ನವದೆಹಲಿ: ಮಹಾರಾಷ್ಟ್ರ ಸಿಎಂ ತಕ್ಷಣಕ್ಕೆ ಬಹುಮತ ಸಾಬೀತುಪಡಿಸುವ ಅಗತ್ಯವಿಲ್ಲ ಎಂದ ಸುಪ್ರೀಂ ಕೋರ್ಟ್, ಫಡ್ನವೀಸ್ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್ ನೀಡಿದೆ.ರಾತ್ರೋರಾತ್ರಿ ದಿಢೀರ್ ರಾಷ್ಟ್ರಪತಿ ಆಡಳಿತ ಹಿಂಪಡೆದು, ಬಿಜೆಪಿ-ಎನ್ ಸಿ ಪಿ ಪಕ್ಷದ ಮೈತ್ರಿ ಸರ್ಕಾರ ಅಸ್ಥಿತ್ವಕ್ಕೆ ಬರಲು ಅವಕಾಶ ಮಾಡಿಕೊಟ್ಟ ರಾಜ್ಯಪಾಲರ ನಿಲುವನ್ನು ಕಾಂಗ್ರೆಸ್, ಶಿವಸೇನೆ ಹಾಗೂ ಎನ್ ಸಿ ಪಿ ಪಕ್ಷಗಳು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದವುಈ ಕುರಿತಂತೆ ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠ ತುರ್ತು ವಿಚಾರಣೆ ಕೈಗೆತ್ತಿಕೊಂಡಿತು. ವಾದ ವಿವಾದ ಆಲಿಸಿದ ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠ, ಸದ್ಯಕ್ಕೆ ಸರ್ಕಾರ ಬಹುಮತ ಸಾಬೀತುಪಡಿಸುವ ಅಗತ್ಯ ಇಲ್ಲ ಎಂದು ಅಭಿಪ್ರಾಯಪಟ್ಟಿತು. ಅಲ್ಲದೇ ಫಡ್ನವೀಸ್ ಸರ್ಕಾರ ರಚಿಸಲು ಅವಕಾಶ ಕೊಟ್ಟಿದ್ದು ಅಸಂವಿಧಾನಿಕವಾಗಿದೆ. ನಾಳೆ ಬೆಳಗ್ಗೆ 10.30ರ ಒಳಗಾಗಿ ಸುಪ್ರೀಂ ಕೋರ್ಟ್ ಗೆ ಉತ್ತರಿಸುವಂತೆ ಕಾಂಗ್ರೆಸ್, ಶಿವಸೇನೆ, ಎನ್ ಸಿ ಪಿ ಹಾಗೂ ಬಿಜೆಪಿ ಪಕ್ಷಗಳಿಗೆ ನೊಟೀಸ್ ನೀಡುವ ಮೂಲಕ ಸಿಎಂ ದೇವೇಂದ್ರ ಫಡ್ನವೀಸ್ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್ ನೀಡಿದೆ.ರಾಜ್ಯಪಾಲರ ನಡೆ ಸರಿಯೋ ತಪ್ಪೋ ಎಂಬ ಬಗ್ಗೆ ನಿರ್ಧರಿಸಬೇಕಿದೆ. ನಾಳೆ ಬೆಳಗ್ಗೆ 10.30ರೊಳಗೆ ಸರ್ಕಾರ ರಚನೆಗೆ ಹಕ್ಕುಮಂಡನೆ ಪತ್ರ ಮತ್ತು ರಾಜ್ಯಪಾಲರು ಆಹ್ವಾನಿಸಿದ ಪತ್ರವನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಬೇಕು ಎಂದು ಹೇಳಿತು. ಅಲ್ಲದೇ ನಾಳೆ 10.30ರ ನಂತರ ತನ್ನ ತೀರ್ಪನ್ನು ಪ್ರಕಟಿಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.
newsics.com
ಛತ್ತೀಸಗಢ : ಭಾರತೀಯ ರೈಲ್ವೆ ಇಲಾಖೆಯ ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ 10 ತಿಂಗಳ ಮಗುವಿಗೆ ನೌಕರಿ ಸಿಕ್ಕಿದೆ. ಈಕೆ 18 ವರ್ಷ ಪೂರ್ಣಗೊಳ್ಳುತ್ತಿದ್ದಂತೆಯೇ ಕರ್ತವ್ಯಕ್ಕೆ ಹಾಜರಾಗಳಿದ್ದಾಳೆ. ಛತ್ತೀಸಗಢದ ಆಗ್ನೇಯ ಕೇಂದ್ರ ರೈಲ್ವೆಯ...
newsics.com
ದೆಹಲಿ : ಲೈಂಗಿಕ ಸಂಬಂಧಕ್ಕೆ ನಿರಾಕರಿಸಿದ್ದಕ್ಕೆ 22 ವರ್ಷದ ಮಹಿಳೆಯ ಕತ್ತನ್ನು ಸೀಳಿದ್ದ 25 ವರ್ಷದ ಪುರುಷನ್ನು ಪೊಲೀಸರು ಬಂಧಿಸಿದ ಘಟನೆಯು ದೆಹಲಿಯ ಗಾಂಧಿ ನಗರದಲ್ಲಿ ನಡೆದಿದೆ.
ಮಹಿಳೆಯ ಮಂಗಳಸೂತ್ರ ಕತ್ತಿನಲ್ಲಿತ್ತು. ರಕ್ತವು ಅಲ್ಲಿಂದ...
newsics.com
ಮುಂಬೈ: ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಕೊಂಕಣ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಸತಾರ, ಕೊಲ್ಹಾಪುರ ಜಿಲ್ಲೆಗಳಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಇದರಿಂದಾಗಿ ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
ಮಹಾರಾಷ್ಟ್ರದಲ್ಲಿ ಮಳೆಯ...
newsics.com
ಕನ್ಯಾಕುಮಾರಿ: ಇತ್ತೀಚೆಗೆ ಕಾಳಿ ಮಾತೆಯ ಪೋಸ್ಟರ್ ವಿವಾದಕ್ಕೆ ಕಾರಣವಾಗಿತ್ತು. ಅದೇ ರೀತಿ ತಮಿಳುನಾಡಿನ ಕನ್ಯಾ ಕುಮಾರಿಯಲ್ಲಿ ಮದುವೆಗೆ ಶುಭ ಕೋರಿ ಹಾಕಲಾಗಿದ್ದ ಬ್ಯಾನರ್ ವಿವಾದದ ಕಿಡಿ ಹೊತ್ತಿಸಿದೆ. ಈ ಬ್ಯಾನರ್ ವೈರಲ್ ಆಗಿದೆ.
ಕನ್ಯಾಕುಮಾರಿ...
newsics.com
ಚಂಢೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಇಂದು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಇದು ಮಾನ್ ಅವರ ಎರಡನೆ ಮದುವೆ. ಮೊದಲ ಪತ್ನಿಗೆ ಅವರು ವಿಚ್ಛೇದನ ನೀಡಿದ್ದಾರೆ.
ವಧು ಡಾ. ಗುರುಪ್ರೀತ್ ಕೌರ್. ಚಂಢೀಗಢದಲ್ಲಿ ನಡೆದ...
newsics.com
ನವದೆಹಲಿ: ಜಾಗತಿಕ ಮಟ್ಟದಲ್ಲಿ ಅಡುಗೆ ಎಣ್ಣೆ ದರ ಇಳಿಕೆಯಾಗುತ್ತಿದ್ದರೂ ದೇಶದಲ್ಲಿ ದುಬಾರಿಯಾಗುತ್ತಿರುವುದಕ್ಕೆ ಕೇಂದ್ರ ಸರ್ಕಾರ ಕಳವಳ ವ್ಯಕ್ತಪಡಿಸಿದೆ. ಈ ಸಂಬಂಧ ಕಟ್ಟುನಿಟ್ಟಿನ ಕ್ರಮಕ್ಕೆ ಆದೇಶ ನೀಡಿದೆ.
ತಕ್ಷಣ ಅಡುಗೆ ಎಣ್ಣೆ ದರ 10ರೂಪಾಯಿಗಳಿಂದ 12...
newsics.com
ಮುಂಬೈ: ತಮಿಳುನಾಡು ಮೂಲದ ಕಿರು ಚಿತ್ರ ನಿರ್ದೇಶಕಿ ಲೀನಾ ಇದೀಗ ಟ್ವಿಟರ್ ಖಾತೆಯಲ್ಲಿ ಮತ್ತೊಮ್ಮೆ ವಿವಾದಾಸ್ಪದ ಚಿತ್ರವೊಂದನ್ನು ಪೋಸ್ಟ್ ಮಾಡಿದ್ದಾರೆ. ಶಿವ ಮತ್ತು ಪಾರ್ವತಿ ವೇಷ ಧರಿಸಿರುವ ಕಲಾವಿದರು ಧೂಮ ಪಾನ ಮಾಡುತ್ತಿರುವ...
newsics.com
ನವದೆಹಲಿ: ಚೀನಾ ಮೂಲದ ಸ್ಮಾರ್ಟ್ ಫೋನ್ ಸಂಸ್ಥೆ ವಿವೋ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ ಬೆನ್ನಲ್ಲೇ ಅದರ ಇಬ್ಬರು ನಿರ್ದೇಶಕರು ದೇಶ ಬಿಟ್ಟು ಪರಾರಿಯಾಗಿದ್ದಾರೆ.
ನಿರ್ದೇಶಕರಾಗಿರುವ ಝೆಯಾಂಗ್ ಶೆನ್ ಮತ್ತು ಝೆಯಾಂಗ್...
newsics.com
ಬೆಂಗಳೂರು : ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ಎಡಿಜಿಪಿ ಅಮೃತ್ ಪಾಲ್ ಸಿಐಡಿ ಅಧಿಕಾರಿಗಳ ಮುಂದೆ ಇಡುತ್ತಿರುವ ಬೇಡಿಕೆಗಳನ್ನು ಕೇಳಿ ಸ್ವತಃ...
newsics.com
ಛತ್ತೀಸಗಢ : ಭಾರತೀಯ ರೈಲ್ವೆ ಇಲಾಖೆಯ ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ 10 ತಿಂಗಳ ಮಗುವಿಗೆ ನೌಕರಿ ಸಿಕ್ಕಿದೆ. ಈಕೆ 18 ವರ್ಷ ಪೂರ್ಣಗೊಳ್ಳುತ್ತಿದ್ದಂತೆಯೇ ಕರ್ತವ್ಯಕ್ಕೆ ಹಾಜರಾಗಳಿದ್ದಾಳೆ. ಛತ್ತೀಸಗಢದ ಆಗ್ನೇಯ ಕೇಂದ್ರ ರೈಲ್ವೆಯ...
newsics.com
ಅಮೆರಿಕ : ಪ್ರಬಲ ಚಂಡಮಾರುತದ ಬಳಿಕ ಅಮೆರಿಕದ ದಕ್ಷಿಣ ಡಕೋಟಾ, ನೆಬ್ರಸ್ಕಾ ಹಾಗೂ ಅಯೋವಾ ರಾಜ್ಯಗಳ ಹಲವು ನಗರಗಳಲ್ಲಿನ ಆಕಾಶವು ಹಸಿರು ಬಣ್ಣಕ್ಕೆ ತಿರುಗಿದೆ.
ಅಮೆರಿಕದ ರಾಷ್ಟ್ರೀಯ ಹವಾಮಾನ ಇಲಾಖೆಯು ಚಂಡಮಾರುತವನ್ನು ಡೆರೆಕೊ ಎಂದು...