Sunday, March 26, 2023

9 ಬ್ಯಾಂಕ್’ಗಳಿಗೆ 1,400 ಕೋಟಿ ವಂಚನೆ; ಕ್ವಾಲಿಟಿ ವಿರುದ್ಧ ಸಿಬಿಐ ಕೇಸ್

Follow Us

newsics.com 
ನವದೆಹಲಿ: ವಿವಿಧ 9 ಬ್ಯಾಂಕುಗಳಿಗೆ 1,400 ಕೋಟಿ ರೂ.ಗಳನ್ನು ವಂಚಿಸಿದ ಆರೋಪದಲ್ಲಿ ಡೇರಿ ಉತ್ಪನ್ನಗಳ ತಯಾರಿಕಾ ಕಂಪನಿ ಕ್ವಾಲಿಟಿ ಲಿಮಿಟೆಡ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ.
ದೆಹಲಿ ಸೇರಿದಂತೆ ವಿವಿಧ ಎಂಟು ಕಡೆ ಸಿಬಿಐ ಅಧಿಕಾರಿಗಳು ಸೋಮವಾರ ಶೋಧ ಕಾರ್ಯಾಚರಣೆ ನಡೆಸಿದ ಬಳಿಕ ಪ್ರಕರಣ ದಾಖಲಾಗಿದೆ. ಸಿಬಿಐ ಹೆಸರಿಸಿರುವ ಆರೋಪಿಗಳಲ್ಲಿ ಕ್ವಾಲಿಟಿ ಕಂಪನಿ ನಿರ್ದೇಶಕರಾದ ಸಂಜಯ ಧಿಂಗ್ರಾ, ಸಿದ್ಧಾಂತ ಗುಪ್ತಾ ಮತ್ತು ಅರುಣ ಶ್ರೀವಾಸ್ತವ ಸೇರಿದ್ದಾರೆ. 2012ರಲ್ಲಿ ಬ್ಯಾಂಕ್ ಆಫ್ ಇಂಡಿಯಾದ ನೇತೃತ್ವದಲ್ಲಿ ರಚನೆಯಾಗಿದ್ದ 10 ಬ್ಯಾಂಕುಗಳ ಕೂಟವು ಅವರ ವಿರುದ್ಧ ವಂಚನೆ, ಫೋರ್ಜರಿ, ಕ್ರಿಮಿನಲ್ ಒಳಸಂಚು ಮತ್ತು ಭ್ರಷ್ಟಾಚಾರದ ಆರೋಪ ಮಾಡಿತ್ತು. 2010ರಿಂದ ಕ್ವಾಲಿಟಿ ಕಂಪನಿ ಸಾಲ ಪಡೆದುಕೊಂಡಿತ್ತು. 2018ರ ಆರಂಭದಿಂದ ಮರುಪಾವತಿ ಮಾಡದೆ ಬಾಕಿ ಉಳಿಸಿಕೊಂಡಿತ್ತು. ಬ್ಯಾಂಕ್ ಆಫ್ ಇಂಡಿಯಾ, ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ, ಆಂಧ್ರ ಬ್ಯಾಂಕ್, ಕಾರ್ಪೊರೇಷನ್ ಬ್ಯಾಂಕ್, ಐಡಿಬಿಐ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಧನಲಕ್ಷ್ಮಿ ಬ್ಯಾಂಕ್ ಮತ್ತು ಸಿಂಡಿಕೇಟ್ ಬ್ಯಾಂಕ್‌ಗಳಲ್ಲಿ ಕ್ವಾಲಿಟಿ ಕಂಪನಿ ಸಾಲ ಮಾಡಿ ಮರುಪಾವತಿಸದೆ ವಂಚಿಸಿದೆ ಎಂದು ಆರೋಪಿಸಲಾಗಿದೆ.

2008ರ ಬೆಂಗಳೂರು ಸ್ಫೋಟ ಪ್ರಕರಣ: ಕೇರಳದಲ್ಲಿ ಆರೋಪಿ ಬಂಧನ

12 ಕೋಟಿ ಲಾಟರಿ ಗೆದ್ದ ದೇಗುಲದ ಕ್ಲರ್ಕ್!

ಮತ್ತಷ್ಟು ಸುದ್ದಿಗಳು

vertical

Latest News

ಇಂದು 36 ಉಪಗ್ರಹಗಳ ಉಡಾವಣೆ: ಕ್ಷಣಗಣನೆ ಆರಂಭ ಎಂದ ಇಸ್ರೋ

newsics.com ಶ್ರೀಹರಿಕೋಟಾ: ಇಸ್ರೊ ಸಹೋದ್ಯೋಗಿಗಳ ಜತೆ ನ್ಯೂ ಸ್ಪೇಸ್‌ ಇಂಡಿಯಾ ಲಿಮಿಟೆಡ್‌ ಭಾನುವಾರ ಬೆಳಗ್ಗೆ 36 ಉಪಗ್ರಹಗಳನ್ನು ಉಡಾವಣೆ ಮಾಡಲಿದೆ. 36 ಉಪಗ್ರಹಗಳನ್ನು ಎಲ್‌ವಿಎಂ3–ಎಂ3/ಒನ್‌ವೆಬ್‌ ಇಂಡಿಯಾ–2 ಮಿಷನ್‌ನಲ್ಲಿ ಉಡಾವಣೆ...

ಸರ್ ಎಂ.ವಿ. ಜನ್ಮಸ್ಥಳಕ್ಕೆ ಬಂದಿರುವುದು ನನ್ನ ಸೌಭಾಗ್ಯ: ಮೋದಿ

newsics.com ಬೆಂಗಳೂರು: ಆಧುನಿಕ ಭಾರತಕ್ಕೆ ಮಾದರಿಯಾಗಿರುವ ಹಾಗೂ ಸರ್ ಎಂ.ವಿಶ್ವೇಶ್ವರಯ್ಯ ಹುಟ್ಟಿದ ಪುಣ್ಯಭೂಮಿ ಚಿಕ್ಕಬಳ್ಳಾಪುರಕ್ಕೆ ಇಂದು ನಾನು ಬಂದಿರುವುದು ನನ್ನ ಸೌಭಾಗ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು. ಚಿಕ್ಕಬಳ್ಳಾಪುರದ ಶ್ರೀ ಮಧುಸೂದನ ಸಾಯಿ ವೈದ್ಯಕೀಯ...

ಕಾಸರಕೋಡು ಕಡಲತೀರದಲ್ಲಿ ಅಪರೂಪದ ‘ಗಿಟಾರ್ ಫಿಶ್’ ಪತ್ತೆ

newsics.com ಕೇರಳ: ಕಾಸರಕೋಡು ಕಡಲತೀರದಲ್ಲಿ ಅಪರೂಪದ 'ಗಿಟಾರ್ ಫಿಶ್' ಪತ್ತೆಯಾಗಿದೆ. ಕಡಲತೀರದಲ್ಲಿ ಮೀನು ಬಿದ್ದಿರುವುದು ಕಂಡು ಬಂದಿದ್ದು. ಈ ಹಿಂದೆ ಇಂತಹ ಮೀನನನ್ನು ಎಲ್ಲಿಯೂ ನೋಡಿರಲಿಲ್ಲ ಎಂದು ಕಾಸರಕೋಡಿನ ಇಕೋ ಬೀಚ್‌ನ ವ್ಯವಸ್ಥಾಪಕ ವಿನೋದ್ ಎಸ್...
- Advertisement -
error: Content is protected !!