Wednesday, September 27, 2023

ಮಹಾ ಸರ್ಕಾರಕ್ಕೆ ಸುಪ್ರೀಂನಿಂದ ತಾತ್ಕಾಲಿಕ ರಿಲೀಫ್

Follow Us

ನವದೆಹಲಿ: ಮಹಾರಾಷ್ಟ್ರ ಸಿಎಂ ತಕ್ಷಣಕ್ಕೆ ಬಹುಮತ ಸಾಬೀತುಪಡಿಸುವ ಅಗತ್ಯವಿಲ್ಲ ಎಂದ ಸುಪ್ರೀಂ ಕೋರ್ಟ್, ಫಡ್ನವೀಸ್ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್  ನೀಡಿದೆ.ರಾತ್ರೋರಾತ್ರಿ ದಿಢೀರ್ ರಾಷ್ಟ್ರಪತಿ ಆಡಳಿತ ಹಿಂಪಡೆದು, ಬಿಜೆಪಿ-ಎನ್ ಸಿ ಪಿ ಪಕ್ಷದ ಮೈತ್ರಿ ಸರ್ಕಾರ ಅಸ್ಥಿತ್ವಕ್ಕೆ ಬರಲು ಅವಕಾಶ ಮಾಡಿಕೊಟ್ಟ ರಾಜ್ಯಪಾಲರ ನಿಲುವನ್ನು ಕಾಂಗ್ರೆಸ್, ಶಿವಸೇನೆ ಹಾಗೂ ಎನ್ ಸಿ ಪಿ ಪಕ್ಷಗಳು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದವುಈ ಕುರಿತಂತೆ ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠ ತುರ್ತು ವಿಚಾರಣೆ ಕೈಗೆತ್ತಿಕೊಂಡಿತು. ವಾದ ವಿವಾದ ಆಲಿಸಿದ ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠ, ಸದ್ಯಕ್ಕೆ ಸರ್ಕಾರ ಬಹುಮತ ಸಾಬೀತುಪಡಿಸುವ ಅಗತ್ಯ ಇಲ್ಲ ಎಂದು ಅಭಿಪ್ರಾಯಪಟ್ಟಿತು. ಅಲ್ಲದೇ ಫಡ್ನವೀಸ್ ಸರ್ಕಾರ ರಚಿಸಲು ಅವಕಾಶ ಕೊಟ್ಟಿದ್ದು ಅಸಂವಿಧಾನಿಕವಾಗಿದೆ. ನಾಳೆ ಬೆಳಗ್ಗೆ 10.30ರ ಒಳಗಾಗಿ ಸುಪ್ರೀಂ ಕೋರ್ಟ್ ಗೆ ಉತ್ತರಿಸುವಂತೆ ಕಾಂಗ್ರೆಸ್, ಶಿವಸೇನೆ, ಎನ್ ಸಿ ಪಿ ಹಾಗೂ ಬಿಜೆಪಿ ಪಕ್ಷಗಳಿಗೆ ನೊಟೀಸ್ ನೀಡುವ ಮೂಲಕ ಸಿಎಂ ದೇವೇಂದ್ರ ಫಡ್ನವೀಸ್ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್ ನೀಡಿದೆ.ರಾಜ್ಯಪಾಲರ ನಡೆ ಸರಿಯೋ ತಪ್ಪೋ ಎಂಬ ಬಗ್ಗೆ ನಿರ್ಧರಿಸಬೇಕಿದೆ. ನಾಳೆ ಬೆಳಗ್ಗೆ 10.30ರೊಳಗೆ ಸರ್ಕಾರ ರಚನೆಗೆ ಹಕ್ಕುಮಂಡನೆ ಪತ್ರ ಮತ್ತು ರಾಜ್ಯಪಾಲರು ಆಹ್ವಾನಿಸಿದ ಪತ್ರವನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಬೇಕು ಎಂದು ಹೇಳಿತು. ಅಲ್ಲದೇ ನಾಳೆ 10.30ರ ನಂತರ ತನ್ನ ತೀರ್ಪನ್ನು ಪ್ರಕಟಿಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಸ್ನೇಹಿತೆ ಜತೆ ದೈಹಿಕ ಸಂಪರ್ಕಕ್ಕೆ ಪ್ರೇಯಸಿ ಒತ್ತಾಯ: ನಿರಾಕರಿಸಿದ ಪ್ರಿಯಕರನ ಮರ್ಮಾಂಗವನ್ನೇ ಕಚ್ಚಿದ ಗೆಳತಿ!

newsics.com ಕಾಸ್ಪುರ: ತನ್ನ ಸ್ನೇಹಿತೆಯೊಂದಿಗೆ ದೈಹಿಕ ಸಂಪರ್ಕ ಸಾಧಿಸಲಿಲ್ಲ ಎಂದು ಕೋಪಗೊಂಡ ಗೆಳತಿ, ಪ್ರಿಯಕರನ ಗುಪ್ತಾಂಗಕ್ಕೆ ಕಚ್ಚಿದ್ದಾಳೆ. ಇಂಥದ್ದೊಂದು ವಿಚಿತ್ರ ಮತ್ತು ಆಘಾತಕಾರಿ ಘಟನೆ ನಡೆದಿದ್ದು ಉತ್ತರಪ್ರದೇಶದಲ್ಲಿ. ಇಲ್ಲಿನ...

ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್’ಗೆ ಹೃದಯಾಘಾತ!

newsics.com ಮುಂಬೈ: ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್'ಗೆ ಹೃದಯ ಸ್ತಂಭನವಾಗಿದ್ದು, ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಜಿಯೋಪ್ಲ್ಯಾಸ್ಟಿ ಮಾಡಿಸಲಾಗಿದೆ. ಶಾನವಾಜ್ ಹುಸೇನ್ ಹೃದಯಾಘಾತದಿಂದ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಂಜಿಯೋಪ್ಲಾಸ್ಟಿ...

ಮನೆ ನೌಕರರಿಗೆ ಕಿರುಕುಳ ನೀಡುತ್ತಿದ್ದ ಸೇನಾ ಮೇಜರ್, ಆತನ ಪತ್ನಿ ಬಂಧನ!

newsics.com ಅಸ್ಸಾಂ: ಮನೆ ನೌಕರರಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಸೇನಾ ಮೇಜರ್ ಹಾಗೂ ಆತನ ಪತ್ನಿಯನ್ನು ಅಸ್ಸಾಂನಲ್ಲಿ ಬಂಧಿಸಲಾಗಿದೆ. ಅಸ್ಸಾಂನ ದಿಮಾ ಹಸಾವೋ ಜಿಲ್ಲೆಯಲ್ಲಿ ಸೇನಾ ಮೇಜರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು...
- Advertisement -
error: Content is protected !!