Wednesday, May 31, 2023

ನೀರವ್​ ಮೋದಿಯನ್ನು ‘ದೇಶಭ್ರಷ್ಟ ಆರ್ಥಿಕ ಅಪರಾಧಿ’ ಎಂದ ಕೋರ್ಟ್

Follow Us

ಮುಂಬೈ: ದೇಶದಿಂದ ಪಲಾಯನಗೈದಿರುವ ವಜ್ರ ಉದ್ಯಮಿ ನೀರವ್​ ಮೋದಿಯನ್ನು ತಲೆಮರೆಸಿಕೊಂಡಿರುವ ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಮುಂಬೈನ ಮನಿ ಲ್ಯಾಂಡರಿಂಗ್​ ನಿಯಂತ್ರಣಾ ನ್ಯಾಯಾಲಯ ಘೋಷಿಸಿದೆ.
ಕಳೆದ ಜನವರಿಯಲ್ಲಿ ಉದ್ಯಮಿ ವಿಜಯ್​ ಮಲ್ಯರನ್ನು ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಘೋಷಿಸಿದ್ದ ಈ ನ್ಯಾಯಾಲಯ ಈಗ ನೀರವ್​ ಮೋದಿಯನ್ನೂ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಆರ್ಥಿಕ ಅಪರಾಧಿ ಎಂದಿದೆ. ಅಲ್ಲದೆ, ಭಾರತ, ಯುಕೆ ಹಾಗೂ ಯುಎಇಯಲ್ಲಿರುವ ನೀರವ್​ ಮೋದಿ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಳ್ಳಲೂ ಅವಕಾಶ ಮಾಡಿಕೊಟ್ಟಿದೆ.
ಪಂಜಾಬ್​ ನ್ಯಾಷನಲ್​ ಬ್ಯಾಂಕ್​ ನಿಂದ ಪಡೆದಿದ್ದ 13,000 ಕೋಟಿ ರೂಪಾಯಿ ಸಾಲ ಮರುಪಾವತಿಸದೆ ಭಾರತದಿಂದ ತಲೆಮರೆಸಿಕೊಂಡಿದ್ದ ಉದ್ಯಮಿ ನೀರವ್​ ಮೋದಿಯನ್ನು ಮಾರ್ಚ್​ನಲ್ಲಿ ಲಂಡನ್​​ನಲ್ಲಿ ಬಂಧಿಸಲಾಗಿತ್ತು. ಸದ್ಯ ಅವರು ಲಂಡನ್​​ನ ವರ್ಡ್ಸ್​ವರ್ತ್​ ಜೈಲಿನಲ್ಲಿದ್ದು, ಗಡೀಪಾರಿಗೆ ಸಂಬಂಧಪಟ್ಟಂತೆ ಯುಕೆ ಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಸಮುದ್ರಕ್ಕೆ ಬಿತ್ತು ಉತ್ತರ ಕೊರಿಯಾ ಉಡಾಯಿಸಿದ ‘ಗೂಢಚರ್ಯೆ ಉಪಗ್ರಹ’

newsics.com ಸೋಲ್: ಉತ್ತರ ಕೊರಿಯಾ ಬುಧವಾರ ಉಡಾವಣೆ ಮಾಡಿದ ಗೂಢಚರ್ಯೆ ಉಪಗ್ರಹ ಸಮುದ್ರದ ಪಾಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ತಾಂತ್ರಿಕ ಕಾರಣಗಳಿಂದಾಗಿ ಗೂಢಚರ್ಯೆ ಉಪಗ್ರಹ ಸಮುದ್ರಕ್ಕೆ ಬಿದ್ದಿದೆ...

ರಾಜ್ಯದ ಹಲವೆಡೆ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

newsics.com ಹಾವೇರಿ/ತುಮಕೂರು/ಶಿವಮೊಗ್ಗ: ಇಂದು(ಮೇ 31) ಬೆಳ್ಳಂಬೆಳಗ್ಗೆ ಹಾವೇರಿ, ತುಮಕೂರು ಹಾಗೂ ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದಲ್ಲಿರುವ ನಿರ್ಮಿತಿ ಕೇಂದ್ರದ ಇಂಜಿನಿಯರ್ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ದಾಳಿ...

ಜೂನ್ 4 ರವರೆಗೆ ರಾಜಧಾನಿಯಲ್ಲಿ ಭಾರಿ ಮಳೆ: 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

newsics.com ಬೆಂಗಳೂರು: ಬೆಂಗಳೂರಿನಲ್ಲಿ ಜೂನ್ 4ರವರೆಗೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು...
- Advertisement -
error: Content is protected !!