ಕರಿಪುರಂ: 18 ಮಂದಿಯನ್ನು ಬಲಿಪಡೆದುಕೊಂಡ ಕೇರಳದ ಕರಿಪುರಂ ವಿಮಾನ ನಿಲ್ದಾಣಕ್ಕೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ ದೀಪ್ ಸಿಂಗ್ ಪುರಿ ಭೇಟಿ ನೀಡಿದ್ದಾರೆ. ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿದ ಅವರು, ಪರಿಸ್ಥಿತಿಯ ಅವಲೋಕನ ನಡೆಸಿದರು. ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಸಚಿವ ವಿ . ಮುರಳೀಧರನ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ಈ ಮಧ್ಯೆ ವಿಮಾನ ದುರಂತದ ತನಿಖೆ ಬಿರುಸುಪಡೆದುಕೊಂಡಿದೆ. ನತದೃಷ್ಟ ವಿಮಾನದ ಡಿಜಿಟಲ್ ಫ್ಲೈಟ್ ಡಾಟ ರೆಕಾರ್ಡ್ ರ್ ಮತ್ತು ಕಾಕ್ ಪಿಟ್ ವಾಯ್ಸ್ ರೆಕಾರ್ಡ್ ಸಂಗ್ರಹಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ವಿಮಾನ ಲ್ಯಾಡಿಂಗ್ ಆಗುತ್ತಿದ್ದ ಸಂದರ್ಭದಲ್ಲಿ ಪೈಲಟ್ ವಿಮಾನ ನಿಯಂತ್ರಣ ಅಧಿಕಾರಿಗಳ ಜತೆ ನಡೆಸಿದ ಸಂಭಾಷಣೆ ಮಾಹಿತಿ ಇದರಲ್ಲಿ ಸೇರಿದೆ.
ವಿಮಾನ ದುರಂತದಲ್ಲಿ ಗಾಯಗೊಂಡಿರುವ 13 ಮಂದಿಯ ಸ್ಥಿತಿ ಇದೀಗ ಗಂಭೀರವಾಗಿದೆ ಎಂದು ವರದಿಯಾಗಿದೆ.