ವಾರಾಣಸಿ : ಸಾಮೂಹಿಕ ಅತ್ಯಾಚಾರವೆಸಗಿದ ಆರೋಪಿಗಳ ವಿರುದ್ಧ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಸಂತ್ರಸ್ತೆ ಹಾಗೂ ಆಕೆಯ ಪೋಷಕರು ಪೊಲೀಸ್ ಠಾಣೆ ಎದುರೇ ವಿಷ ಸೇವಿಸಿದ ಘಟನೆ ವಾರಾಣಸಿಯಲ್ಲಿ ನಡೆದಿದೆ.
ತಕ್ಷಣ ಈ ಮೂವರನ್ನು ದೀನ್ ದಯಾಳ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಚಿತ್ರದಲ್ಲಿ ನಟಿಸಲು ಅವಕಾಶ ಕಲ್ಪಿಸುವುದಾಗಿ ಮುಂಬೈಗೆ ಕರೆದೊಯ್ದಿದ್ದ ಮೂವರು ಯುವಕರು ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದು, ತನ್ನ ಜೊತೆಗಿದ್ದ ಸಹೋದರನನ್ನು ಹತ್ಯೆ ಮಾಡಿ ಗಂಗಾ ನದಿಗೆ ಎಸೆದಿದ್ದಾರೆ ಎಂದು ಆಕೆ ದೂರಿನಲ್ಲಿ ಆರೋಪಿಸಿದ್ದಾರೆ.