newsics.com
ಎರ್ನಾಕುಳಂ: ಕೊರೋನಾ ಲಸಿಕೆ ಅಭಿಯಾನ ಕುರಿತಂತೆ ಅಪಪ್ರಚಾರ ಮಾಡಿದ ಆರೋಪದ ಹಿನ್ನೆಲೆಯಲ್ಲಿ ದೇಶ ದ್ರೋಹದ ಪ್ರಕರಣ ಎದುರಿಸುತ್ತಿರುವ ನಟಿ ಅಯಿಷಾ ಸುಲ್ತಾನ , ನಿರೀಕ್ಷಣಾ ಜಾಮೀನು ಕೋರಿ ಕೇರಳ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಇಂದು ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ , ಲಕ್ಷದ್ವೀಪದ ಕವರತ್ತಿ ಪೊಲೀಸರು ತಮ್ಮ ಹೇಳಿಕೆ ದಾಖಲಿಸುವಂತೆ ಸೂಚಿಸಿದೆ.
ಮುಂದಿನ ವಿಚಾರಣೆಯನ್ನು ಕೇರಳ ಹೈಕೋರ್ಟ್ ಜೂನ್ 17ಕ್ಕೆ ಮುಂದೂಡಿದೆ.
ಮೂಲತ: ಲಕ್ಷ ದ್ವೀಪ ನಿವಾಸಿಯಾಗಿರುವ ನಟಿ ಅಯೀಷಾ ಸುಲ್ತಾನ, ಕೊರೋನಾ ಲಸಿಕೆ ಕುರಿತಂತೆ ಅಪಪ್ರಚಾರದಲ್ಲಿ ನಿರತರಾಗಿದ್ದಾರೆ ಎಂದು ಆರೋಪಿಸಲಾಗಿದೆ.