Thursday, June 1, 2023

ಶೇಂದಿ ಅಂಗಡಿಯಲ್ಲಿನ ಒಂಟಿ ಮಹಿಳೆಯರೇ ಟಾರ್ಗೆಟ್- ಸರಣಿ ಹಂತಕನ ಬಂಧನ

Follow Us

ಹೈದರಾಬಾದ್:  ಮೆಹಬೂಬ್ ನಗರ ಪೊಲೀಸರು ಕೊಲೆಗಡುಕನೊಬ್ಬನನ್ನು ಬಂಧಿಸಿದ್ದು, ಸರಣಿ ಹತ್ಯೆಯ ಹಿಂದಿರುವ ಕರಾಳ ಮುಖವನ್ನು ಬಯಲು ಮಾಡಿದ್ದಾರೆ. ಆರೋಪಿ ಯೆರುಕಾಲಿ ಶ್ರೀನು 15 ಹತ್ಯೆಗಳನ್ನು  ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಶೇಂದಿ ಅಂಗಡಿಯಲ್ಲಿ ಒಬ್ಬಂಟಿಯಾಗಿ ಶೇಂದಿ ಕುಡಿಯುವ ಮಹಿಳೆಯರನ್ನೇ ಈತ ಟಾರ್ಗೇಟ್ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಮೊದಲಿಗೆ ಮಹಿಳೆಗೆ ಶೇಂದಿ ಕುಡಿಸಿ ಬಳಿಕ ತನ್ನ ಬೈಕ್ ನಲ್ಲಿ  ನಿರ್ಜನ ಪ್ರದೇಶಕ್ಕೆ ಕರೆದೊಯುತ್ತಿದ್ದ. ಬಳಿಕ ಮಹಿಳೆಯ ಬಳಿ ಇದ್ದ ಚಿನ್ನ ಮತ್ತು ನಗದನ್ನು ಅಪಹರಿಸುತ್ತಿದ್ದ. ಆಕೆ  ಪ್ರತಿರೋಧ ತೋರಿಸಿದರೆ ಕೊಂದು ಬಿಡುತ್ತಿದ್ದ ಎಂದು ಮೆಹಬೂಬ್ ನಗರ  ಎಸ್. ಪಿ.  ರೇಮ ರಾಜೇಶ್ವರಿ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ತನ್ನ ಪ್ರೇಯಸಿಗೆ ಮೆಸೇಜ್ ಮಾಡಿದ ಎಂದು ಗೆಳೆಯನಿಗೆ ಚಾಕು ಇರಿದ ಯುವಕ

newsics.com ಮೈಸೂರು: ತನ್ನ ಪ್ರಿಯತಮೆಗೆ ಮೆಸೇಜ್ ಮಾಡಿದನೆಂದು ಯುವಕನೊಬ್ಬ ತನ್ನ ರೂಮೇಟ್‌ಗೆ ಚಾಕು ಇರಿದ ಪ್ರಸಂಗವೊಂದು ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ. ಗಾಯಾಳುವನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ,...

ಉತ್ತರಾಖಂಡದಲ್ಲಿ ಭೂಕುಸಿತ: 300 ಮಂದಿ ಪ್ರಯಾಣಿಕರ ಪರದಾಟ

newsics.com ಡೆಹ್ರಾಡೂನ್: ಉತ್ತರಾಖಂಡದ ಪಿಥೋರಗಢದಲ್ಲಿ ಭೂಕುಸಿತ ಉಂಟಾದ ಪರಿಣಾಮ ರಸ್ತೆ ಕೊಚ್ಚಿಹೋಗಿದ್ದು, 300 ಮಂದಿ ಪ್ರಯಾಣಿಕರು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ ಲಖನ್‌ಪುರ ಬಳಿಯ ಧಾರ್ಚುಲದಿಂದ 45 ಕಿಮೀ ಎತ್ತರದ ಲಿಪುಲೇಖ್ – ತವಾಘಾಟ್ ರಸ್ತೆಗೆ ಬೆಟ್ಟ ಕುಸಿದು...

ಫ್ರೀ ಎಜುಕೇಷನ್ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ 18 ಕೋಟಿ ರೂ. ಪಂಗನಾಮ

newsics.com ಬೆಂಗಳೂರು: ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣ ಕೊಡಿಸುವುದಾಗಿ 18 ಕೋಟಿ ರೂ. ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಆಂಧ್ರಪ್ರದೇಶ ಮೂಲದ ಶ್ರೀನಿವಾಸುಲು ಎಂದು ಗುರುತಿಸಲಾಗಿದೆ. ಆರೋಪಿ ಡಾಟ ಸೈನ್ಸ್ ಕೋರ್ಸ್ ಮಾಡಿಸುವುದಾಗಿ...
- Advertisement -
error: Content is protected !!