Wednesday, May 31, 2023

2019ರಲ್ಲಿ ಸದ್ದು ಮಾಡಿದವರಲ್ಲಿ ಅಮಿತ್ ಶಾ ಮೊದಲು

Follow Us

ನವದೆಹಲಿ:  2019 ನಿರ್ಗಮನದ ಹಾದಿಯಲ್ಲಿದೆ. ಹೊಸ ವರ್ಷ ಸ್ವಾಗತಕ್ಕೆ ಕೇವಲ ಕೆಲವೇ ಗಂಟೆಗಳು ಮಾತ್ರ ಬಾಕಿ ಉಳಿದಿವೆ. ವರ್ಷದ ಆರಂಭದಿಂದ ಹಿಡಿದು ಅಂತ್ಯದ ವರೆಗಿನ ಘಟನೆಗಳನ್ನು ನೋಡಿದರೆ ಎಲ್ಲದರ ಹಿಂದೆ ಕಂಡು ಬರುವುದು ಒಬ್ಬ ವ್ಯಕ್ತಿಯ ಚಿತ್ರಣ . ಅವರು ಬೇರೇ ಯಾರೂ ಅಲ್ಲ. ಕೇಂದ್ರ ಗೃಹ ಸಚಿವ , ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ

ಮೋದಿ-01ರ ಅವಧಿಯಲ್ಲಿ ಅಮಿತ್ ಶಾ ಪಕ್ಷದ ವಿಷಯದಲ್ಲಿ ಮಾತ್ರ ತೊಡಗಿಸಿಕೊಳ್ಳುತ್ತಿದ್ದರು. ಆದರೆ ಎರಡನೆ ಇನ್ನಿಂಗ್ಸ್ ನಲ್ಲಿ ಅಮಿತ್ ಶಾ ಪಕ್ಷ ಮತ್ತು ಸರ್ಕಾರದ ಧ್ವನಿಯಾಗಿದ್ದಾರೆ. ಪಕ್ಷದಲ್ಲಿ ಪರಮೋಚ್ಚ ನಾಯಕ. ಸರ್ಕಾರದಲ್ಲಿ ಪ್ರಭಾವ ಶಾಲಿ ಧ್ವನಿ. ಈ ಎರಡೂ ಅಂಶಗಳ ಸಮ್ಮಿಳನವೇ 2019ರ ಅಮಿತ್ ಶಾ

ಜಮ್ಮು ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನ ರದ್ದು, ದೇಶಾದ್ಯಂತ ವಿವಾದದ ಕಿಡಿ ಹೊತ್ತಿಸಿರುವ ಪೌರತ್ವ ಕಾನೂನು ತಿದ್ದುಪಡಿ, ರಾಷ್ಟ್ರೀಯ ಪೌರತ್ವ ನೋಂದಣಿ ಪ್ರಸ್ತಾಪ ಎಲ್ಲವೂ ಕೇಂದ್ರ ಗೃಹ ಖಾತೆ ಜೊತೆ ನೇರಾ ನೇರ ಸಂಬಧ ಹೊಂದಿದೆ. ಬದ್ದ ರಾಜಕೀಯ ವೈರಿಗಳಿಗೆ ಅವರದೇ ಭಾಷೆಯಲ್ಲಿ ಉತ್ತರ ಹೇಳಲು ಸಮರ್ಥರಿರುವ ಅಮಿತ್ ಶಾ, ಕಾನೂನು ಮತ್ತು ಶಿಸ್ತು ಪಾಲನೆಯಲ್ಲಿ ಎಳ್ಳಷ್ಟು ರಾಜೀ ಮಾಡಲು ಸಿದ್ದರಿಲ್ಲ. ಜಮ್ಮು ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ರದ್ದತಿಗೆ ವಿರೋಧ ವ್ಯಕ್ತಪಡಿಸಿದ್ದ ರಾಜಕೀಯ ನಾಯಕರನ್ನು ಗೃಹ ಬಂಧನದಲ್ಲಿರಿಸಿ,  ಸ್ವಾತಂತ್ರ್ಯ್ದದ ಮಹತ್ವವನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ.

ವಿವಾದದ ಕಿಡಿ ಹೊತ್ತಿಸಿರುವ ಪೌರತ್ವ ಕಾನೂನು ತಿದ್ದುಪಡಿ ಹೋರಾಟ ಹಿಂಸಾಚಾರಕ್ಕೆ ತಿರುಗಿದಾಗ ಅಮಿತ್ ಶಾ ಧೈರ್ಯ ಕಳೆದುಕೊಳ್ಳಲಿಲ್ಲ. ಅಸ್ಸಾಂನ ಗುವಾಹಟಿಯಲ್ಲಿ ಪೊಲೀಸ್ ಆಯುಕ್ತರ ಬದಲವಾಣೆಗೆ ಸೂಚಿಸಿ ಕಾನೂನು ಮತ್ತು ಶಿಸ್ತು ಪರಿಸ್ಥಿತಿ ಸುಧಾರಿಸಿದರು. ಹಿಂಸಾಚಾರ ತಣ್ಣಾಗಾಯಿತು. ಇದು ಅಮಿತ್ ಶಾ ಅವರ ಕಾರ್ಯ ವೈಖರಿ

ಉತ್ತರ ಪ್ರದೇಶ ಮತ್ತು ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರವನ್ನು  ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರಗಳು  ಯಶಸ್ಸು ಕಂಡಿವೆ. ಇದರ ಹಿಂದಿನ ಶಕ್ತಿ ಮತ್ತ ತಂತ್ರಗಾರಿಕೆ ಹೆಣೆದ ಚಾಣಾಕ್ಷ್ಯ ಅಮಿತ್ ಶಾ ಪ್ರಧಾನಿ ನರೇಂದ್ರ ಮೋದಿ ಅವರ ಸಚಿವ ಸಂಪುಟದಲ್ಲಿ ಪ್ರಭಾವಶಾಲಿ ಸಚಿವರಾಗಿರುವ ಅಮಿತ್ ಶಾ ಅವರಿಗೆ ಸಿಎಎ 2020ರಲ್ಲೂ ಸವಾಲೊಡ್ಡುವ ಸಾಧ್ಯತೆಗಳಿವೆ. ಈ ಎಲ್ಲ ಸವಾಲುಗಳನ್ನು ಅಮಿತ್ ಶಾ ಹೇಗೆ ನಿಭಾಯಿಸುತ್ತಾರೆ ಎಂಬುದೇ ಹೊಸ ವರ್ಷದ   ಕುತೂಹಲ

ಮತ್ತಷ್ಟು ಸುದ್ದಿಗಳು

vertical

Latest News

Weekend With Ramesh; ಸಾಧಕರ ಕುರ್ಚಿಯಲ್ಲಿ ಡಿಕೆ ಶಿವಕುಮಾರ್!

newsics.com ಬೆಂಗಳೂರು: ಖಾಸಗಿವಾಹಿನಿಯಲ್ಲಿ ವೀಕೆಂಡ್ ವಿತ್ ರಮೇಶ್ ಐದನೇ ಸೀಸನ್​ನ ಈ ವಾರದ ಅತಿಥಿಯಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗಮಿಸಲಿದ್ದಾರೆ ಎನ್ನುವ ಗಾಳಿ ಸುದ್ದಿಯೊಂದು ಹಬ್ಬಿದೆ. ಭಾನುವಾರದ ಎಪಿಸೋಡ್...

ತರಬೇತಿ ವಿಮಾನ ತುರ್ತು ಭೂಸ್ಪರ್ಶ; ತಪ್ಪಿದ ಭಾರೀ ಅನಾಹುತ

newsics.com ಬೆಳಗಾವಿ: ತರಬೇತಿ ವಿಮಾನವೊಂದು ತಾಂತ್ರಿಕ ತೊಂದರೆಯಿಂದ  ತುರ್ತು ಭೂಸ್ಪರ್ಶ ಆಗಿದೆ. ಈ ಘಟನೆ ಬೆಳಗಾವಿ ತಾಲೂಕಿನ ಹೊನ್ನಿಹಾಳ ಹೊರವಲಯದಲ್ಲಿ ನಡೆದಿದೆ. ರೆಡ್‌ಬರ್ಡ್  ಸಂಸ್ಥೆಗೆ ಸೇರಿದ VT- RBF ತರಬೇತಿ ವಿಮಾನ ಇದಾಗಿದ್ದು, ಘಟನೆ ನಡೆದ...

ಆಪರೇಷನ್ ಪಠ್ಯ ಪುಸ್ತಕ; ಪಠ್ಯಗಳ ಪರಿಷ್ಕರಿಸ್ತೇವೆಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ

newsics.com ಬೆಂಗಳೂರು:  ಪಠ್ಯ ಪುಸ್ತಕ  ಪರಿಷ್ಕರಣೆ ನಾವು ಮಾಡ್ತೀವಿ. ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಪರಿಷ್ಕರಣೆ ಮಾಡ್ತೀವಿ. ಮಕ್ಕಳ ಮನಸ್ಸಿನಲ್ಲಿ ಕಲ್ಮಶ ತುಂಬುವ ಪಠ್ಯ ಕೈ ಬಿಡ್ತೀವಿ. ಈ ಬಗ್ಗೆ ಸಿಎಂ, ಡಿಸಿಎಂ ಜೊತೆ ಚರ್ಚಿಸಿ...
- Advertisement -
error: Content is protected !!