ನವದೆಹಲಿ: ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿಗಳು ಮರಣದಂಡನೆ ಶಿಕ್ಷೆಯಿಂದ ಪಾರಾಗಲು ಅಥವಾ ಸಾಧ್ಯವಾದಷ್ಟೂ ಮುಂದೂಡಲು ಯತ್ನಿಸುತ್ತಿದ್ದಾರೆ.
ಮುಕೇಶ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ತಿರಸ್ಕರಿಸಿದ ಕೆಲವೇ ಸಮಯದಲ್ಲಿ ಇನ್ನೊಬ್ಬ ಅಪರಾಧಿ ಪವನ್ ಕುಮಾರ್ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾನೆ.
ದೆಹಲಿಯ ಪಟಿಯಾಲ ಕೋರ್ಟ್ ಜಾರಿ ಮಾಡಿರುವ ಡೆತ್ ವಾರಂಟ್ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾನೆ.