Saturday, December 2, 2023

ದೆಹಲಿಗೆ ವಾಯು ರಕ್ಷಣಾ ಕವಚ: ಶೀಘ್ರವೇ ಅಸ್ತಿತ್ವಕ್ಕೆ ಬರುವ ಸಾಧ್ಯತೆ

Follow Us

ನವದೆಹಲಿ: ಶತ್ರು ದೇಶಗಳ ಸಂಭಾವ್ಯ ಕ್ಷಿಪಣಿ ಮತ್ತು ಡ್ರೋಣ್ ದಾಳಿಯಿಂದ ನವದೆಹಲಿ ಮತ್ತು ಅತೀ ಗಣ್ಯ ವ್ಯಕ್ತಿಗಳನ್ನು ರಕ್ಷಿಸುವ ಸಂಬಂಧ ಜಾರಿಗೆ ತರಲಾಗುವ  ವಾಯು ರಕ್ಷಾ ಕವಚ ಸದ್ಯದಲ್ಲಿಯೇ ಕಾರ್ಯಾರಂಭ ಮಾಡಲಿದೆ. ಸಂಯುಕ್ತ ವಾಯು ಭದ್ರತಾ ವ್ಯವಸ್ಥೆ ಎಂದು ಇದಕ್ಕೆ ಹೆಸರಿಡಲಾಗಿದೆ. ಇದು ಅತ್ಯಾಧುನಿಕ ಕ್ಷಿಪಣಿ  ನಿರೋಧಕ ವ್ಯವಸ್ಥೆಯಾಗಿದೆ.  ಕ್ರೂಸ್ ಕ್ಷಿಪಣಿ,  ಡ್ರೋಣ್ ಸೇರಿದಂತೆ ಶತ್ರು ರಾಷ್ಟ್ರಗಳ ಕ್ಷಿಪಣಿ ದಾಳಿಯಿಂದ  ದೆಹಲಿ ನಾಗರಿಕರನ್ನು ಇದು ಸಂರಕ್ಷಿಸಲಿದೆ. ಅಮೆರಿಕದೊಂದಿಗೆ ಈ ಸಂಬಂಧ ಅಂತಿಮ ಮಾತುಕತೆ ನಡೆದಿದ್ದು, ಶೀಘ್ರವೇ  ಇದನ್ನು ಅಳವಡಿಸುವ ಸಾಧ್ಯತೆಗಳಿವೆ.  ದೆಹಲಿ ಏರಿಯಾ ರಕ್ಷಣಾ ಯೋಜನೆಯಡಿ ಪ್ರಸಕ್ತ  ರಷ್ಯಾದ ಭದ್ರತಾ ವ್ಯವಸ್ಥೆ ಬದಲಾಗಿ ಈ ನೂತನ ರಕ್ಷಣಾ ಕವಚ ಅಸ್ತಿತ್ವಕ್ಕೆ ಬರಲಿದೆ.

ಮತ್ತಷ್ಟು ಸುದ್ದಿಗಳು

vertical

Latest News

ನೀವು ಭಯಗೊಂಡಾಗ ದೇಹದಲ್ಲಿ ಏನಾಗುತ್ತದೆ ಗೊತ್ತಾ?

ಭಯವು ಸಾಮಾನ್ಯ ಭಾವನೆಯಾಗಿದೆ. ಪ್ರತಿಯೊಬ್ಬರೂ ಒಂದಲ್ಲ ಒಂದು ಹಂತದಲ್ಲಿ ಹೆದರುತ್ತಾರೆ. ಆದರೆ ಕೆಲವರು ಸಣ್ಣ ವಿಷಯಗಳಿಗೂ ತುಂಬಾ ಹೆದರುತ್ತಾರೆ. ಅವರು ಯಾಕೆ ಹೆದರುತ್ತಾರೆ ಎಂದು ಅವರಿಗೆ ತಿಳಿದಿಲ್ಲ. ಕೆಲವರು ಹಾರರ್ ಸಿನಿಮಾಗಳನ್ನು...

ಹೂವು ಬಿಡಿಸಲು ಹೋಗಿದ್ದಾಗ ವಿದ್ಯುತ್ ತಂತಿ ತುಳಿದು ಮಹಿಳೆ ಸಾವು

newsics.com ದಾವಣಗೆರೆ: ಪಂಪ್​ಸೆಟ್​​ಗೆ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ  ಬಸವರಾಜಪುರದಲ್ಲಿ ನಡೆದಿದೆ. ಅಲಿಬಾಯಿ(62) ಮೃತ ರ್ದುದೈವಿ. ಹೂವು ಬಿಡಿಸಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬಸವಪಟ್ಟಣ...

ಜೈ ಶ್ರೀರಾಮ್‌ ಹೇಳುವಂತೆ ಗಡ್ಡಕ್ಕೆ ಬೆಂಕಿ ಹಚ್ಚಿ ವೃದ್ಧನ ಮೇಲೆ ಹಲ್ಲೆ

newsics.com ಕೊಪ್ಪಳ :  65 ವರ್ಷದ ಅಂಧ ಮುಸ್ಲಿಂ ವೃದ್ಧನಿಗೆ ಇಬ್ಬರು ಅನಾಮಿಕ ವ್ಯಕ್ತಿಗಳು ಗಂಗಾವತಿ ಟೌನ್‌ನಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದೆ. ಗಂಗಾವತಿಯಲ್ಲಿ ಒಂದು ಕಪ್‌ ಚಹಾ ಕುಡಿದು ಆಟೋರಿಕ್ಷಾಕ್ಕೆ ಕಾಯುತ್ತಿರುವಾಗ ಬೈಕ್‌ನಲ್ಲಿ ಇಬ್ಬರು...
- Advertisement -
error: Content is protected !!