಮಗನನ್ನು ಪೊಲೀಸರು...
- Advertisement -
error: Content is protected !!