Saturday, December 2, 2023

ಮಧ್ಯಪ್ರಾಚ್ಯ ಬಿಕ್ಕಟ್ಟು: ಭಾರತೀಯರಿಗೆ ಬಿಸಿ ತುಪ್ಪ

Follow Us

ನವದೆಹಲಿ: ಮಧ್ಯ ಪ್ರಾಚ್ಯದಲ್ಲಿ ಒಂದು ಸಣ್ಣ ಬಿರುಗಾಳಿ ಬೀಸಿದರೂ ಅದರ ಪ್ರಭಾವ ಭಾರತದ ಮೇಲಾಗುತ್ತದೆ. ಇದಕ್ಕೆ ಕಾರಣ ಕೂಡ ಇದೆ. ದೇಶದ ಸುಮಾರು 80 ಲಕ್ಷ ಮಂದಿ ಅಲ್ಲಿ ಕೆಲಸ ಮಾಡುತ್ತಿದ್ದಾರೆ.  80 ಲಕ್ಷ ಭಾರತೀಯರು ದೇಶದ ಆರ್ಥಿಕತೆಗೆ ಗಮನಾರ್ಹ ಕೊಡುಗೆ ಕೂಡ ನೀಡುತ್ತಿದ್ದಾರೆ. ಪ್ರತಿ ತಿಂಗಳು ಅವರು ಕಳುಹಿಸುವ ಹಣ ಇಲ್ಲಿನ ಮಾರುಕಟ್ಟೆಗೆ ಹರಿದು ಬರುತ್ತಿದೆ.  ಮಧ್ಯ ಪ್ರಾಚ್ಯದ ಬಿಕ್ಕಟ್ಟು ಯುದ್ದದ  ಸ್ವರೂಪ ಪಡೆದರೆ ಅಲ್ಲಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆ ತರಬೇಕಾಗುತ್ತದೆ. ಈ ಹಿಂದೆ ಇರಾಕ್ ಯುದ್ದದ ವೇಳೆ ಒಂದು ಲಕ್ಷ ಭಾರತೀಯರನ್ನು ಭಾರತ ಏರ್ ಲಿಫ್ಟ್ ಮಾಡಿತ್ತು.  ಕೇರಳದವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಅವರು ಮರಳಿ ಬಂದರೆ ಕೇರಳದಲ್ಲಿ ನಿರುದ್ಯೋಗ ಸಮಸ್ಯೆ ಗಂಭೀರ ಸ್ವರೂಪ ಪಡೆದುಕೊಳ್ಳಲಿದೆ. ಕಚ್ಚಾ ತೈಲದ ದರ ಶೇಕಡ 4ರಷ್ಟು ಏರಿಕೆಯಾಗಿದ್ದು, ಸಮಸ್ಶೆ ಉಲ್ಭಣವಾದರೆ ಕಚ್ಚಾ ತೈಲ ದರ ಕೈ ಸುಡಲಿದೆ. ಇದು ಕೂಡ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ.

ಮತ್ತಷ್ಟು ಸುದ್ದಿಗಳು

vertical

Latest News

ನೀವು ಭಯಗೊಂಡಾಗ ದೇಹದಲ್ಲಿ ಏನಾಗುತ್ತದೆ ಗೊತ್ತಾ?

ಭಯವು ಸಾಮಾನ್ಯ ಭಾವನೆಯಾಗಿದೆ. ಪ್ರತಿಯೊಬ್ಬರೂ ಒಂದಲ್ಲ ಒಂದು ಹಂತದಲ್ಲಿ ಹೆದರುತ್ತಾರೆ. ಆದರೆ ಕೆಲವರು ಸಣ್ಣ ವಿಷಯಗಳಿಗೂ ತುಂಬಾ ಹೆದರುತ್ತಾರೆ. ಅವರು ಯಾಕೆ ಹೆದರುತ್ತಾರೆ ಎಂದು ಅವರಿಗೆ ತಿಳಿದಿಲ್ಲ. ಕೆಲವರು ಹಾರರ್ ಸಿನಿಮಾಗಳನ್ನು...

ಹೂವು ಬಿಡಿಸಲು ಹೋಗಿದ್ದಾಗ ವಿದ್ಯುತ್ ತಂತಿ ತುಳಿದು ಮಹಿಳೆ ಸಾವು

newsics.com ದಾವಣಗೆರೆ: ಪಂಪ್​ಸೆಟ್​​ಗೆ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ  ಬಸವರಾಜಪುರದಲ್ಲಿ ನಡೆದಿದೆ. ಅಲಿಬಾಯಿ(62) ಮೃತ ರ್ದುದೈವಿ. ಹೂವು ಬಿಡಿಸಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬಸವಪಟ್ಟಣ...

ಜೈ ಶ್ರೀರಾಮ್‌ ಹೇಳುವಂತೆ ಗಡ್ಡಕ್ಕೆ ಬೆಂಕಿ ಹಚ್ಚಿ ವೃದ್ಧನ ಮೇಲೆ ಹಲ್ಲೆ

newsics.com ಕೊಪ್ಪಳ :  65 ವರ್ಷದ ಅಂಧ ಮುಸ್ಲಿಂ ವೃದ್ಧನಿಗೆ ಇಬ್ಬರು ಅನಾಮಿಕ ವ್ಯಕ್ತಿಗಳು ಗಂಗಾವತಿ ಟೌನ್‌ನಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದೆ. ಗಂಗಾವತಿಯಲ್ಲಿ ಒಂದು ಕಪ್‌ ಚಹಾ ಕುಡಿದು ಆಟೋರಿಕ್ಷಾಕ್ಕೆ ಕಾಯುತ್ತಿರುವಾಗ ಬೈಕ್‌ನಲ್ಲಿ ಇಬ್ಬರು...
- Advertisement -
error: Content is protected !!